AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಳಿ ಫಾರಂ​ಗೆ ಅಕ್ರಮ ವಿದ್ಯುತ್ ಸಂಪರ್ಕ; 1 ವರ್ಷ ಜೈಲು, 2.94 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

Davanagere: ಅಪರಾಧಿ ಕೋಳಿ ಫಾರಂನ 4 ಶೆಡ್​​ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿಕೊಂಡಿದ್ದ. 1 ವರ್ಷ ಕಾಲ 96,000 ವ್ಯಾಟ್​ ವಿದ್ಯುತ್ ಬಳಸಿಕೊಂಡಿದ್ದ. ಬಳಿಕ, ಈ ಅಕ್ರಮವನ್ನು ಬೆಸ್ಕಾಂ ಎಇಇ ಜಿ.ಎಂ. ನಾಯ್ಕ್ ದಾಳಿ ನಡೆಸಿ ಪತ್ತೆ ಹಚ್ಚಿದ್ದರು.

ಕೋಳಿ ಫಾರಂ​ಗೆ ಅಕ್ರಮ ವಿದ್ಯುತ್ ಸಂಪರ್ಕ; 1 ವರ್ಷ ಜೈಲು, 2.94 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್
ಸಾಂಕೇತಿಕ ಚಿತ್ರ
TV9 Web
| Updated By: ganapathi bhat|

Updated on: Aug 25, 2021 | 9:28 PM

Share

ದಾವಣಗೆರೆ: ಕೋಳಿ ಫಾರಂ​ಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿಕೊಂಡ ಹಿನ್ನೆಲೆಯಲ್ಲಿ ದಾವಣಗೆರೆಯ 1 ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್​, ಅಪರಾಧಿಗೆ 1 ವರ್ಷ ಜೈಲು, 2.94 ಲಕ್ಷ ರೂಪಾಯಿ ದಂಡ ವಿಧಿಸಿದೆ. ಕೋಳಿ ಫಾರಂ ಮಾಲೀಕ ನಿಜಾಮುದ್ದೀನ್​ (46)ಗೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. 2018 ರಲ್ಲಿ ಗೋಗುದ್ದ ಗ್ರಾಮದಲ್ಲಿ ಅಕ್ರಮ ಸಂಪರ್ಕ ಪತ್ತೆಯಾಗಿತ್ತು. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೋಗುದ್ದ ಗ್ರಾಮ ಗ್ರಾಮದಲ್ಲಿ ಈ ಅಕ್ರಮ ತಿಳಿದುಬಂದಿತ್ತು.

