AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇಪದೆ ಪೆಟ್ರೋಲ್ ಬೆಲೆ ಬಗ್ಗೆ ಪ್ರಶ್ನಿಸಬೇಡಿ ಎಂದ ಜಿಎಂ ಸಿದ್ದೇಶ್ವರ್​ಗೆ ಪ್ರತಿಭಟನೆ ಬಿಸಿ; ಉಚಿತ ಪೆಟ್ರೋಲ್ ಕೊಡಲು ಆಗ್ರಹ

Petrol Price Hike: ಜಿ.ಎಂ ಸಿದ್ದೇಶ್ವರ್, ಪದೇಪದೆ ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ನನ್ನನ್ನು ಪ್ರಶ್ನಿಸಬೇಡಿ ಎಂದು ಹೇಳಿದ್ದರು. ನಿಮಗೆ ಪೆಟ್ರೋಲ್ ಬೇಕಿದ್ದರೆ ಕೇಳಿ ನಾನು ಹಾಕಿಸ್ತೇನೆ ಎಂದು ಹೇಳಿಕೆ ನೀಡಿದ್ದರು. ಹೀಗಾಗಿ ಉಚಿತವಾಗಿ ಪೆಟ್ರೋಲ್ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಈಗ ಆಗ್ರಹಿಸಿದ್ದಾರೆ.

ಪದೇಪದೆ ಪೆಟ್ರೋಲ್ ಬೆಲೆ ಬಗ್ಗೆ ಪ್ರಶ್ನಿಸಬೇಡಿ ಎಂದ ಜಿಎಂ ಸಿದ್ದೇಶ್ವರ್​ಗೆ ಪ್ರತಿಭಟನೆ ಬಿಸಿ; ಉಚಿತ ಪೆಟ್ರೋಲ್ ಕೊಡಲು ಆಗ್ರಹ
ಯುವ ಕಾಂಗ್ರೆಸ್ ಪ್ರತಿಭಟನೆ
TV9 Web
| Edited By: |

Updated on:Aug 11, 2021 | 6:47 PM

Share

ದಾವಣಗೆರೆ: ಜಿಲ್ಲೆಯ ಜನರಿಗೆ ಉಚಿತವಾಗಿ ಪೆಟ್ರೋಲ್ ಕೊಡಿ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹ ವ್ಯಕ್ತಪಡಿಸಿದ್ದಾರೆ. ಜಿ.ಎಂ. ಸಿದ್ದೇಶ್ವರ್ ಕಚೇರಿಯ ಬಳಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ದಾವಣಗೆರೆಯ ಪಿಬಿ ರಸ್ತೆ ಬಳಿ ಇರುವ ಸಿದ್ದೇಶ್ವರ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೆಟ್ರೋಲ್ ನೀಡುವಂತೆ ಆಗ್ರಹಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಉಚಿತವಾಗಿ ಲಸಿಕೆ ಕೊಡುತ್ತಿದ್ದಾರೆ. ಹೀಗಾಗಿ ಸಿದ್ದೇಶ್ವರ್ ಉಚಿತವಾಗಿ ಪೆಟ್ರೋಲ್ ಕೊಡಬೇಕು ಎಂದು ಹೇಳಿದ್ದಾರೆ.

ಈ ಹಿಂದೆ ಪೆಟ್ರೋಲ್ ಏರಿಕೆ ಬಗ್ಗೆ ಸಿದ್ದೇಶ್ವರ್‌ಗೆ ಪ್ರಶ್ನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿ.ಎಂ ಸಿದ್ದೇಶ್ವರ್, ಪದೇಪದೆ ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ನನ್ನನ್ನು ಪ್ರಶ್ನಿಸಬೇಡಿ ಎಂದು ಹೇಳಿದ್ದರು. ನಿಮಗೆ ಪೆಟ್ರೋಲ್ ಬೇಕಿದ್ದರೆ ಕೇಳಿ ನಾನು ಹಾಕಿಸ್ತೇನೆ ಎಂದು ಹೇಳಿಕೆ ನೀಡಿದ್ದರು. ಹೀಗಾಗಿ ಉಚಿತವಾಗಿ ಪೆಟ್ರೋಲ್ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಈಗ ಆಗ್ರಹಿಸಿದ್ದಾರೆ.

