AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮತ್ತೆ ಅಹಿಂದ ಕಡೆಗೆ; ಜಾತಿಗಣತಿ ಮುಂದಿಟ್ಟು ಕೊಂಡು ಹಿಂದುಳಿದ ಜಾತಿಗಳ ಸೆಳೆಯಲು ಮಾಸ್ಟರ್ ಪ್ಲಾನ್

ನಗರದ ಸಂಗೊಳ್ಳಿ ರಾಯಣ್ಣ ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುವ ಹೋರಾಟದಲ್ಲಿ ನಾಳೆ ಪಾಲ್ಗೊಳ್ಳಲಿದ್ದಾರೆ.

ಸಿದ್ದರಾಮಯ್ಯ ಮತ್ತೆ ಅಹಿಂದ ಕಡೆಗೆ; ಜಾತಿಗಣತಿ ಮುಂದಿಟ್ಟು ಕೊಂಡು ಹಿಂದುಳಿದ ಜಾತಿಗಳ ಸೆಳೆಯಲು ಮಾಸ್ಟರ್ ಪ್ಲಾನ್
ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್ ಧರಣಿ
TV9 Web
| Edited By: |

Updated on:Sep 28, 2021 | 1:14 PM

Share

ದಾವಣಗೆರೆ: ಅಹಿಂದ ಓಲೈಕೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬುವುದು ಈಗ ಸ್ಪಷ್ಟವಾಗುತ್ತಿದೆ. ಇದಕ್ಕೆ ವೇದಿಕೆ ಆಗಲಿದೆ ಬೆಣ್ಣೆ ನಗರಿ ದಾವಣಗೆರೆ. ಕಾರಣ ದಾವಣಗೆರೆಯಲ್ಲಿ ನಾಳೆ (ಸೆಪ್ಟೆಂಬರ್ 29) ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್ ಧರಣಿ ನಡೆಯಲಿದೆ. ಈ ಹಿಂದೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್. ಕಾಂತರಾಜ್ ನೇತ್ರತ್ವದಲ್ಲಿ, ಜಾತಿವಾರು ಸಮೀಕ್ಷೆ ಸಿದ್ದಪಡಿಸಿದ ಜಾತಿಗಣತಿ ವರದಿ ಬಿಡುಗಡೆಗೆ ಆಗ್ರಹಿಸಿ ಬೃಹತ್ ಹೋರಾಟ ನಡೆಯಲಿದೆ. ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಶ್ರಯದಲ್ಲಿ ಈ ಹೋರಾಟ ಆರಂಭವಾಗಲಿದೆ.

ಈಗಾಗಲೇ ರಾಜ್ಯದಲ್ಲಿ ಹೆಚ್ಚು ಚರ್ಚೆ ಆಗುತ್ತಿರುವ ಜಾತಿಗಣತಿ ಬಗ್ಗೆ ಸಿದ್ದರಾಮಯ್ಯ ಅಧಿಕೃತವಾಗಿ ನಾಳೆ ದಾವಣಗೆರೆಯಲ್ಲಿ ಹೋರಾಟ ನಡೆಸಲಿದ್ದಾರೆ. ಇಂತಹ ಮಹತ್ವದ ಹೋರಾಟಕ್ಕೆ ದಾವಣಗೆರೆಯನ್ನು ಆಯ್ಕೆ ಮಾಡಿಕೊಂಡಿದ್ದು ವಿಶೇಷ ಮತ್ತು ಈ ಆಯ್ಕೆಯ ಹಿಂದೆ ಇರುವ ಕಾರಣಗಳ ಬಗ್ಗೆಯೂ ಸದ್ಯ ಚರ್ಚೆಯಾಗುತ್ತಿದೆ.

ನಗರದ ಸಂಗೊಳ್ಳಿ ರಾಯಣ್ಣ ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುವ ಹೋರಾಟದಲ್ಲಿ ನಾಳೆ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮೊದಲು ಬೆಲೆ ಎರಿಕೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ ಬೈಕ್ ಮೆರವಣಿಗೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಬೆಲೆ ಏರಿಕೆ ವಿರೋಧಿಸಿ ನಡೆಯುವ ಈ ಹೋರಾಟ ಜಿಲ್ಲಾ ಕಿಸಾನ್ ಕಾಂಗ್ರೆಸ್ ನೇತ್ರತ್ವದಲ್ಲಿ ನಡೆಯಲಿದೆ.

ಈ ಹಿಂದೆ ಸಿಎಂ ಆಗುವ ಮೊದಲು ಸಿದ್ದರಾಮಯ್ಯ ದಾವಣಗೆರೆಯಲ್ಲಿ ಅಹಿಂದ ಸಮಾವೇಶ ನಡೆಸಿದ್ದರು. ವಿಧಾನಸೌಧ ಚುನಾವಣೆಗೆ ಒಂದೂವರೆ ವರ್ಷ ಬಾಕೀ ಇರುವಾಗಲೇ ಮತ್ತೆ ಈಗ ದಾವಣಗೆರೆಯಲ್ಲಿ ಇಂತಹ ಹೋರಾಟ ಆರಂಭ ಮಾಡುತ್ತಿದ್ದಾರೆ. ಇದರ ಹಿಂದೆ ಯಾವ ಉದ್ದೇಶ ಇದೆ ಎನ್ನುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿರುವ ವಿಷಯ.

ಎಚ್.ಎಂ.ರೇವಣ್ಣ, ವಿ.ಆರ್.ಸುದರ್ಶನ್, ಕೆ.ರಮೇಶ್ ಕುಮಾರ್, ವಿ.ಎಸ್.ಉಗ್ರಪ್ಪ, ಲಕ್ಷ್ಮಿ ನಾರಾಯಣ್, ಸಿ.ಎಸ್.ದ್ವಾರಕನಾಥ್ ಇನ್ನಿತರರು ನಾಳೆ ಸಿದ್ದರಾಮಯ್ಯನವರಿಗೆ ಸಾಥ್ ನೀಡಲಿದ್ದಾರೆ. ಅಲ್ಲದೇ ಪ್ರತಿಭಟನೆಯಲ್ಲಿ ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯ ತಲೆಯಲ್ಲಿ ಸಿಕ್ಕಿಕೊಂಡಿದ್ದ ಹೂವಿನ ಪಕಳೆಯನ್ನು ಮಹಿಳೆಯೊಬ್ಬರು ತೆಗೆದಿದ್ದು, ಕಾಂಗೈ ಧುರೀಣ ಕ್ರಾಪು ಸರಿಮಾಡಿಕೊಂಡಿದ್ದು!

KSRTC ನೌಕರ ನೀವೆ ನಮ್ಮ ಪಾಲಿಗೆ ಕೆಎಸ್ಆರ್​ಟಿಸಿ ಎಂಡಿ ಎಂದು ಸಿದ್ದರಾಮಯ್ಯಗೆ ಗೋಗರೆದಿದ್ದು ಏಕೆ?

(Congress Leader Siddaramaiah to attend Davangere protest tomorrow)

Published On - 1:06 pm, Tue, 28 September 21

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​