AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಂದೆ ಚರ್ಚ್​ಗೆ ಬರುವ ಆರೇಳು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಗಿದ್ದಾರೆ; ಸ್ವಂತ ಮಗಳಿಂದಲೇ ಪಾದ್ರಿ ವಿರುದ್ಧ ಗಂಭೀರ ಆರೋಪ

ದಾವಣಗೆರೆ ಜಯನಗರ ಚರ್ಚ್​ನ ಪಾದ್ರಿಯಾಗಿರುವ ತನ್ನ ತಂದೆ ವಿರುದ್ಧ ಡೈಸಿ ಪ್ರಿಯಾ ಎಂಬ 33 ವರ್ಷದ ಮಗಳು ಗಂಭೀರ ಆರೋಪ ಮಾಡಿದ್ದಾರೆ. ನನ್ನ ತಂದೆ ಚರ್ಚ್​ಗೆ ಬರುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಹಾಗೂ ನನಗಿಂತ ಚಿಕ್ಕ ಮಯಸ್ಸಿನ ಯುವತಿ ಜೊತೆ ಮದುವೆಯಾಗಲು ಹೊರಟಿದ್ದಾರೆ ಎಂದು ತಂದೆ ವಿರುದ್ಧ ಮಗಳು ಆರೋಪ ಮಾಡಿದ್ದಾರೆ.

ನನ್ನ ತಂದೆ ಚರ್ಚ್​ಗೆ ಬರುವ ಆರೇಳು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಗಿದ್ದಾರೆ; ಸ್ವಂತ ಮಗಳಿಂದಲೇ ಪಾದ್ರಿ ವಿರುದ್ಧ ಗಂಭೀರ ಆರೋಪ
ಪಾದ್ರಿ ಪಿ ರಾಜಶೇಖರ್, ಪಾದ್ರಿ ಪುತ್ರಿ ಡೈಸಿ ಪ್ರಿಯಾ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Feb 28, 2024 | 10:56 AM

Share

ದಾವಣಗೆರೆ, ಫೆ.28: ಚರ್ಚ್​ಗೆ ಪ್ರಾರ್ಥನೆಗೆ ಎಂದು ಬರುತ್ತಿದ್ದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಅವರೊಂದಿಗೆ ಸಲುಗೆ ಬೆಳೆಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಗಂಭೀರ ಆರೋಪ ದಾವಣಗೆರೆ ಜಯನಗರ ಚರ್ಚ್​ನ ಪಾದ್ರಿ ಪಿ ರಾಜಶೇಖರ್ (58) ವಿರುದ್ಧ ಕೇಳಿ ಬಂದಿದೆ. ಅಲ್ಲದೆ ಪಾದ್ರಿ ಪುತ್ರಿ ಡೈಸಿ ಪ್ರಿಯಾ ತನ್ನ ತಂದೆ ವಿರುದ್ಧವೇ ಇಂತಹ ಅರೋಪ ಮಾಡಿದ್ದಾರೆ. ನನ್ನ ತಂದೆ ಈಗ ನನಗಿಂತ ಚಿಕ್ಕ ವಯಸ್ಸಿನ ಯುವತಿಯನ್ನು ಮದುವೆಯಾಗಲು ಮುಂದಾಗಿದ್ದಾರೆ. ಚರ್ಚ್​ಗೆ ಬರುವ ಆರೇಳು ಜನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಡೈಸಿ ಪ್ರಿಯಾ ಆರೋಪ ಮಾಡಿದ್ದಾರೆ.