ಅಪರಾಧಿ ಕೋಳಿ ಫಾರಂನ 4 ಶೆಡ್​​ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿಕೊಂಡಿದ್ದ. 1 ವರ್ಷ ಕಾಲ 96,000 ವ್ಯಾಟ್​ ವಿದ್ಯುತ್ ಬಳಸಿಕೊಂಡಿದ್ದ. ಬಳಿಕ, ಈ ಅಕ್ರಮವನ್ನು ಬೆಸ್ಕಾಂ ಎಇಇ ಜಿ.ಎಂ. ನಾಯ್ಕ್ ದಾಳಿ ನಡೆಸಿ ಪತ್ತೆ ಹಚ್ಚಿದ್ದರು. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇಂದು (ಆಗಸ್ಟ್ 25) ನ್ಯಾಯಾಧೀಶ ಜೆ.ವಿ. ವಿಜಯಾನಂದ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರಿ ಅಭಿಯೋಜಕ ಕೆ.ಕೆಂಚಪ್ಪ ವಾದ ಮಂಡಿಸಿದ್ದರು. ಅದರಂತೆ ಅಪರಾಧಿಗೆ ಶಿಕ್ಷೆ ಘೋಷಣೆಯಾಗಿದೆ. 1 ವರ್ಷ ಜೈಲು, 2.94 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಕಾಲುಜಾರಿ ಕಾಲುವೆಗೆ ಬಿದ್ದ ಯುವಕ ಯುವಕನೋರ್ವ ಕಾಲುಜಾರಿ ಕಾಲುವೆಗೆ ಬಿದ್ದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವರಾಜಪುರದಲ್ಲಿ ನಡೆದಿದೆ. ಬಸವರಾಜಪುರ ಬಳಿಯ ಭದ್ರಾ ಕಾಲುವೆಯಲ್ಲಿ ಯುವಕ ಜಾರಿ ಬಿದ್ದಿದ್ದಾನೆ. ಇದೀಗ ಯುವಕನಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಕಾಲುಜಾರಿ ಕಾಲುವೆಗೆ ಬಿದ್ದಿರುವ ಯುವಕನಿಗಾಗಿ ಶೋಧ ಮುಂದುವರಿದಿದೆ. ದಾವಣಗೆರೆ ನಿವಾಸಿ ಮುಬಾರಕ್​ (21)ಗೆ ಕಾಲುವೆಗೆ ಬಿದ್ದ ದುರ್ದೈವಿ. ಆತನಿಗಾಗಿ ಹುಡುಕಾಟ ನಡೆದಿದೆ. ಗಾರೆ ಕೆಲಸ ಮುಗಿಸಿ ಕೈಕಾಲು ತೊಳೆದುಕೊಳ್ಳುವಾಗ ಘಟನೆ ಸಂಭವಿಸಿದೆ. ಬಸವಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಅಕ್ರಮ ಮರಳು ಸಂಗ್ರಹಿಸಿದ್ದ ಅಡ್ಡೆ ಮೇಲೆ ತಹಶೀಲ್ದಾರ್ ದಾಳಿ ಅಕ್ರಮ ಮರಳು ಸಂಗ್ರಹಿಸಿದ್ದ ಅಡ್ಡೆ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಚಿಕ್ಕಲ್ಲೂರು ಗ್ರಾಮದಲ್ಲಿ ನಡೆದಿದೆ. 10 ಲೋಡ್​ಗೂ ಅಧಿಕ ಪ್ರಮಾಣದ ಅಕ್ರಮ ಮರಳು ಜಪ್ತಿ ಮಾಡಲಾಗಿದೆ. ಚಿಕ್ಕಲ್ಲೂರು ಗ್ರಾಮದಲ್ಲಿ ಸಂಗ್ರಹಿಸಿದ್ದ ಅಕ್ರಮ ಮರಳು ಜಪ್ತಿ ಮಾಡಲಾಗಿದೆ. ಹೇಮಾವತಿ ನದಿಯಿಂದ ಮರಳು ಕದ್ದು ಅಕ್ರಮ ದಾಸ್ತಾನು ಮಾಡಲಾಗಿತ್ತು. ಪರವಾನಗಿ ಇಲ್ಲದೆ ಮರಳು ಕದ್ದು ಸಂಗ್ರಹಿಸಿರುವ ಆರೋಪ ಕೇಳಿಬಂದಿತ್ತು. ಸಕಲೇಶಪುರ ಉಪವಿಭಾಗ ಅಧಿಕಾರಿ ಪ್ರತೀಕ್ ಬಯಾಲ್, ತಹಶೀಲ್ದಾರ್ ಜಯಕುಮಾರ್ ನೇತೃತ್ವದಲ್ಲಿ ನಡೆದ ದಾಳಿ ನಡೆಸಲಾಗಿತ್ತು. ಅಧಿಕಾರಿಗಳ ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಮರಳು ಜಪ್ತಿ ಮಾಡಿ ದೂರು ದಾಖಲಿಸಿ ತನಿಖೆಗೆ ಆದೇಶ ಹೊರಡಿಸಲಾಗಿದೆ. ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಮತ್ತಷ್ಟು ಮಾಹಿತಿ ಬೆಳಕಿಗೆ; ಶುಕ್ರವಾರ ಆರಗ ಜ್ಞಾನೇಂದ್ರ ಸಭೆ

ನಮಗೇ ತಿಳಿಯದಂತೆ ನಮ್ಮ ಹೆಸರಲ್ಲಿ ಬೇರೊಬ್ಬರು ಸಾಲ ತೆಗೆದರೆ? ದಾವಣಗೆರೆಯಲ್ಲಿ ಇಬ್ಬರು ರೈತ ಮಹಿಳೆಯರಿಂದ ಕೇಳಿಬಂತು 5 ಕೋಟಿ ಸಾಲದ ಈ ಆರೋಪ

ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