AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಪ್ರಮಾಣಪತ್ರ ವಿವಾದ: ಎಂ.ಪಿ ರೇಣುಕಾಚಾರ್ಯ ಸಹೋದರ ಸೇರಿ 11 ಮಂದಿ ವಿರುದ್ಧ FIR ದಾಖಲು

ಈ ಮೊದಲು ದ್ವಾರಕೇಶ್ವರಯ್ಯ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ 13 ಜನ ದಲಿತ ಮುಖಂಡರ ಮೇಲೆ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ದ್ವಾರಕೇಶ್ವರಯ್ಯ ಸೇರಿದಂತೆ 11 ಜನರ ಮೇಲೆ ದಲಿತ ಸಂಘಟನೆ ಮುಖಂಡರಿಂದ ಪ್ರಕರಣ ದಾಖಲು ಮಾಡಲಾಗಿದೆ.

ಜಾತಿ ಪ್ರಮಾಣಪತ್ರ ವಿವಾದ: ಎಂ.ಪಿ ರೇಣುಕಾಚಾರ್ಯ ಸಹೋದರ ಸೇರಿ 11 ಮಂದಿ ವಿರುದ್ಧ FIR ದಾಖಲು
FIR
TV9 Web
| Updated By: ganapathi bhat|

Updated on: Apr 03, 2022 | 3:05 PM

Share

ದಾವಣಗೆರೆ: ಬೇಡ ಜಂಗಮ ಮೀಸಲಾತಿ ಪತ್ರ ವಿವಾದಕ್ಕೆ ಸಂಬಂಧಿಸಿ ರೇಣುಕಾಚಾರ್ಯ ಸಹೋದರ ಸೇರಿ 11 ಜನರ ವಿರುದ್ಧ FIR ದಾಖಲು ಮಾಡಲಾಗಿದೆ. ದಾವಣಗೆರೆ ಕೆಟಿಜೆ ನಗರ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ಪ್ರಕರಣ ಸಂಬಂಧ ದಲಿತ ಸಂಘಟನೆ ಮುಖಂಡ ಹೆಗ್ಗರೆ ರಂಗಪ್ಪ ದೂರು ನೀಡಿದ್ದರು. ದಲಿತ ಮುಖಂಡರು, ದ್ವಾರಕೇಶ್ವರಯ್ಯ ಮಧ್ಯೆ ವಾಗ್ವಾದ ನಡೆದಿತ್ತು. ಮಾರ್ಚ್​ 28 ರಂದು ಕೆ.ಬಿ. ಬಡಾವಣೆಯಲ್ಲಿ ಘಟನೆ ನಡೆದಿತ್ತು. ದ್ವಾರಕೇಶ್ವರಯ್ಯನಿಗೆ ದಲಿತ ಮುಖಂಡರು ಘೇರಾವ್ ಹಾಕಿದ್ದರು. ಇದೀಗ ರೇಣುಕಾಚಾರ್ಯ ಸೋದರರ ದ್ವಾರಕೇಶ್ವರಯ್ಯ ವಿರುದ್ಧ FIR ದಾಖಲಿಸಲಾಗಿದೆ. ದ್ವಾರಕೇಶ್ವರಯ್ಯ ಸೇರಿದಂತೆ 11 ಜನರ ವಿರುದ್ಧ FIR ದಾಖಲು ಮಾಡಲಾಗಿದೆ. 143, 147, 323, 504, 506, 149 ಐಪಿಸಿ ಸೆಕ್ಷನ್ ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ.

ಈ ಮೊದಲು ದ್ವಾರಕೇಶ್ವರಯ್ಯ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ 13 ಜನ ದಲಿತ ಮುಖಂಡರ ಮೇಲೆ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ದ್ವಾರಕೇಶ್ವರಯ್ಯ ಸೇರಿದಂತೆ 11 ಜನರ ಮೇಲೆ ದಲಿತ ಸಂಘಟನೆ ಮುಖಂಡರಿಂದ ಪ್ರಕರಣ ದಾಖಲು ಮಾಡಲಾಗಿದೆ.

ಬೇಡ ಜಂಗಮ ಎಂದು ನಕಲಿ ಎಸ್ಸಿ ಜಾತಿ ಪ್ರಮಾಣ ಪತ್ರ (Caste Certificate) ಪಡೆದಿದ್ದಾರೆ ಎಂದು ಆರೋಪಿಸಿ ದ್ವಾರಕೇಶ್ವರಯ್ಯ ಅವರನ್ನು ದಲಿತ ಮುಖಂಡರು ಈ ಮೊದಲು ಮುತ್ತಿಗೆ ಹಾಕಿದ್ದರು. ಈ ಹಿನ್ನೆಲೆ ಮತ್ತೆ ಶಾಸಕ ಎಂ.ಪಿ. ರೇಣುಕಾಚಾರ್ಯ ಸಹೋದರ ಎಂ.ಪಿ. ದ್ವಾರಕೇಶ್ವರಯ್ಯ ಹೋರಾಟಕ್ಕೆ ಮುಂದಾಗಿದ್ದಾರೆ. ಹೂವಿನಮಡು ಅಂಜನಪ್ಪ, ಹೆಗ್ಗೆರೆ ರಂಗಪ್ಪ ಸೇರಿ 13 ಜನ ದಲಿತ ಮುಖಂಡರ ವಿರುದ್ಧ ದ್ವಾರಕೇಶ್ವರಯ್ಯ ಎಫ್.ಐ.ಆರ್ ದಾಖಲಿಸಿದ್ದರು.

