Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುದಾನ ಬಳಕೆಗಾಗಿ ಬೇಕಾಬಿಟ್ಟಿ ಖರ್ಚು: ದಾವಣಗೆರೆಯಲ್ಲಿ ಇದುವರೆಗೂ ಬಳಕೆಯಾಗದ ಇ ಶೌಚಾಲಯಗಳು

ಸ್ಮಾರ್ಟ್​ ಸಿಟಿ ಅಧಿಕಾರಿಗಳು ಮೊದಲ ಹಂತದಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ 9 ಇ-ಶೌಚಾಲಯಗಳನ್ನ ನಿರ್ಮಿಸಲಾಗಿತ್ತು. ಆ 9 ಶೌಚಾಲಯಗಳು ಬಳಕೆ ಆಗದೆ ಪಾಳು ಬಿದ್ದಿದ್ದವು. ಆದರೂ 2ನೇ ಹಂತದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ 20 ಕಡೆ 40 ಇ-ಶೌಚಾಲಯಗಳನ್ನ ನಿರ್ಮಿಸಿದ್ದಾರೆ. ಇಷ್ಟು ದೊದ್ದ ಮೊತ್ತವನ್ನು ಖರ್ಚು ಮಾಡಿ ಇ-ಶೌಚಾಲಯಗಳನ್ನು ನಿರ್ಮಿಸಿದರೂ ಸಾರ್ವಜನಿಕರು ಬಳಸಲು ಆಗುತ್ತಿಲ್ಲ.

ಅನುದಾನ ಬಳಕೆಗಾಗಿ ಬೇಕಾಬಿಟ್ಟಿ ಖರ್ಚು: ದಾವಣಗೆರೆಯಲ್ಲಿ ಇದುವರೆಗೂ ಬಳಕೆಯಾಗದ ಇ ಶೌಚಾಲಯಗಳು
ಇ-ಶೌಚಾಲಯಗಳು
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 07, 2023 | 10:47 PM

ದಾವಣಗೆರೆ, ಡಿಸೆಂಬರ್​ 07: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಸ್ಮಾರ್ಟ್ ಸಿಟಿ ಯೋಜನೆ (Smart City) ಅಡಿಯಲ್ಲಿ 6.5 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ಒಟ್ಟು 49 ಇ-ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಆದರೆ, ಇದುವರೆಗೂ ಒಂದೇ ಒಂದು ಶೌಚಾಲಯವು ಸಾರ್ವಜನಿಕರಿಂದ ಬಳಕೆ ಆಗಿಲ್ಲ. ಕೇಂದ್ರ ನೀಡುತ್ತಿರುವ ಹಣವನ್ನು ಹೇಗೆ ಖರ್ಚು ಮಾಡಬೇಕೆಂಬ ಜ್ಞಾನ ಇಲ್ಲದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಅನುದಾನ ಅಪವ್ಯಯ ಮಾಡಿದ್ದಾರೆ.

ಸ್ಮಾರ್ಟ್​ ಸಿಟಿ ಅಧಿಕಾರಿಗಳು ಮೊದಲ ಹಂತದಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ 9 ಇ-ಶೌಚಾಲಯಗಳನ್ನ ನಿರ್ಮಿಸಲಾಗಿತ್ತು. ಆ 9 ಶೌಚಾಲಯಗಳು ಬಳಕೆ ಆಗದೆ ಪಾಳು ಬಿದ್ದಿದ್ದವು. ಆದರೂ 2ನೇ ಹಂತದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ 20 ಕಡೆ 40 ಇ-ಶೌಚಾಲಯಗಳನ್ನ ನಿರ್ಮಿಸಿದ್ದಾರೆ. ಇಷ್ಟು ದೊದ್ದ ಮೊತ್ತವನ್ನು ಖರ್ಚು ಮಾಡಿ ಇ-ಶೌಚಾಲಯಗಳನ್ನು ನಿರ್ಮಿಸಿದರೂ ಸಾರ್ವಜನಿಕರು ಬಳಸಲು ಆಗುತ್ತಿಲ್ಲ. ಶೌಚಾಲಯ ಬಳಸಲು ಕಾಯಿನ್​ ಹಾಕಿದರೆ ಡೋರ್​ ಓಪನ್​ ಆಗುತ್ತಿಲ್ಲ. ಇಷ್ಟೆಲ್ಲ ಅವ್ಯವಸ್ಥೆ ಆಗಿದ್ದರೂ ಸ್ಮಾರ್ಟ್​ ಸಿಟಿ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ.

