ದಾವಣಗೆರೆ: ಚಿರತೆ ದಾಳಿಯಿಂದ ಮಾಲೀಕನನ್ನು ಕಾಪಾಡಿದ ಹಸು ಗೌರಿ

ತನ್ನ ಮಾಲೀಕನ ಮೇಲೆ ದಾಳಿ ನಡೆಸಿದ ಚಿರತೆಗೆ ಕೊಂಬಿನಿಂದ ತಿವಿದು ರಕ್ಷಿಸಿದ ಅಪರೂಪದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದಿದೆ. ಇತ್ತ ಮನೆಯ ಯಜಮಾನನ್ನು ಉಳಿಸಿದ್ದಕ್ಕೆ ಹಸುವಿನ ಬಗ್ಗೆ ಹೆಮ್ಮೆಪಟ್ಟುಕೊಳ್ಳುತ್ತಿದ್ದಾರೆ.

ದಾವಣಗೆರೆ: ಚಿರತೆ ದಾಳಿಯಿಂದ ಮಾಲೀಕನನ್ನು ಕಾಪಾಡಿದ ಹಸು ಗೌರಿ
ಚಿರತೆ ದಾಳಿಯಿಂದ ಮಾಲೀಕನನ್ನು ಕಾಪಾಡಿದ ಹಸು ಗೌರಿ
Follow us
|

Updated on: Jun 09, 2023 | 9:55 PM

ದಾವಣಗೆರೆ: ತನ್ನ ಮಾಲೀಕನ ಮೇಲೆ ದಾಳಿ ನಡೆಸಿದ ಚಿರತೆಗೆ (Leopard Attack) ಕೊಂಬಿನಿಂದ ತಿವಿದು ರಕ್ಷಿಸಿದ ಅಪರೂಪದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದಿದೆ. ಇತ್ತ ಮನೆಯ ಯಜಮಾನನ್ನು ಉಳಿಸಿದ್ದಕ್ಕೆ ಗೌರಿ ಮೇಲೆ ಕುಟುಂಬಸ್ಥರು ಇನ್ನಿಲ್ಲದ ಪ್ರೀತಿ ತೋರಿಸುತ್ತಿದ್ದಾರೆ. ಸದ್ಯ ಚಿರತೆಯ ದಾಳಿಯಿಂದ ಕೊಡಕಿನಕೆರೆ ಮತ್ತು ಸುತ್ತಮುತ್ತ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದೆ.

ಚನ್ನಗಿರಿ ತಾಲೂಕಿನ ಉಬ್ರಾಣಿ ಹತ್ತಿರ ಕೊಡಕಿನಕೆರೆ ಗ್ರಾಮದ ಕರಿಹಾಲಪ್ಪ ಅವರು ತೋಟದಲ್ಲಿ ಹಸು ಮೇಯಿಸಲು ತೆರಳಿದ್ದರು. ಈ ವೇಳೆ ಕರಿಹಾಲಪ್ಪ ಅವರ ಮೇಲೆ ಚಿರತೆ ಏಕಾಏಕಿಯಾಗಿ ದಾಳಿ ನಡೆಸಿದೆ. ಇದನ್ನು ನೋಡಿದ ಹಸು ಗೌರಿ, ಚಿರತೆ ಮೇಲೆ ದಾಳಿ ನಡೆಸಿ ತಲೆಯಿಂದ ಗುದ್ದಿ ದೂರಕ್ಕೆ ಸರಿಸಿದೆ. ಹಸುವಿನ ಏಟು ತಿಂದರೂ ಸುಮ್ಮನಾಗದ ಚಿರತೆ ಮತ್ತೆ ದಾಳಿಗೆ ಮುಂದಾಗಿದೆ.

ಇದನ್ನೂ ಓದಿ: Viral Video: ಬನ್ನೇರುಘಟ್ಟದಲ್ಲಿ ಚಿರತೆಮರಿಗಳಿಗೆ ಮರುಜೀವ ಕೊಡುತ್ತಿರುವ ಸಾವಿತ್ರಮ್ಮ

ಎರಡನೇ ಬಾರಿ ದಾಳಿ ನಡೆಸಲು ಮುಂದಾದಾಗ ಕರಿಹಾಲಪ್ಪ ಅವರು ಕೈಯಲ್ಲಿರುವ ದೊಣ್ಣೆ ಹಿಡಿದು ಬೆದರಿಸಿದ್ದಾರೆ. ಇದರಿಂದ ಬೆದರಿದ ಚಿರತೆ ಕಾಡಿನೊಳಗೆ ಓಡಿದೆ. ಸದ್ಯ ಕರಿಹಾಲಪ್ಪ ಅವರ ಜೀವ ಉಳಿಸಿದ ಗೌರಿ ಮೇಲೆ ಕುಟುಂಬಸ್ಥರು ಸಂತೋಷಗೊಂಡಿದ್ದಾರೆ. ಇತ್ತ ಚಿರತೆ ದಾಳಿಯಿಂದಾಗಿ ಕೊಡಕಿನಕೆರೆ ಮತ್ತು ಸುತ್ತಮುತ್ತ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಳೆದ ಸೋಮವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೆಲವು ತಿಂಗಳ ಹಿಂದೆಯಷ್ಟೇ, ಕರುವಿನ ಮೇಲೆ ದಾಳಿ ನಡೆಸಿದ್ದ ಹುಲಿಯನ್ನು ಬೆನ್ನಟ್ಟಿದ್ದ ಹಸುವಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕರ್ನಾಟಕದಲ್ಲೂ ಇಂದತಹದ್ದೇ ಒಂದು ಘಟನೆ ನಡೆದಿತ್ತು. ಜಾನುವಾರುಗಳನ್ನು ರಕ್ಷಿಸಲು ಹೋದ ನಾಯಿಯೊಂದು ಚಿರತೆ ಬಾಯಿಗೆ ತುತ್ತಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