AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere Benne Dose: ಡಿ. 23 ರಿಂದ ಮೂರು ದಿನ ದಾವಣಗೆರೆ ಬೆಣ್ಣೆದೋಸೆ ಹಬ್ಬ

ಇತಿಹಾಸ ಪ್ರಸಿದ್ದ ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ನೀಡಲು ಜಿಲ್ಲಾಡಳಿತ ನಿರ್ಧರಿಸಿದ್ದು, ಡಿ. 23, 24, 25 ರಂದು ದಾವಣಗೆರೆಯಲ್ಲಿ ಬೆಣ್ಣೆದೋಸೆ ಹಬ್ಬವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ನಗರದ ಎಂ.ಬಿ.ಎ. ಮೈದಾನ ಮತ್ತು ಗ್ಲಾಸ್‍ಹೌಸ್ ಮುಂಭಾಗ ದೋಸೆ ಹಬ್ಬವನ್ನು ಆಯೋಜಿಸಲಾಗಿದ್ದು ಮೂರು ದಿನಗಳ ಕಾಲ ಬೆಳಗ್ಗೆ 8 ಗಂಟೆಯಿಂದ ರಾತ್ರಿವರೆಗೆ ದೋಸೆ ಸವಿಯಬಹುದಾಗಿದೆ.

Davanagere Benne Dose: ಡಿ. 23 ರಿಂದ ಮೂರು ದಿನ ದಾವಣಗೆರೆ ಬೆಣ್ಣೆದೋಸೆ ಹಬ್ಬ
ದಾವಣಗೆರೆ ಬೆಣ್ಣೆದೋಸೆ (ಸಂಗ್ರಹ ಚಿತ್ರ)
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Dec 13, 2023 | 10:00 PM

Share

ದಾವಣಗೆರೆ, ಡಿಸೆಂಬರ್​ 13: ದಾವಣಗೆರೆ ಬೆಣ್ಣೆದೋಸೆ (Davanagere Benne Dose) ಇತಿಹಾಸ ಪ್ರಸಿದ್ದವಾಗಿದ್ದು ಇದಕ್ಕೊಂದು ಬ್ರಾಂಡಿಂಗ್ ನೀಡಲು ಜಿಲ್ಲಾಡಳಿತ ಡಿಸೆಂಬರ್ 23, 24, 25 ರಂದು ದಾವಣಗೆರೆಯಲ್ಲಿ ಬೆಣ್ಣೆದೋಸೆ ಹಬ್ಬವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೋಸೆ ಉತ್ಸವ ಆಯೋಜನೆಗೆ ಸಂಬಂಧಿಸಿದಂತೆ ಸಿದ್ದತೆಯ ಕುರಿತು ಏರ್ಪಡಿಸಲಾದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಹೋಟೆಲ್ ಮಾಲಿಕರೊಂದಿಗೆ ಚರ್ಚಿಸಲಾಗಿದ್ದು ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ದಾವಣಗೆರೆ ನಗರದ ಎಂ.ಬಿ.ಎ. ಮೈದಾನ ಮತ್ತು ಗ್ಲಾಸ್‍ಹೌಸ್ ಮುಂಭಾಗ ದೋಸೆ ಹಬ್ಬವನ್ನು ಆಯೋಜಿಸಲಾಗಿದ್ದು ಮೂರು ದಿನಗಳ ಕಾಲ ಬೆಳಗ್ಗೆ 8 ಗಂಟೆಯಿಂದ ರಾತ್ರಿವರೆಗೆ ದೋಸೆ ಸವಿಯಬಹುದಾಗಿದೆ.

ಇದನ್ನೂ ಓದಿ: ದಾವಣಗೆರೆ ಚಾಣಕ್ಯ ಕಾಲೇಜಿನಲ್ಲಿ ಆಹಾರ ಮೇಳ; ಡಿಫರೆಂಟ್ ಫುಡ್​ಗಳ ಅನಾವರಣ, ಇಲ್ಲಿದೆ ಫೋಟೋಸ್​

ಬೆಣ್ಣೆದೋಸೆ ಹಬ್ಬದಲ್ಲಿ ಸುಮಾರು 5 ಲಕ್ಷ ಜನರು ಭಾಗಿಯಾಗಬೇಕೆಂಬ ಗುರಿ ಹೊಂದಲಾಗಿದೆ. ಇದಕ್ಕಾಗಿ ಎರಡು ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈಗಾಗಲೇ ದೋಸೆ ಹೋಟೆಲ್ ಮಾಲಿಕರೊಂದಿಗೆ ಸಭೆ ನಡೆಸಲಾಗಿದ್ದು 10 ಕ್ಕಿಂತ ಹೆಚ್ಚು ಹೋಟೆಲ್ ಮಾಲಿಕರು ಭಾಗವಹಿಸಲಿದ್ದಾರೆ.

ದೋಸೆ ಹಬ್ಬವನ್ನು ಏರ್ಪಡಿಸುವ ಮೂಲಕ ದಾವಣಗೆರೆ ದೋಸೆಯ ಸಾಂಪ್ರದಾಯಿಕತೆ ಉಳಿಸುವ ಮೂಲಕ ಗುಣಮಟ್ಟವನ್ನು ಕಾಪಾಡಿಕೊಂಡು ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಕಲ್ಪಿಸುವುದು ಈ ಹಬ್ಬದ ಉದ್ದೇಶವಾಗಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಬೆಳೆದ ಬೆಳೆ ಬೆಣ್ಣೆನಗರಿಯಲ್ಲಿ ಸಹ ಬೆಳೆಯಬಹುದು! ಯಾವುದದು? ಏನದು ರೈತ ಕಸರತ್ತು?

ದೋಸೆ ಹೋಟೆಲ್‍ಗಳಿಗೆ ಮಾನದಂಡದನ್ವಯ ಮುಂದಿನ ದಿನಗಳಲ್ಲಿ ಅಧಿಕೃತ ಟ್ಯಾಗ್ ನೀಡಲಿದ್ದು ಇದಕ್ಕಾಗಿ ಆಹಾರ ಸುರಕ್ಷತಾ ಕಾಯಿದೆ ನಿಯಮ ಪಾಲನೆ, ಗುಣಮಟ್ಟ, ಕಲಬೆರಕೆ ರಹಿತ ಆಹಾರದ ಮಾನದಂಡಗಳನ್ನು ಅಳವಡಿಸಿಕೊಳ್ಳುವವರಿಗೆ ಈ ಟ್ಯಾಗ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ .ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​