AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಬಸಾಪೂರದ ಈ ಕ್ಷೇತ್ರದ ಜಾತ್ರೆಗೆ ಮಹಿಳೆಯರು ಬರುವಂತಿಲ್ಲ, ಬಂದ್ರೆ ಕಾದಿದೆ ಆಪತ್ತು!

ಬಸಾಪೂರ ಗ್ರಾಮದಿಂದ ಎರಡು ಕಿಲೋ ಮೀಟರ್ ದೂರದಲ್ಲಿ ಇರುವ ಮಹೇಶ್ವರ ಸ್ವಾಮೀ ಉಗ್ರ ದೇವರು. ಭಕ್ತರಲ್ಲಿ ಯಾವುದೇ ತಪ್ಪಾದರೂ ಶಿಕ್ಷೆ ಖಚಿತ ಎಂಬ ನಂಬಿಕೆ ಇಲ್ಲಿನ ಭಕ್ತರದ್ದು. ಹೀಗಾಗಿ ಸುತ್ತಲಿನ ಗ್ರಾಮಗಳ ಜನರು ಇಲ್ಲಿ ಕಟ್ಟು ನಿಟ್ಟಾಗಿ ಬಂದು ಜಾತ್ರೆಯ ದಿನ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿಯೇ ಹೋಗುತ್ತಾರೆ.

ದಾವಣಗೆರೆ: ಬಸಾಪೂರದ ಈ ಕ್ಷೇತ್ರದ ಜಾತ್ರೆಗೆ ಮಹಿಳೆಯರು ಬರುವಂತಿಲ್ಲ, ಬಂದ್ರೆ ಕಾದಿದೆ ಆಪತ್ತು!
ಬಸಾಪೂರದ ಈ ಕ್ಷೇತ್ರದ ಜಾತ್ರೆಗೆ ಮಹಿಳೆಯರು ಬರುವಂತಿಲ್ಲ!
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jan 04, 2024 | 7:30 AM

Share

ದಾವಣಗೆರೆ, ಜನವರಿ 4: ದಾವಣಗೆರೆ (Davanagere) ತಾಲೂಕು ಬಸಾಪೂರದ (Basapura) ಮಹೇಶ್ವರ ಸ್ವಾಮೀ ಕ್ಷೇತ್ರದಲ್ಲೊಂದು (Maheshwara swamy temple) ವಿಚಿತ್ರ ಜಾತ್ರೆ ನಡೆಯುತ್ತದೆ. ಈ ಜಾತ್ರೆ ವೇಳೆ ಬಳೆ ಶಬ್ದ ಕೇಳುವಂತಿಲ್ಲ. ಮಹಿಳೆಯರಂತೂ ಜಾತ್ರೆಯತ್ತ ಸುಳಿಯುವಂತೆಯೇ ಇಲ್ಲ. ಈ ಜಾತ್ರೆ ವೇಳೆ ದೇವರ ದರ್ಶನ, ಅಡಿಗೆ ಮಾಡುವುದು ಹಾಗೂ ಊಟ ಮಾಡುವುದು ಎಲ್ಲವೂ ಗಂಡಸರೇ. ಹೀಗಾಗಿ ಇದೊಂದು ಗಂಡಸರ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ.

ಬಸಾಪೂರ ಗ್ರಾಮದಿಂದ ಎರಡು ಕಿಲೋ ಮೀಟರ್ ದೂರದಲ್ಲಿ ಇರುವ ಮಹೇಶ್ವರ ಸ್ವಾಮೀ ಉಗ್ರ ದೇವರು. ಭಕ್ತರಲ್ಲಿ ಯಾವುದೇ ತಪ್ಪಾದರೂ ಶಿಕ್ಷೆ ಖಚಿತ ಎಂಬ ನಂಬಿಕೆ ಇಲ್ಲಿನ ಭಕ್ತರದ್ದು. ಹೀಗಾಗಿ ಸುತ್ತಲಿನ ಗ್ರಾಮಗಳ ಜನರು ಇಲ್ಲಿ ಕಟ್ಟು ನಿಟ್ಟಾಗಿ ಬಂದು ಜಾತ್ರೆಯ ದಿನ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿಯೇ ಹೋಗುತ್ತಾರೆ. ಇದು ಸುಮಾರು 400 ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ. ಇಲ್ಲಿನ ವಿಶೇಷವೆಂದರೆ ಪುರುಷರಿಗೆ ಮಾತ್ರ ಈ ಕ್ಷೇತ್ರದಲ್ಲಿ ಪ್ರವೇಶ. ಅಪ್ಪಿತಪ್ಪಿಯೂ ಕೂಡಾ ಮಹಿಳೆಯರು ಅಥವಾ ಸಣ್ಣ ಹೆಣ್ಣು ಮಗು ಕೂಡಾ ಇಲ್ಲಿ ಕಾಲಿಡುವಂತಿಲ್ಲ. ಇದೇ ಮಹೇಶ್ವರ ಸ್ವಾಮೀಯ ಕಟ್ಟಾಜ್ಞೆಯಂತೆ. ಹೀಗಾಗಿ ಎಲ್ಲಿ ನೋಡಿದರಲ್ಲಿ ಗಂಡಸರೇ ಕಾಣುತ್ತಾರೆ. ಈ ಬಸಾಪೂರದ ಪ್ರತಿಯೊಂದು ಮನೆಯ ಹಿರಿಮಗ ಅಂತು ಕಡ್ಡಾಯವಾಗಿ ಜಾತ್ರೆಗೆ ಹಾಜರಾಗಿರಲೇ ಬೇಕು.