ಇದನ್ನೂ ಓದಿ: ದಾವಣಗೆರೆ​ ರಿಂಗ್​ ರೋಡ್​​ ಕಾಮಗಾರಿಗಾಗಿ ತೆರವು ಕಾರ್ಯಾಚರಣೆ; 144 ನಿಷೇಧಾಜ್ಞೆ ಜಾರಿ, ಪಾಲಿಕೆ ಆಯುಕ್ತೆ ವಿರುದ್ಧ ಆಕ್ರೋಶ

ಸ್ಮಾರ್ಟ್​ ಸಿಟಿಯ ಈ ಯೋಜನೆ ಬಗ್ಗೆ ಸಾರ್ವಜನಿಕರು ಮೊದಲೇ ಹಂತದಲ್ಲೇ ವಿರೋಧ ಮಾಡಿದರು. ಇ-ಶೌಚಾಲಯ ಬೇಡ ಸುಲಭ ಶೌಚಾಲಯ ನಿರ್ಮಾಣ ಮಾಡಿ ಅಂತ ಮನವಿ ಮಾಡಿದರೂ ಸ್ಮಾರ್ಟ್​ ಸಿಟಿ ಅಧಿಕಾರಿಗಳು ಏಕ ಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು 2ನೇ ಹಂತದಲ್ಲಿ ಮತ್ತೆ 5 ಕೋಟಿ ರೂಪಾಯಿ ಖರ್ಚು ಮಾಡಿ ಮತ್ತೆ ಇ-ಶೌಚಾಲಯ ನಿರ್ಮಾಣ ಮಾಡಿದ್ದಾರೆ. ಇದು ಅನುದಾನ ಖರ್ಚು ಮಾಡೋದು ಮತ್ತು ಕಮಿಷನ್​ ಆಸೆಗಾಗಿ ಮಾಡ್ತಿರೋ ಕಾಮಗಾರಿ ಒಂದು ತಿಳಿಯದಂತಾಗಿದೆ.

ಇದನ್ನೂ ಓದಿ: ಬಿಇಓ ಅಧಿಕಾರಿಗಳ ಲಂಚಾವತಾರ ಅನಾವರಣ, ಇದು ಹೊನ್ನಾಳಿಯ ಶಿಕ್ಷಕ ಗೋಣೆಪ್ಪ ಅವರ ತಬರನ ಕಥೆ!

ಒಂದೊಂದು ಇ-ಶೌಚಾಲಯಕ್ಕೆ ಬರೊಬ್ಬರಿ 15 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಇದು ಯಾವ ಪುರುಷಾರ್ಥಕ್ಕಾಗಿ ಮಾಡುತ್ತಿರುವ ಕಾಮಗಾರಿ ಅಂತ ಗೊತ್ತಾಗ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾರ್ವಜನಿಕರ ಕೋಟ್ಯಂತರ ರೂಪಾಯಿ ತೆರಿಗೆ ಹಣ ಪೋಲಾಗುತ್ತಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳು ತಮ್ಮ ಪಾಲಿನ ಕಮಿಷನ್​ ತೆಗೆದುಕೊಂಡು ಸುಮ್ಮನಾಗುತ್ತಿದ್ದಾರೆ. ಯಾವುದೇ ಸಾರ್ವಜನಿಕರ ಕಾಮಗಾರಿ ಮಾಡೋದಕ್ಕಿಂತ ಮುಂಚೆ ಜನರ ಅಭಿಪ್ರಾಯಕ್ಕೆ ಮನ್ನಣೆಕೊಟ್ಟರೆ ಇಂತಹ ಯಡವಟ್ಟುಗಳು ಆಗ್ತಿರಲಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!