AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ತೋಟ ಕಾಯಲು ಬಿಟ್ಟಿದ್ದ ರಾಟ್​​​ ವೀಲರ್ ಶ್ವಾನಗಳ ದಾಳಿಗೆ ಮಹಿಳೆ ಬಲಿ

ದಾವಣಗೆರೆ ಹೊರವಲಯದ ಹೊನ್ನೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ರಾಟ್​​​ ವೀಲರ್​​ ನಾಯಿಗಳ ಡೆಡ್ಲಿ ದಾಳಿಗೆ 38 ವರ್ಷದ ಮಹಿಳೆ ಬಲಿ ಆಗಿರುವಂತಹ ಘಟನೆ ನಡೆದಿದೆ. ನಾಯಿ ಮಾಲೀಕರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ನಾಯಿಗಳನ್ನು ಸೆರೆಹಿಡಿಯಲಾಗಿದೆ. ಆ ಮೂಲಕ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ದಾವಣಗೆರೆ: ತೋಟ ಕಾಯಲು ಬಿಟ್ಟಿದ್ದ ರಾಟ್​​​ ವೀಲರ್ ಶ್ವಾನಗಳ ದಾಳಿಗೆ ಮಹಿಳೆ ಬಲಿ
ಮೃತ ಮಹಿಳೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Dec 05, 2025 | 8:35 PM

Share

ದಾವಣಗೆರೆ, ಡಿಸೆಂಬರ್​ 05: ರಾಟ್​​​ ವೀಲರ್​​ ನಾಯಿಗಳ ದಾಳಿಗೆ (Dog attack) 38 ವರ್ಷದ ಮಹಿಳೆ  ಬಲಿಯಾಗಿರುವಂತಹ (woman death) ಘಟನೆ ದಾವಣಗೆರೆ ಹೊರವಲಯದ ಹೊನ್ನೂರು ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಅನಿತಾ ಮೃತ ಮಹಿಳೆ. ಮಾಲೀಕರು ನಿನ್ನೆ ರಾತ್ರಿ ಜಮೀನಿನಲ್ಲಿ ರಾಟ್ ವೀಲರ್ ನಾಯಿಗಳನ್ನ ಬಿಟ್ಟಿದ್ದರು. ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಅನಿತಾ ಮೇಲೆ 2 ನಾಯಿಗಳು ದಾಳಿ ಮಾಡಿವೆ. ಗಂಭೀರ ಗಾಯಗೊಂಡಿದ್ದ ಅನಿತಾರನ್ನ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಸದ್ಯ ನಾಯಿ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ದಾವಣಗೆರೆ ತಾಲೂಕಿನ ಹೊನ್ನೂರು ಗೊಲ್ಲರಹಟ್ಟಿಯಲ್ಲಿ ನಡೆದ ಈ ಘಟನೆ ನಿಜಕ್ಕೂ ಮೈ ಜುಮ್ ಎನ್ನಿಸುವಂತ್ತಿದೆ. ಅನಿತಾ ಮೇಲೆ ದಾಳಿ‌ ಮಾಡಿದ ರಾಟ್​​​ ವೀಲರ್​ ನಾಯಿಗಳು ಆಕೆಯನ್ನ ಅಕ್ಷರಶಃ ತಿಂದು ಹಾಕಿವೆ.

ನಡೆದದ್ದೇನು?

ರಾತ್ರಿ ವೇಳೆ ಕಾರ್ಯ ನಿಮಿತ್ಯ ಮಲ್ಲಶೆಟ್ಟಿಹಳ್ಳಿಯಿಂದ ಹೊನ್ನೂರು ಗೊಲ್ಲರ ಹಟ್ಟಿ ಕಡೆ ರಸ್ತೆಯಲ್ಲಿ ನಡೆದುಕೊಂಡು ಅನಿತಾ ಹೋಗುತ್ತಿದ್ದರು. ಇದ್ದಕ್ಕಿದ್ದಂತೆ ನಾಯಿಗಳು ಅನಿತಾ ಮೇಲೆ ಎರಗಿವೆ. ರಾಟ್​​​ ವೀಲರ್​​ ನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸ್ಥಿತಿ ಕಂಡು ಸ್ಥಳೀಯರು ಸಾವನ್ನಪ್ಪಿರಬಹುದು ಎಂದುಕೊಂಡಿದ್ದರು. ಆದರೆ ಇನ್ನೂ ಜೀವಂತವಾಗಿದ್ದರು.

ಇದನ್ನೂ ಓದಿ: ಬೀದಿನಾಯಿ ದಾಳಿಗೆ ವ್ಯಕ್ತಿ ಬಲಿ: ಕಣ್ಣುಗುಡ್ಡೆಯನ್ನೇ ಕಿತ್ತು ಹಾಕಿದ ಡೆಡ್ಲಿ ಶ್ವಾನ

ಕೂಡಲೇ ಮಹಿಳೆಯನ್ನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇತ್ತ ಇನ್ನಷ್ಟು ಜನರ ಮೇಲೆ ದಾಳಿ ಮಾಡುವ ಪ್ಲಾನ್​​ನಲ್ಲಿದ್ದ ನಾಯಿಗಳನ್ನು ಹಂದಿ ಹಿಡಿಯುವ ತಂಡದಿಂದ ಸೆರೆಹಿಡಿಯಲಾಗಿದೆ. ಆ ಮೂಲಕ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ಬಾಡೂಟ ಹಾಕುವುದಕ್ಕೂ ಮೊದಲೇ ಬೀದಿನಾಯಿಗಳ ಅಟ್ಟಹಾಸ; ಡೆಡ್ಲಿ ದಾಳಿಗೆ ವ್ಯಕ್ತಿ ಬಲಿ

ರಾತ್ರಿ ವೇಳೆ ಆಟೋದಲ್ಲಿ ತಂದು ಈ ರಾಟ್​​​ ವೀಲರ್​​ ನಾಯಿಗಳನ್ನು ಬಿಟ್ಟು ಹೋದ ಮಾಲೀಕರ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಮಹಿಳೆಗೆ ಎರಡು ಹೆಣ್ಣು ಹಾಗೂ ಒಂದು ಗಂಡು ಮಗುವಿದೆ. ನಾಯಿಗಳ ಮಾಲೀಕರ ಪತ್ತೆಗೆ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಶೋಧ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?