ಮಾರ್ಚ್ 28 ರಂದು ದಾವಣಗೆರೆ ಪ್ರೆಸ್ ಕ್ಲಬ್ ಎದುರು ನಡೆದ ಘಟನೆ ಹಿನ್ನೆಲೆ ಎಫ್ ಐ ಆರ್ ದಾಖಲು ಮಾಡಲಾಗಿತ್ತು.  ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದ್ವಾರಕೇಶ್ವರಯ್ಯ ದೂರು ದಾಖಲಿಸಿದ್ದರು. ರೇಣುಕಾಚಾರ್ಯ ವಿರುದ್ಧ ಹೋರಾಟಕ್ಕೆ ಸಜ್ಜಾದ ದಲಿತ ಸಂಘಟನೆಗಳು ರೇಣುಕಾಚಾರ್ಯ ಕುಟುಂಬ ಈಗಾಗಲೇ ಹಿಂದು ಲಿಂಗಾಯತ ಇದ್ದವರು ಬೇಡಜಂಗಮ ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಈ ವಿಚಾರ ಪ್ರಶ್ನೆ ಮಾಡಿದಕ್ಕೆ ರೇಣುಕಾಚಾರ್ಯ ಸಹೋದರನಮ್ಮ ಮೇಲೆ ದೂರು ದಾಖಲಿಸಿದ್ದಾರೆ. ರೇಣುಕಾಚಾರ್ಯ ಅವರನ್ನ ತಕ್ಷಣ ಗಡಿಪಾರು ಮಾಡಬೇಕು. ವಿಳಂಬವಾದ್ರೆ ದಲಿತ ಸಂಘಟನೆಗಳು ರಾಜ್ಯಾದ್ಯಂತ ಹೋರಾಟ ಆರಂಭಿಸುವುದಾಗಿ ದಲಿತರ ಸಂಘಟನೆಗಳ ಒಕ್ಕೂಟದಿಂದ ಎಚ್ಚರಿಕೆ ನೀಡಿದ್ದರು.

ಶಾಸಕ ರೇಣುಕಾಚಾರ್ಯ ವಿರುದ್ಧ ದಲಿತ ಸಂಘಟನೆಗಳು ವಿಭಿನ್ನ ಹೋರಾಟ ನಡೆಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಹಾಲಿನ ಅಭಿಷೇಕ ಮಾಡಿ ಶಾಸಕ ರೇಣುಕಾಚಾರ್ಯ ವಿರುದ್ದ ಹೋರಾಟ ಮಾಡಿದ್ದರು. ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಹಾಲಿನ ಅಭಿಷೇಕ ಮಾಡಲಾಗಿತ್ತು. ಲಕ್ಷಣಕ್ಕೆ ರೇಣುಕಾಚಾರ್ಯ ಕುಟುಂಬ ಬೇಡ ಜಂಗಮ ಹೆಸರಿನಲ್ಲಿ ಪಡೆದ ಎಸ್ಸಿ ಪ್ರಮಾಣ ಪತ್ರ ವಾಪಸ್ಸು ಪಡೆಯಬೇಕು. ಅವರನ್ನ ಗಡಿ ಪಾರು ಮಾಡಬೇಕು. ಹಾಗೆ ಬಿಟ್ಟರೇ ಅಧಿಕಾರ ಬಳಿಸಿ ಮತ್ತೆ ದಬ್ಬಾಳಿಕೆ ಮಾಡುವ ಸಾದ್ಯತೆ ಇದೆ ಎಂದು ದಲಿತ ಮುಖಂಡರು‌ ಆರೋಪಿಸಿದ್ದರು.

ಇದನ್ನೂ ಓದಿ: ಇತ್ತೀಚಿಗೆ ನಡೆದ ಎಲ್ಲ ವಿದ್ಯಮಾನಗಳಲ್ಲಿ ಹಿನ್ನಡೆ ಕಂಡಿರುವ ಕಾಂಗ್ರೆಸ್ ದೈನೇಸಿ ಸ್ಥಿತಿ ತಲುಪಿದೆ: ಎಮ್ ಪಿ ರೇಣುಕಾಚಾರ್ಯ

ಇದನ್ನೂ ಓದಿ: ರೇಣುಕಾಚಾರ್ಯ ಸಹೋದರ ದಾರಕೇಶ್ವರಯ್ಯರನ್ನು ದಲಿತ ಸಂಘಟನೆ ಸದಸ್ಯರು ತರಾಟೆಗೆ ತೆಗೆದುಕೊಂಡರು

ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು