AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ ಆದೇಶಿಸಿದರೂ ಅಪಘಾತದ ಪರಿಹಾರ ನೀಡದ್ದಕ್ಕೆ ದಾವಣಗೆರೆಯಲ್ಲಿ ಕೆಎಸ್​ಆರ್​ಟಿಸಿ ಬಸ್ ಜಪ್ತಿ

ನಂತರ ಹೆಚ್ಚುವರಿ ಪರಿಹಾರಕ್ಕಾಗಿ ಹೈಕೋರ್ಟ್‌ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ ₹ 47.84 ಲಕ್ಷ ಪರಿಹಾರ ಜತೆ ಶೇ.ಕಡಾ 6ರಷ್ಟು ಬಡ್ಡಿಯನ್ನು ಪರಿಹಾರ ರೂಪದಲ್ಲಿ ಮೃತರ ಪೋಷಕರಿಗೆ ನೀಡುವಂತೆ ಕೆಎಸ್ಆರ್​ಟಿಸಿಗೆ ಆದೇಶಿಸಿತ್ತು.

ಕೋರ್ಟ್​ ಆದೇಶಿಸಿದರೂ ಅಪಘಾತದ ಪರಿಹಾರ ನೀಡದ್ದಕ್ಕೆ ದಾವಣಗೆರೆಯಲ್ಲಿ ಕೆಎಸ್​ಆರ್​ಟಿಸಿ ಬಸ್ ಜಪ್ತಿ
ಬಸ್ಸನ್ನು ಜಪ್ತಿ ಮಾಡಿದ ದೃಶ್ಯ
TV9 Web
| Edited By: |

Updated on:Aug 30, 2021 | 4:29 PM

Share

ದಾವಣಗೆರೆ: ಅಪಘಾತವೊಂದಕ್ಕೆ ಪರಿಹಾರ ನೀಡಲು ಕೆಎಸ್ಆರ್ಟಿಸಿ ಹಿಂದೇಟು ಹಾಕಿದ ಕಾರಣಕ್ಕೆ ಕೋರ್ಟ್ ಸಿಬ್ಬಂದಿ ಕೆಎಸ್‌ಆರ್‌ಟಿಸಿ ಬಸ್ಸನ್ನು ಸೀಜ್ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಬ್ಬಳ್ಳಿ ವಿಭಾಗದ KA 63 F 0082 ನೋಂದಣಿ ಬಸ್ ಜಪ್ತಿಗೊಳಗಾದದ್ದು.  13 ಸೆಪ್ಟಂಬರ್‌ 2017 ರಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ಕ್ರಾಸ್‌ ಬಳಿ ಬೈಕ್‌ ಹಾಗೂ ಕೆಎಎಸ್ಆರ್​ಟಿಸಿ ಬೈಕ್‌ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಹೊಸಳ್ಳಿ ಗ್ರಾಮದ ನಿವಾಸಿಗಳಾದ ಮಂಜುನಾಥ (26), ಬಸವರಾಜ್‌ (28) ಎಂಬ ಇಬ್ಬರು ಯುವಕರು ಮೃತಪಟ್ಟಿದ್ದರು. ಮಂಜುನಾಥ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದರು. ಬಸವರಾಜ್‌ ಕೃಷಿಕರಾಗಿದ್ದರು. ಪರಿಹಾರ ಕೋರಿ ಮೃತರ ತಂದೆ ಚಂದ್ರಪ್ಪ ಪ್ರಕರಣ ದಾಖಲಿಸಿದ್ದರು. ಹರಿಹರದ ನ್ಯಾಯಾಲಯ ಪ್ರಕರಣದಲ್ಲಿ 18.17 ಲಕ್ಷ ಪರಿಹಾರ ನೀಡಲು ಆದೇಶಿಸಿತ್ತು.

