AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Last rites to coronavirus: ಕೊರೊನಾ ಕಾಟ -ಗ್ರಾಮಸ್ಥರಿಂದ ಅಹೋರಾತ್ರಿ ಭಜನೆ, ಕೊರೊನಾ ಮೂರ್ತಿಗೆ ಶವ ಸಂಸ್ಕಾರ

ಗ್ರಾಮೀಣ ಭಾಗದ ಜನ ತಮ್ಮದೇ ಆದ ರೀತಿಯಲ್ಲಿ ಕೊರೊನಾ ಆತಂಕದಿಂದ ಪಾರಾಗಲು ನಾನಾ ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಂತಹ ಒಂದು ಪ್ರಯತ್ನ ಸೋಮವಾರ ರಾತ್ರಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ನೆರವೇರಿದೆ.

Last rites to coronavirus: ಕೊರೊನಾ ಕಾಟ -ಗ್ರಾಮಸ್ಥರಿಂದ ಅಹೋರಾತ್ರಿ ಭಜನೆ, ಕೊರೊನಾ ಮೂರ್ತಿಗೆ ಶವ ಸಂಸ್ಕಾರ
ಕೊರೊನಾ ಕಾಟ: ಗ್ರಾಮಸ್ಥರಿಂದ ಅಹೋರಾತ್ರಿ ಭಜನೆ, ಕೊರೊನಾ ಮೂರ್ತಿಗೆ ಶವ ಸಂಸ್ಕಾರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 05, 2022 | 7:42 AM

ದಾವಣಗೆರೆ: ಕೊರೊನಾ ಪೆಡಂಭೂತ ಮತ್ತೊಮ್ಮೆ ನಾಡನ್ನು ಬಾಧಿಸಲು ಸಜ್ಜಾದಂತಿದೆ. ಕೊರೊನಾ ಕ್ರಿಮಿಯನ್ನು ಹೇಗಾದರೂ ಮಾಡಿ ಕಟ್ಟಿಹಾಕಲು ಸರ್ಕಾರ ಸಹ ನಿನ್ನೆಯಷ್ಟೇ ಸಾಕಷ್ಟು ಬಿಗಿ ಕ್ರಮಗಳನ್ನು ಘೋಷಿಸಿದೆ. ಈ ಹಿಂದಿನ ಅನುಭವಗಳನ್ನು ಬೆನ್ನಿಗೆ ಕಟ್ಟಿಕೊಂಡು ಶತಾಯಗತಾಯ ಅದನ್ನು ಆರಂಭದಲ್ಲಿಯೇ ಚಿವುಟಿಹಾಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಸಜ್ಜಾಗಿದೆ. ಈ ಮಧ್ಯೆ, ಗ್ರಾಮೀಣ ಭಾಗದ ಜನ ತಮ್ಮದೇ ಆದ ರೀತಿಯಲ್ಲಿ ಕೊರೊನಾ ಆತಂಕದಿಂದ ಪಾರಾಗಲು ನಾನಾ ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಂತಹ ಒಂದು ಪ್ರಯತ್ನ ಸೋಮವಾರ ರಾತ್ರಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ನೆರವೇರಿದೆ.

ಹರಪನಹಳ್ಳಿ ತಾಲೂಕಿನ ಮತ್ತಿಹಳ್ಳಿ ಗ್ರಾಮಸ್ಥರು ಕೊರೊನಾ ನಿಯಂತ್ರಣಕ್ಕೆ ಮೊದಲು ಕೊರೊನಾ ಮೂರ್ತಿಯೊಂದನ್ನು ಸಿದ್ಧಪಡಿಸಿದ್ದಾರೆ. ಆ ನಂತರ ಕೊರೊನಾ ಮೂರ್ತಿಯ ಎದುರು ಅಹೋರಾತ್ರಿ ಭಜನೆ ಮಾಡಿದ್ದಾರೆ. ಮತ್ತಿಹಳ್ಳಿ ಗ್ರಾಮದ ಕಾಳಿಕಾಂಭಿಕಾ ದೇವಿ ಪುಣ್ಯಕ್ಷೇತ್ರದಲ್ಲಿ ಭಜನೆ ನಂತರ, ಮೆರವಣಿಗೆ ಮೂಲಕ‌‌ ಕೊರೊನಾ ಮೂರ್ತಿಯ ಶವ ಸಂಸ್ಕಾರವನ್ನೂ ನೆರವೇರಿಸಿದ್ದಾರೆ. ಮತ್ತಿಹಳ್ಳಿಯಲ್ಲಿ ಭಜನೆ ಮಾಡಿ ಕೊರೊನಾ ಮೂರ್ತಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ ಸ್ಥಳೀಯರು. ಕಂಚಿಕೆರೆ ಕ್ಷೇತ್ರದ ಬಸವರಾಜ್ ಗುರೂಜಿ ಪೂಜೆಯ ನೇತೃತ್ವ ವಹಿಸಿದ್ದರು.

Also Read: Karnataka Weekend Curfew: ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ; ಬೆಂಗಳೂರಿನಲ್ಲಿ 10, 12ನೇ ತರಗತಿಗೆ ಮಾತ್ರ ಆಫ್​ಲೈನ್ ಕ್ಲಾಸ್

Published On - 7:39 am, Wed, 5 January 22

ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