ಡೈಸಿ ಪ್ರಿಯಾ ಎಂಬ 33 ವರ್ಷದ ಮಹಿಳೆ, ದಾವಣಗೆರೆ ಜಯನಗರ ಚರ್ಚ್​ನ ಪಾದ್ರಿಯಾಗಿರುವ ತನ್ನ ತಂದೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನನಗೆ 33 ವರ್ಷ. ಆದರೆ ಈಗ ನನ್ನ ತಂದೆ ಮದುವೆಯಾಗಲು ನಿರ್ಧರಿಸಿದ್ದು ಮದುವೆಯಾಗೋ ಹುಡುಗಿಗೆ 30 ವರ್ಷ ಇದೆ. ಹಾಗಾಗಿ ಈ ಮದುವೆಗೆ ನನ್ನ ವಿರೋಧವಿದೆ. ಪಾದ್ರಿಯಾಗಿರುವ ನನ್ನ ತಂದೆ ಹಲವಾರು ವರ್ಷಗಳಿಂದ ಈ ಕೃತ್ಯ ಮಾಡಿಕೊಂಡು ಬಂದಿದ್ದಾರೆ. ತಂದೆಯ ವಿರುದ್ದವೇ ದೂರು ಕೊಡುವುದಕ್ಕೆ ಪುತ್ರಿ ಡೈಸಿ ಮುಂದಾಗಿದ್ದಾರೆ. ಇನ್ನು ಕ್ರಿಶ್ಚಿಯನ್ ಸಮುದಾಯದ ಪಾಸ್ಟರ್ ಆಸೋಷಿಯೇಷನ್, ಕ್ರಿಶ್ಚಿಯನ್ ಪೋರಂ ಪಾರ್ ಹ್ಯೂಮನ್ ರೈಟ್ಸ್ಟ್ ಮತ್ತು ದಾವಣಗೆರೆ ಜಿಲ್ಲಾ ಕ್ರಿಶ್ಚಿಯನ್ ವೆಲಪೆರ್ ಆಸೋಷಿಯೇಶನ್ ಪಾದ್ರಿ ರಾಜಶೇಕರ್ ನಡೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪತ್ನಿ ಮತ್ತು ಮಗುವಿಗೆ ವಿಷ ಕೊಟ್ಟ ಪತಿರಾಯ? ಹೆಂಡತಿ ಸಾವು, ಮಗು ಗಂಭೀರ -ಪತಿ ಅಂದರ್

6 ಜನ ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಸ್ವತಃ ಅವರ ಮಗಳೇ ಹೇಳಿಕೊಂಡಿದ್ದಾಳೆ. ಪಾದ್ರಿ ರಾಜಶೇಖರ್ ವರ್ತನೆ ಬಗ್ಗೆ ನನ್ನ ಬಳಿ ಮಹಿಳೆಯರು ಸಂಕಟ ತೋಡಿಕೊಂಡಿದ್ದರು. ಓರ್ವ ಶಿಕ್ಷಕಿಗೂ ನನ್ನ ತಂದೆ ಅನ್ಯಾಯ ಮಾಡಿದ್ದಾರೆ. ಅವರ ಬಾಳಲ್ಲೂ ಆಟ ಆಡಿದ್ದಾರೆ ಎಂದು ಡೈಸಿ ಪ್ರಿಯಾ ಅವರು ಆ ಶಿಕ್ಷಕಿಯ ಸರ್ವಿಸ್ ರಿಜಿಸ್ಟರ್ ನಲ್ಲಿ ನಾಮಿನಿ ಆಗಿ ರಾಜಶೇಖರ್ ಹೆಸರು ಇರುವ ದಾಖಲೆ ಬಿಡುಗಡೆ ಮಾಡಿದ್ದಾರೆ.

ಮತ್ತೊಂದೆಡೆ ಪಾದ್ರಿ ರಾಜಶೇಖರ್ ವಿರುದ್ದ ದೂರು ಕೊಡೋದಕ್ಕೆ ದಾವಣಗೆರೆ ಕ್ರಿಶ್ಚಿಯನ್ ಸಂಘಟನೆಗಳು ಮುಂದಾಗಿವೆ. ಈ ಹಿಂದೆ ದಲಿತ ಮಹಿಳೆಯನ್ನು ಅಮೀಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿಕೊಂಡು ಮದುವೆಯಾಗುತ್ತಿದ್ದಾನೆ ಎಂದು ಬಂಜಾರ ಸಮಾಜ ಆರೋಪ ಮಾಡಿತ್ತು. ಈ ಆರೋಪದ ಬೆನ್ನಲ್ಲೇ ಸ್ವತಃ ಪಾದ್ರಿ ಪುತ್ರಿ ಡೈಸಿ ಪ್ರಿಯಾ ಗಂಭೀರ ಅರೋಪ ಮಾಡಿದ್ದಾರೆ. ಚರ್ಚ್ ನ ಮುಖ್ಯಸ್ಥರಾಗಿದ್ದುಕೊಂಡವರಿಂದಲೇ ಇಂತಹ ವರ್ತನೆಗಳನ್ನು ಕ್ರಿಶ್ಚಿಯನ್ ಸಮಾಜ ಸಹಿಸುವುದಿಲ್ಲ. ಮಹಿಳೆ ಜೀವನದ ಜೊತೆ ಆಟವಾಡುವ ರಾಜಶೇಖರ್ ಮೇಲೆ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಕ್ರಿಶ್ಚಿಯನ್ ಸಂಘಟನೆಗಳು ಮುಂದಾಗಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