AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು: ಸಾವಿನಲ್ಲೂ ಒಂದಾದ ದಂಪತಿ

ಚನ್ನಗಿರಿ ತಾಲೂಕಿನ ದೇವರಹಳ್ಳಿಯಲ್ಲಿ ಒಂದು ದುರಂತ ಘಟನೆ ನಡೆದಿದೆ. 65 ವರ್ಷದ ಕಸ್ತೂರಿ ರಂಗಪ್ಪ ಅವರು ಪಡಿತರ ಪಡೆಯಲು ಹೋಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಸುದ್ದಿ ಕೇಳಿ ಅವರ ಪತ್ನಿ ಜಯಮ್ಮ (58) ಕೂಡ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ.

ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು: ಸಾವಿನಲ್ಲೂ ಒಂದಾದ ದಂಪತಿ
ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು: ಸಾವಿನಲ್ಲೂ ಒಂದಾದ ದಂಪತಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Nov 26, 2024 | 4:13 PM

Share

ದಾವಣಗೆರೆ, ನವೆಂಬರ್​ 26: ಸಾವಿನಲ್ಲೂ ದಂಪತಿ (Couple) ಒಂದಾಗಿರುವಂತಹ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿಯಲ್ಲಿ ನಡೆದಿದೆ. ಕಸ್ತೂರಿ ರಂಗಪ್ಪ (65) ಮತ್ತು ಜಯಮ್ಮ (58) ಮೃತ ದಂಪತಿ. ಸದ್ಯ ಸಂಬಂಧಿಕರು ದಂಪತಿ ಶವಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಕಸ್ತೂರಿ ರಂಗಪ್ಪ ಹೋಗಿದ್ದಾರೆ. ಈ ವೇಳೆ ಕುಸಿದುಬಿದಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಇನ್ನು ಪತಿ ಸಾವಿನ ಸುದ್ದಿಯನ್ನು ಕುಟುಂಬಸ್ಥರು ಪತ್ನಿಗೆ ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪತ್ನಿ ಜಯಮ್ಮ ಕುಸಿದುಬಿದ್ದು ಅವರು ಕೂಡ ಸಾವನ್ನಪ್ಪಿದ್ದಾರೆ. ಆ ಮೂಲಕ ಸಾವಿನಲ್ಲೂ ಒಂದಾಗಿದ್ದಾರೆ.

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ವೈದ್ಯ ಸಾವು

ಚಲಿಸುತ್ತಿರುವ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್​ನಲ್ಲಿದ್ದ ಚಿತ್ರದುರ್ಗ‌ಮೂಲದ ವೈದ್ಯ ಡಾ. ಜಿ.ಆರ್.‌ತಿಮ್ಮೇಗೌಡ (34) ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ಹೊರ ವಲಯದ ಬಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದೆ. ದಾವಣಗೆರೆಯಲ್ಲಿ ನಡೆದ ರಾಷ್ಟ್ರೀಯ ರಾಷ್ಟ್ರೀಯ ಮಕ್ಕಳ‌ ಶ್ವಾಸಕೋಶ ತಜ್ಞ ಸಮಾವೇಶದಲ್ಲಿ ಪಾಲ್ಗೊಂಡು ವಾಪಸ್ಸಾಗುವ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಮದುವೆ ಮಂಟಪದಿಂದ ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: ಇಬ್ಬರು ಮಹಿಳೆಯರು ಸೇರಿ 8 ಜನರ ಬಂಧನ

ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಸರ್ಕಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ.ತಿಮ್ಮೇಗೌಡ ವೈದ್ಯರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಾರು ಡಿಕ್ಕಿ ಹೊಡೆದು ಎಂಟು ವರ್ಷದ ಬಾಲಕಿ ಸಾವು

ಮತ್ತೊಂದು ಪ್ರಕರಣದಲ್ಲಿ ಕಾರು ಡಿಕ್ಕಿ ಹೊಡೆದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗೆದ್ಲೆಟ್ಟಿ ಗ್ರಾಮದ ಬಳಿ ನಡೆದಿತ್ತು. ರೂಪಾ (08) ಸಾವನ್ನಪ್ಪಿದ್ದ ಬಾಲಕಿ. ಈ ಹಿಂದೆ ಕೂಡ ಒಂದು ಮಗು ಸಾವನ್ನಪ್ಪಿತ್ತು.

ಇದನ್ನೂ ಓದಿ: ಮಂಡ್ಯದಲ್ಲಿ ಪ್ರಾಮಾಣಿಕ ಕಳ್ಳರು: ಕದ್ದ ಚಿನ್ನಾಭಾರಣ ವಾಪಸ್ ಅದೇ ಜಾಗದಲ್ಲೇ ಇಟ್ಟು ಹೋದರು

ಇದೇ ಕಾರಣಕ್ಕೆ ರೊಚ್ಚಿಗೆದ್ದ ಜನ ಮರದ ತುಂಡು, ವಾಹನ ಅಡ್ಡ ನಿಲ್ಲಿಸಿ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ. ಸ್ಥಳಕ್ಕೆ ಸಂತೆಬೆನ್ನೂರು ಹಾಗೂ ಚನ್ನಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಕೆಲ ಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್