AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಚಿರತೆ ದಾಳಿಯಿಂದ ಮಾಲೀಕನನ್ನು ಕಾಪಾಡಿದ ಹಸು ಗೌರಿ

ತನ್ನ ಮಾಲೀಕನ ಮೇಲೆ ದಾಳಿ ನಡೆಸಿದ ಚಿರತೆಗೆ ಕೊಂಬಿನಿಂದ ತಿವಿದು ರಕ್ಷಿಸಿದ ಅಪರೂಪದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದಿದೆ. ಇತ್ತ ಮನೆಯ ಯಜಮಾನನ್ನು ಉಳಿಸಿದ್ದಕ್ಕೆ ಹಸುವಿನ ಬಗ್ಗೆ ಹೆಮ್ಮೆಪಟ್ಟುಕೊಳ್ಳುತ್ತಿದ್ದಾರೆ.

ದಾವಣಗೆರೆ: ಚಿರತೆ ದಾಳಿಯಿಂದ ಮಾಲೀಕನನ್ನು ಕಾಪಾಡಿದ ಹಸು ಗೌರಿ
ಚಿರತೆ ದಾಳಿಯಿಂದ ಮಾಲೀಕನನ್ನು ಕಾಪಾಡಿದ ಹಸು ಗೌರಿ
Rakesh Nayak Manchi
Rakesh Nayak Manchi|

Updated on: Jun 09, 2023 | 9:55 PM

Share

ದಾವಣಗೆರೆ: ತನ್ನ ಮಾಲೀಕನ ಮೇಲೆ ದಾಳಿ ನಡೆಸಿದ ಚಿರತೆಗೆ (Leopard Attack) ಕೊಂಬಿನಿಂದ ತಿವಿದು ರಕ್ಷಿಸಿದ ಅಪರೂಪದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದಿದೆ. ಇತ್ತ ಮನೆಯ ಯಜಮಾನನ್ನು ಉಳಿಸಿದ್ದಕ್ಕೆ ಗೌರಿ ಮೇಲೆ ಕುಟುಂಬಸ್ಥರು ಇನ್ನಿಲ್ಲದ ಪ್ರೀತಿ ತೋರಿಸುತ್ತಿದ್ದಾರೆ. ಸದ್ಯ ಚಿರತೆಯ ದಾಳಿಯಿಂದ ಕೊಡಕಿನಕೆರೆ ಮತ್ತು ಸುತ್ತಮುತ್ತ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದೆ.

ಚನ್ನಗಿರಿ ತಾಲೂಕಿನ ಉಬ್ರಾಣಿ ಹತ್ತಿರ ಕೊಡಕಿನಕೆರೆ ಗ್ರಾಮದ ಕರಿಹಾಲಪ್ಪ ಅವರು ತೋಟದಲ್ಲಿ ಹಸು ಮೇಯಿಸಲು ತೆರಳಿದ್ದರು. ಈ ವೇಳೆ ಕರಿಹಾಲಪ್ಪ ಅವರ ಮೇಲೆ ಚಿರತೆ ಏಕಾಏಕಿಯಾಗಿ ದಾಳಿ ನಡೆಸಿದೆ. ಇದನ್ನು ನೋಡಿದ ಹಸು ಗೌರಿ, ಚಿರತೆ ಮೇಲೆ ದಾಳಿ ನಡೆಸಿ ತಲೆಯಿಂದ ಗುದ್ದಿ ದೂರಕ್ಕೆ ಸರಿಸಿದೆ. ಹಸುವಿನ ಏಟು ತಿಂದರೂ ಸುಮ್ಮನಾಗದ ಚಿರತೆ ಮತ್ತೆ ದಾಳಿಗೆ ಮುಂದಾಗಿದೆ.

ಇದನ್ನೂ ಓದಿ: Viral Video: ಬನ್ನೇರುಘಟ್ಟದಲ್ಲಿ ಚಿರತೆಮರಿಗಳಿಗೆ ಮರುಜೀವ ಕೊಡುತ್ತಿರುವ ಸಾವಿತ್ರಮ್ಮ

ಎರಡನೇ ಬಾರಿ ದಾಳಿ ನಡೆಸಲು ಮುಂದಾದಾಗ ಕರಿಹಾಲಪ್ಪ ಅವರು ಕೈಯಲ್ಲಿರುವ ದೊಣ್ಣೆ ಹಿಡಿದು ಬೆದರಿಸಿದ್ದಾರೆ. ಇದರಿಂದ ಬೆದರಿದ ಚಿರತೆ ಕಾಡಿನೊಳಗೆ ಓಡಿದೆ. ಸದ್ಯ ಕರಿಹಾಲಪ್ಪ ಅವರ ಜೀವ ಉಳಿಸಿದ ಗೌರಿ ಮೇಲೆ ಕುಟುಂಬಸ್ಥರು ಸಂತೋಷಗೊಂಡಿದ್ದಾರೆ. ಇತ್ತ ಚಿರತೆ ದಾಳಿಯಿಂದಾಗಿ ಕೊಡಕಿನಕೆರೆ ಮತ್ತು ಸುತ್ತಮುತ್ತ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಳೆದ ಸೋಮವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೆಲವು ತಿಂಗಳ ಹಿಂದೆಯಷ್ಟೇ, ಕರುವಿನ ಮೇಲೆ ದಾಳಿ ನಡೆಸಿದ್ದ ಹುಲಿಯನ್ನು ಬೆನ್ನಟ್ಟಿದ್ದ ಹಸುವಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕರ್ನಾಟಕದಲ್ಲೂ ಇಂದತಹದ್ದೇ ಒಂದು ಘಟನೆ ನಡೆದಿತ್ತು. ಜಾನುವಾರುಗಳನ್ನು ರಕ್ಷಿಸಲು ಹೋದ ನಾಯಿಯೊಂದು ಚಿರತೆ ಬಾಯಿಗೆ ತುತ್ತಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್