AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮತ್ತೆ ಅಹಿಂದ ಕಡೆಗೆ; ಜಾತಿಗಣತಿ ಮುಂದಿಟ್ಟು ಕೊಂಡು ಹಿಂದುಳಿದ ಜಾತಿಗಳ ಸೆಳೆಯಲು ಮಾಸ್ಟರ್ ಪ್ಲಾನ್

ನಗರದ ಸಂಗೊಳ್ಳಿ ರಾಯಣ್ಣ ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುವ ಹೋರಾಟದಲ್ಲಿ ನಾಳೆ ಪಾಲ್ಗೊಳ್ಳಲಿದ್ದಾರೆ.

ಸಿದ್ದರಾಮಯ್ಯ ಮತ್ತೆ ಅಹಿಂದ ಕಡೆಗೆ; ಜಾತಿಗಣತಿ ಮುಂದಿಟ್ಟು ಕೊಂಡು ಹಿಂದುಳಿದ ಜಾತಿಗಳ ಸೆಳೆಯಲು ಮಾಸ್ಟರ್ ಪ್ಲಾನ್
ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್ ಧರಣಿ
TV9 Web
| Edited By: |

Updated on:Sep 28, 2021 | 1:14 PM

Share

ದಾವಣಗೆರೆ: ಅಹಿಂದ ಓಲೈಕೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬುವುದು ಈಗ ಸ್ಪಷ್ಟವಾಗುತ್ತಿದೆ. ಇದಕ್ಕೆ ವೇದಿಕೆ ಆಗಲಿದೆ ಬೆಣ್ಣೆ ನಗರಿ ದಾವಣಗೆರೆ. ಕಾರಣ ದಾವಣಗೆರೆಯಲ್ಲಿ ನಾಳೆ (ಸೆಪ್ಟೆಂಬರ್ 29) ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್ ಧರಣಿ ನಡೆಯಲಿದೆ. ಈ ಹಿಂದೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್. ಕಾಂತರಾಜ್ ನೇತ್ರತ್ವದಲ್ಲಿ, ಜಾತಿವಾರು ಸಮೀಕ್ಷೆ ಸಿದ್ದಪಡಿಸಿದ ಜಾತಿಗಣತಿ ವರದಿ ಬಿಡುಗಡೆಗೆ ಆಗ್ರಹಿಸಿ ಬೃಹತ್ ಹೋರಾಟ ನಡೆಯಲಿದೆ. ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಶ್ರಯದಲ್ಲಿ ಈ ಹೋರಾಟ ಆರಂಭವಾಗಲಿದೆ.

ಈಗಾಗಲೇ ರಾಜ್ಯದಲ್ಲಿ ಹೆಚ್ಚು ಚರ್ಚೆ ಆಗುತ್ತಿರುವ ಜಾತಿಗಣತಿ ಬಗ್ಗೆ ಸಿದ್ದರಾಮಯ್ಯ ಅಧಿಕೃತವಾಗಿ ನಾಳೆ ದಾವಣಗೆರೆಯಲ್ಲಿ ಹೋರಾಟ ನಡೆಸಲಿದ್ದಾರೆ. ಇಂತಹ ಮಹತ್ವದ ಹೋರಾಟಕ್ಕೆ ದಾವಣಗೆರೆಯನ್ನು ಆಯ್ಕೆ ಮಾಡಿಕೊಂಡಿದ್ದು ವಿಶೇಷ ಮತ್ತು ಈ ಆಯ್ಕೆಯ ಹಿಂದೆ ಇರುವ ಕಾರಣಗಳ ಬಗ್ಗೆಯೂ ಸದ್ಯ ಚರ್ಚೆಯಾಗುತ್ತಿದೆ.

ನಗರದ ಸಂಗೊಳ್ಳಿ ರಾಯಣ್ಣ ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುವ ಹೋರಾಟದಲ್ಲಿ ನಾಳೆ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮೊದಲು ಬೆಲೆ ಎರಿಕೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ ಬೈಕ್ ಮೆರವಣಿಗೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಬೆಲೆ ಏರಿಕೆ ವಿರೋಧಿಸಿ ನಡೆಯುವ ಈ ಹೋರಾಟ ಜಿಲ್ಲಾ ಕಿಸಾನ್ ಕಾಂಗ್ರೆಸ್ ನೇತ್ರತ್ವದಲ್ಲಿ ನಡೆಯಲಿದೆ.

ಈ ಹಿಂದೆ ಸಿಎಂ ಆಗುವ ಮೊದಲು ಸಿದ್ದರಾಮಯ್ಯ ದಾವಣಗೆರೆಯಲ್ಲಿ ಅಹಿಂದ ಸಮಾವೇಶ ನಡೆಸಿದ್ದರು. ವಿಧಾನಸೌಧ ಚುನಾವಣೆಗೆ ಒಂದೂವರೆ ವರ್ಷ ಬಾಕೀ ಇರುವಾಗಲೇ ಮತ್ತೆ ಈಗ ದಾವಣಗೆರೆಯಲ್ಲಿ ಇಂತಹ ಹೋರಾಟ ಆರಂಭ ಮಾಡುತ್ತಿದ್ದಾರೆ. ಇದರ ಹಿಂದೆ ಯಾವ ಉದ್ದೇಶ ಇದೆ ಎನ್ನುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿರುವ ವಿಷಯ.

ಎಚ್.ಎಂ.ರೇವಣ್ಣ, ವಿ.ಆರ್.ಸುದರ್ಶನ್, ಕೆ.ರಮೇಶ್ ಕುಮಾರ್, ವಿ.ಎಸ್.ಉಗ್ರಪ್ಪ, ಲಕ್ಷ್ಮಿ ನಾರಾಯಣ್, ಸಿ.ಎಸ್.ದ್ವಾರಕನಾಥ್ ಇನ್ನಿತರರು ನಾಳೆ ಸಿದ್ದರಾಮಯ್ಯನವರಿಗೆ ಸಾಥ್ ನೀಡಲಿದ್ದಾರೆ. ಅಲ್ಲದೇ ಪ್ರತಿಭಟನೆಯಲ್ಲಿ ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯ ತಲೆಯಲ್ಲಿ ಸಿಕ್ಕಿಕೊಂಡಿದ್ದ ಹೂವಿನ ಪಕಳೆಯನ್ನು ಮಹಿಳೆಯೊಬ್ಬರು ತೆಗೆದಿದ್ದು, ಕಾಂಗೈ ಧುರೀಣ ಕ್ರಾಪು ಸರಿಮಾಡಿಕೊಂಡಿದ್ದು!

KSRTC ನೌಕರ ನೀವೆ ನಮ್ಮ ಪಾಲಿಗೆ ಕೆಎಸ್ಆರ್​ಟಿಸಿ ಎಂಡಿ ಎಂದು ಸಿದ್ದರಾಮಯ್ಯಗೆ ಗೋಗರೆದಿದ್ದು ಏಕೆ?

(Congress Leader Siddaramaiah to attend Davangere protest tomorrow)

Published On - 1:06 pm, Tue, 28 September 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್