ಎಷ್ಟೇ ಜನ ಭಕ್ತರು ಬಂದರೂ ಸಹ ಅವರಿಗೆ ಪ್ರಸಾದ ವ್ಯವಸ್ಥೆ ಇರುತ್ತದೆ. ವಿಶೇಷವಾಗಿ ಅನ್ನ ಸಾರು ಹಾಗೂ ಬಾಳೆ ಹಣ್ಣು ಇಲ್ಲಿನ ಪ್ರಸಾದ. ಬಾಳೆ ಎಂದರೆ ಮಹೇಶ್ವರ ಸ್ವಾಮೀಯ ಪ್ರತೀಕ ಎಂಬ ನಂಬಿಕೆ ಇದೆ. ಪ್ರತಿಯೊಬ್ಬರು ಬಂದು ಇಲ್ಲಿ ಬಾಳೆ ಹಣ್ಣು ಪ್ರಸಾದ ಸ್ವೀಕರಿಸುವುದು ಕಡ್ಡಾಯ. ಮೇಲಾಗಿ ದೇವರಿಗೆ ನಮಸ್ಕರಿಸಿದರೆ ವಿಭೂತಿ ಧರಿಸುವುದು ಕಡ್ಡಾಯಂತೆ.

ಇನ್ನೊಂದು ವಿಶೇಷವೆಂದರೆ, ದೇಗುಲದ ಬಳಿ ಒಂದು ಬಾವಿ ಇದೆ. ಈ ಬಾವಿಗೆ ಬಾಳೆಹಣ್ಣಗಳನ್ನು ಬಿಡಲಾಗುತ್ತದೆ. ಇದರಲ್ಲಿ ಹಾಕಿದ ಎಲ್ಲ ಬಾಳೆ ಹಣ್ಣುಗಳು ಮುಳುಗಲ್ಲ ಎನ್ನುತ್ತಾರೆ ಭಕ್ತರು. ಒಂದು ವೇಳೆ ಅದು ಮುಳುಗಿದರೆ ಆಪತ್ತು ಕಾದಿದೆ ಎಂಬುದು ಭಕ್ತರ ಗ್ರಹಿಕೆ.

ಇದನ್ನೂ ಓದಿ: ದಾವಣಗೆರೆಯಲ್ಲಿದೆ ಅಯೋಧ್ಯೆ ರಾಮ ಮಂದಿರದ ಮೂಲ ಮೂರ್ತಿಗಳು; ಈ ಆಶ್ರಮದಲ್ಲಿರುವ ಶಾಸನ ಹೇಳುತ್ತೆ ಸತ್ಯ ಕಥೆ

ಇಷ್ಟೆಲ್ಲಾ ಅದ್ಧೂರಿಯಾಗಿ ನಡೆಯುವ ಈ ಜಾತ್ರೆಗೆ ಸ್ತ್ರೀ ಪ್ರವೇಶ ಯಾಕೆ ಇಲ್ಲಾ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಭಕ್ತರ ಬಳಿ ಇಲ್ಲ. ಇದು ಪೂರ್ವಜರ ಪಾಲದಿಂದ ನಡೆದುಕೊಂಡು ಬಂದಿದೆ. ಅದೇ ರೀತಿ ನಾವು ಕೂಡಾ ಆ ಸಂಪ್ರದಾಯವನ್ನ ಮುಂದುವರಿಸಿಕೊಂಡು ಬಂದಿದ್ದೇವೆ ಎಂದು ಹೇಳುತ್ತಾರೆ. ಅಷ್ಟೇ ಅಲ್ಲದೆ, ಈವರೆಗೆ ಯಾವುದೇ ಮಹಿಳೆ ಕೂಡಾ ದೇವರ ದರ್ಶನ ಮಾಡುತ್ತೇನೆ ಎಂದು ಬಂದಿಲ್ಲವಂತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​