ನಂತರ ಹೆಚ್ಚುವರಿ ಪರಿಹಾರಕ್ಕಾಗಿ ಹೈಕೋರ್ಟ್‌ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ ₹ 47.84 ಲಕ್ಷ ಪರಿಹಾರ ಜತೆ ಶೇ.ಕಡಾ 6ರಷ್ಟು ಬಡ್ಡಿಯನ್ನು ಪರಿಹಾರ ರೂಪದಲ್ಲಿ ಮೃತರ ಪೋಷಕರಿಗೆ ನೀಡುವಂತೆ ಕೆಎಸ್ಆರ್​ಟಿಸಿಗೆ ಆದೇಶಿಸಿತ್ತು. ಕೋರ್ಟ್ ಆದೇಶವನ್ನು ಕೆಎಸ್ಆರ್​ಟಿಸಿ ಪಾಲಿಸದ ಕಾರಣ ಕೋರ್ಟ್ ಸಿಬ್ಬಂದಿ ಇಂದು ದಾವಣಗೆರೆ ಜಿಲ್ಲೆಯ ಹರಿಹರ ಬಸ್ ನಿಲ್ದಾಣದಲ್ಲಿ ಬಸ್ಸನ್ನು ಜಪ್ತಿ ಮಾಡಿದ್ದಾರೆ. ಸಂತ್ರಸ್ತರ ಪರ ವಕೀಲ ಕಿತ್ತೂರು ಶೇಖ್‌ ಇಬ್ರಾಹಿಂ ವಾದ ಮಂಡಿಸಿದ್ದರು.

ಬೆಂಗಳೂರಿಗೆ ವಿಮಾನದಲ್ಲಿ ಬಂದು ಮನೆಗಳ್ಳತನ ಮಾಡುತ್ತಿದ್ದರು! ನಾಲ್ವರು ಆರೋಪಿಗಳನ್ನು ಬಂಧಿಸಿದ ಬಸವನಗುಡಿ ಪೊಲೀಸರು ಕಳೆದ ನಾಲ್ಕು ವರ್ಷದಿಂದ ಮನೆಗಳ್ಳತನ ಮಾಡುತ್ತಿದ್ದ ಆರೋಪದಡಿ ಬೆಂಗಳೂರಿನ ಬಸವನಗುಡಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರು ಬೆಂಗಳೂರಿನಲ್ಲಿ ಒಟ್ಟು 12 ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಗಳಾಗಿದ್ದಾರೆ. ಬೆಂಗಳೂರಿಗೆ ವಿಮಾನದಲ್ಲಿ ಬಂದು ಕಳ್ಳತನ ಮಾಡುತ್ತಿದ್ದರು. ಕದ್ದ ಮಾಲನ್ನು ಹೈದರಾಬಾದದ್​ನಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಳಿಸರು ತಿಳಿಸಿದ್ದಾರೆ. ಸ್ವಂತ ಊರಿನಲ್ಲಿ ತಾವು ಬೆಂಗಳೂರಿನಲ್ಲಿ ಬ್ಯುಸಿನೆಸ್ ಮಾಡುವುದಾಗಿ ಆರೋಪಿಗಳು ಹೇಳಿಕೊಂಡಿದ್ದರು.

ಸಲೀಂ ಶೇಖ್, ಬಿಲಾಲ್ ಮಂಡಲ್, ಜಾಲಿಕ್ ಬಂಧಿತರು. ಇವರಿಂದ 3.3 ಕೆಜಿ ಚಿನ್ನದ ಆಭರಣ, 18 ಕೆಜಿ ಬೆಳ್ಳಿ ಸಾಮಾಗ್ರಿಗಳೂ ಸೇರಿ ಒಟ್ಟು ₹1.60 ಕೋಟಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶ. ಈ ಆರೋಪಿಗಳನ್ನು ಕರ್ನಾಟಕ‌ ಪೊಲೀಸರು ಇದೇ ಮೊದಲ ಬಾರಿಗೆ ಬಂಧಿಸಿದ್ದಾರೆ. ಬಂಧಿತರಲ್ಲಿ ಓರ್ವನಾದ ಸಲೀಂ ಅಲಿಯಾಸ್ ಶೋಕಿ ಸಲೀಂ ಈಹಿಂದೆ ಮುಂಬೈ ಪೊಲೀಸರಿಂದಲೂ ಬಂಧಿಸಲ್ಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 

ಬೆಂಗಳೂರಿಗೆ ವಿಮಾನದಲ್ಲಿ ಬಂದು ಮನೆಗಳ್ಳತನ ಮಾಡುತ್ತಿದ್ದರು! ನಾಲ್ವರು ಆರೋಪಿಗಳನ್ನು ಬಂಧಿಸಿದ ಬಸವನಗುಡಿ ಪೊಲೀಸರು

ಭಾರತ- ಪಾಕಿಸ್ತಾನದ ಜಗಳದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ; ತಾಲಿಬಾನ್ ಸೂಚನೆ

(Daavanagere harihar bus stand KSRTC bus seized to compensate for accident)

Published On - 4:27 pm, Mon, 30 August 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?