AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಹರಿಹರದಲ್ಲಿ ತುಂಗಭದ್ರಾ ಆರತಿ ಮಂಟಪಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ

ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ಹರಿಹರ ಪುಣ್ಯಕ್ಷೇತ್ರ ದೇಶದ ಗಮನ ಸೆಳೆಯಲಿದೆ. ಗಂಗಾ ಆರತಿಯಂತೆ ತುಂಗಭದ್ರಾ ಆರತಿ ಆದಷ್ಟು ಬೇಗ ಆರಂಭ ಆಗಲಿದೆ.

ದಾವಣಗೆರೆ ಹರಿಹರದಲ್ಲಿ ತುಂಗಭದ್ರಾ ಆರತಿ ಮಂಟಪಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ
ಆರತಿ ಮಂಟಪಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದರು.
TV9 Web
| Edited By: |

Updated on:Feb 20, 2022 | 11:37 AM

Share

ದಾವಣಗೆರೆ: ಉತ್ತರ ಭಾರತದ ಗಮನ ಸೆಳೆಯುವ ತುಂಗಭದ್ರಾ ಆರತಿ ಮಂಟಪ (Arathi Mantapa) ನಿರ್ಮಾಣಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಶಂಕುಸ್ಥಾಪನೆ ನೆರವೇರಿಸಿದರು. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಸುಮಾರು 30 ಕೋಟಿ ವೆಚ್ಚದಲ್ಲಿ ವಾರಾಣಸಿಯ ಗಂಗಾರತಿ ಮಾದರಿಯಲ್ಲಿ ತುಂಗಭದ್ರಾ ಆರತಿ ಮಂಟಪ ನಿರ್ಮಾಣವಾಗಲಿದ್ದು, ತುಂಗಭದ್ರಾ 108 ಯೋಗ ಮಂಟಪಗಳ ನಿರ್ಮಾಣಕ್ಕೆ ಇಂದು ಸಿಎಂ ಶಂಕುಸ್ಥಾಪನೆ ಮಾಡಿದರು. ಈ ವೇಳೆ ಮುಖ್ಯಮಂತ್ರಿಗೆ ಸಚಿವರಾದ ನಿರಾಣಿ, ಭೈರತಿ ಬಸವರಾಜ್, ಸಂಸದ ಸಿದ್ದೇಶ್ವರ, ಶಾಸಕ ರಾಮಪ್ಪ, ವಚನಾನಂದಶ್ರೀ ಸಾಥ್ ನೀಡಿದರು.

ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ಹರಿಹರ ಪುಣ್ಯಕ್ಷೇತ್ರ ದೇಶದ ಗಮನ ಸೆಳೆಯಲಿದೆ. ಗಂಗಾ ಆರತಿಯಂತೆ ತುಂಗಭದ್ರಾ ಆರತಿ ಆದಷ್ಟು ಬೇಗ ಆರಂಭ ಆಗಲಿದೆ. ತುಂಗಭದ್ರಾ ಆರತಿ ಹಿನ್ನೆಲೆ ಈಗಾಲೇ ಕಾಮಗಾರಿಗೆ ಶಂಕು ಸ್ಥಾಪನೆ ಮಾಡಲಾಗಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ತುಂಗಭದ್ರಾ ನದಿ ದಡದಲ್ಲಿ ವಾಯು ವಿವಾರಕ್ಕೆ ಅನುಕೂಲ ಆಗುವಂತೆ ಮಾಡಲಾಗುವುದು. ಇಲ್ಲಿ 108 ಮಂಟಪಗಳ ನಿರ್ಮಾಣ ಆಗಲಿವೆ ಎಂದು ತಿಳಿಸಿದರು.

ಪ್ರಧಾನಿ ನಮಗೆ ಸ್ಫೂರ್ತಿ- ವಚನಾನಂದ ಸ್ವಾಮೀಜಿ: ಭಾರತ ಹಿಂದೆ ಹಾವಾಡಿಗರ ದೇಶವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಬಂದ ಮೇಲೆ ಹಿಂದು ಸನಾತನ ಧರ್ಮ ಪ್ರಚಾರಕ್ಕೆ ಬಂದಿದೆ ಅಂತ ತುಂಗಭದ್ರಾ ಆರುತಿ ಸಮಾರಂಭದಲ್ಲಿ ಪಂಚಮಸಾಲಿ ಗುರುಪೀಠ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನಿರ್ಧಾರದಿಂದ ಗಂಗಾ ನದಿ ಶುದ್ಧವಾಗಿದೆ‌. ಈಗ ಗಂಗೆ ಪರಿಶುದ್ಧರಾಗಿದ್ದಾಳೆ. ಪ್ರಧಾನಿ ನರೇಂದ್ರ ಮೋದಿ ನಮಗೆ ಒಂದು ರೀತಿಯಲ್ಲಿ ಸ್ಫೂರ್ತಿ. ವಿದೇಶದಲ್ಲಿಗಳ ಭಾರತವನ್ನ ನೋಡುವ ದೃಷ್ಟಿ ಬದಲಾಗಿದೆ‌. ಇದಕ್ಕೆ ಕಾರಣ ನರೇಂದ್ರ ಮೋದಿ. ಮೋದಿ ಅವರ ಭವ್ಯ ದಿವ್ಯ ಎಂದು ಒಂಬತ್ತು ನೂರು ಕೋಟಿ ರೂಪಾಯಿ ವೆಚ್ಚ ಮಾಡಿದ್ದಾರೆ. ಇದೇ ರೀತಿ ಹರಿಹರ ಅಭಿವೃದ್ಧಿ ಪಡಿಸಬೇಕು ಅಂತ ವಚನಾನಂದ ಸ್ವಾಮೀಜಿ ಸಿಎಂಗೆ ಆಗ್ರಹಿಸಿದರು.

ಇದನ್ನೂ ಓದಿ

ಈ ವೃತ್ತದಲ್ಲಿ ಎಷ್ಟು ಸಂಖ್ಯೆ ಕಾಣುತ್ತಿದೆ? ಉತ್ತರ ಹುಡುಕಲು ತಲೆಕೆಡಿಸಿಕೊಂಡ ನೆಟ್ಟಿಗರು

ದೀಪಿಕಾ ನಟನೆಯ ‘ಗೆಹರಾಯಿಯಾ’ ಚಿತ್ರ ನೋಡಿ ಮುಲಾಜಿಲ್ಲದೇ ಜಾಡಿಸಿದ ಭಾಸ್ಕರ್​ ರಾವ್​

Published On - 11:33 am, Sun, 20 February 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್