ಪದೇಪದೆ ಪೆಟ್ರೋಲ್‌ ದರ ಏರಿಕೆಯ ಬಗ್ಗೆ ಪ್ರಶ್ನೆ ಕೇಳಿ ಇಕ್ಕಟ್ಟಿಗೆ ಸಿಲುಕಿಸಬೇಡಿ ಎಂದು ಜಿ.ಎಂ.ಸಿದ್ದೇಶ್ವರ್ ಮಾಧ್ಯಮದವರಿಗೆ ಕೈಮುಗಿದು ಮನವಿ ಮಾಡಿದ್ದರು. ಪೆಟ್ರೋಲ್ ಬೆಲೆ ಅಂತರಾಷ್ಟ್ರೀಯ ವಿಚಾರ. ಸಾರ್ವಜನಿಕರು ಪೆಟ್ರೋಲ್ ಬೆಲೆ ಹೆಚ್ಚಾಗಿದೆ ಎಂದು ಆಕ್ರೋಶಗೊಂಡಿಲ್ಲ. ಪೆಟ್ರೋಲ್ ಬೆಲೆ ಹೆಚ್ಚಳದಿಂದ (Petrol Price Hike) ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ. ಕೊರೊನಾ ಸಂಕಷ್ಟ ಕಾಲ ಮುಗಿದ ಮೇಲೆ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಕಡಿಮೆ ಮಾಡುತ್ತದೆ. ಬರೀ ಪೆಟ್ರೋಲ್ ಬಗ್ಗೆ ಕೇಳಿ ನನ್ನ ಹೇಳಿಕೆ ವೈರಲ್ ಆಗುವಂತೆ ಮಾಡಬೇಡಿ. ನಿಮಗೆ ಯಾರಿಗಾದ್ರು ಪೆಟ್ರೋಲ್ ಕಷ್ಟ ಇದ್ರೆ ವೈಯಕ್ತಿಕವಾಗಿ ನಾನೇ ಕೊಡಿಬಹುದು ಎಂದು ಅವರು ವಿನಂತಿಯನ್ನೂ ಸಹ ಮಾಡಿಕೊಂಡಿದ್ದರು. ಈ ವಿಚಾರವಾಗಿ ಇಂದು (ಆಗಸ್ಟ್ 11) ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

ಇದನ್ನೂ ಓದಿ: ಪದೇಪದೇ ಪೆಟ್ರೋಲ್ ಬೆಲೆ ಹೆಚ್ಚಳದ ಪ್ರಶ್ನೆ ಕೇಳಿ ಇಕ್ಕಟ್ಟಿಗೆ ಸಿಲುಕಿಸಬೇಡಿ, ನಿಮಗೆ ಪೆಟ್ರೋಲ್ ಬೇಕಾದರೆ ನಾನೇ ಕೊಡಿಸುವೆ: ಸಂಸದ ಜಿ ಎಂ ಸಿದ್ದೇಶ್ವರ್

ನೀರಜ್ ಹೆಸರಿನ ಎಲ್ಲ ಗ್ರಾಹಕರ ವಾಹನಗಳಿಗೆ ಎರಡು ದಿನ ಉಚಿತ ಪೆಟ್ರೋಲ್ ತುಂಬಿಸಿದ ಗುಜರಾತಿನ ಪ್ರೆಟ್ರೋಲ್ ಬಂಕಿನ ಮಾಲೀಕ!

(Congress Workers orders to give Free Petrol to MP GM Siddheshwar at Davanagere)

Published On - 6:31 pm, Wed, 11 August 21

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