AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere Benne Dose: ಡಿ. 23 ರಿಂದ ಮೂರು ದಿನ ದಾವಣಗೆರೆ ಬೆಣ್ಣೆದೋಸೆ ಹಬ್ಬ

ಇತಿಹಾಸ ಪ್ರಸಿದ್ದ ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ನೀಡಲು ಜಿಲ್ಲಾಡಳಿತ ನಿರ್ಧರಿಸಿದ್ದು, ಡಿ. 23, 24, 25 ರಂದು ದಾವಣಗೆರೆಯಲ್ಲಿ ಬೆಣ್ಣೆದೋಸೆ ಹಬ್ಬವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ನಗರದ ಎಂ.ಬಿ.ಎ. ಮೈದಾನ ಮತ್ತು ಗ್ಲಾಸ್‍ಹೌಸ್ ಮುಂಭಾಗ ದೋಸೆ ಹಬ್ಬವನ್ನು ಆಯೋಜಿಸಲಾಗಿದ್ದು ಮೂರು ದಿನಗಳ ಕಾಲ ಬೆಳಗ್ಗೆ 8 ಗಂಟೆಯಿಂದ ರಾತ್ರಿವರೆಗೆ ದೋಸೆ ಸವಿಯಬಹುದಾಗಿದೆ.

Davanagere Benne Dose: ಡಿ. 23 ರಿಂದ ಮೂರು ದಿನ ದಾವಣಗೆರೆ ಬೆಣ್ಣೆದೋಸೆ ಹಬ್ಬ
ದಾವಣಗೆರೆ ಬೆಣ್ಣೆದೋಸೆ (ಸಂಗ್ರಹ ಚಿತ್ರ)
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Dec 13, 2023 | 10:00 PM

Share

ದಾವಣಗೆರೆ, ಡಿಸೆಂಬರ್​ 13: ದಾವಣಗೆರೆ ಬೆಣ್ಣೆದೋಸೆ (Davanagere Benne Dose) ಇತಿಹಾಸ ಪ್ರಸಿದ್ದವಾಗಿದ್ದು ಇದಕ್ಕೊಂದು ಬ್ರಾಂಡಿಂಗ್ ನೀಡಲು ಜಿಲ್ಲಾಡಳಿತ ಡಿಸೆಂಬರ್ 23, 24, 25 ರಂದು ದಾವಣಗೆರೆಯಲ್ಲಿ ಬೆಣ್ಣೆದೋಸೆ ಹಬ್ಬವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೋಸೆ ಉತ್ಸವ ಆಯೋಜನೆಗೆ ಸಂಬಂಧಿಸಿದಂತೆ ಸಿದ್ದತೆಯ ಕುರಿತು ಏರ್ಪಡಿಸಲಾದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಹೋಟೆಲ್ ಮಾಲಿಕರೊಂದಿಗೆ ಚರ್ಚಿಸಲಾಗಿದ್ದು ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ದಾವಣಗೆರೆ ನಗರದ ಎಂ.ಬಿ.ಎ. ಮೈದಾನ ಮತ್ತು ಗ್ಲಾಸ್‍ಹೌಸ್ ಮುಂಭಾಗ ದೋಸೆ ಹಬ್ಬವನ್ನು ಆಯೋಜಿಸಲಾಗಿದ್ದು ಮೂರು ದಿನಗಳ ಕಾಲ ಬೆಳಗ್ಗೆ 8 ಗಂಟೆಯಿಂದ ರಾತ್ರಿವರೆಗೆ ದೋಸೆ ಸವಿಯಬಹುದಾಗಿದೆ.

ಇದನ್ನೂ ಓದಿ: ದಾವಣಗೆರೆ ಚಾಣಕ್ಯ ಕಾಲೇಜಿನಲ್ಲಿ ಆಹಾರ ಮೇಳ; ಡಿಫರೆಂಟ್ ಫುಡ್​ಗಳ ಅನಾವರಣ, ಇಲ್ಲಿದೆ ಫೋಟೋಸ್​

ಬೆಣ್ಣೆದೋಸೆ ಹಬ್ಬದಲ್ಲಿ ಸುಮಾರು 5 ಲಕ್ಷ ಜನರು ಭಾಗಿಯಾಗಬೇಕೆಂಬ ಗುರಿ ಹೊಂದಲಾಗಿದೆ. ಇದಕ್ಕಾಗಿ ಎರಡು ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈಗಾಗಲೇ ದೋಸೆ ಹೋಟೆಲ್ ಮಾಲಿಕರೊಂದಿಗೆ ಸಭೆ ನಡೆಸಲಾಗಿದ್ದು 10 ಕ್ಕಿಂತ ಹೆಚ್ಚು ಹೋಟೆಲ್ ಮಾಲಿಕರು ಭಾಗವಹಿಸಲಿದ್ದಾರೆ.

ದೋಸೆ ಹಬ್ಬವನ್ನು ಏರ್ಪಡಿಸುವ ಮೂಲಕ ದಾವಣಗೆರೆ ದೋಸೆಯ ಸಾಂಪ್ರದಾಯಿಕತೆ ಉಳಿಸುವ ಮೂಲಕ ಗುಣಮಟ್ಟವನ್ನು ಕಾಪಾಡಿಕೊಂಡು ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಕಲ್ಪಿಸುವುದು ಈ ಹಬ್ಬದ ಉದ್ದೇಶವಾಗಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಬೆಳೆದ ಬೆಳೆ ಬೆಣ್ಣೆನಗರಿಯಲ್ಲಿ ಸಹ ಬೆಳೆಯಬಹುದು! ಯಾವುದದು? ಏನದು ರೈತ ಕಸರತ್ತು?

ದೋಸೆ ಹೋಟೆಲ್‍ಗಳಿಗೆ ಮಾನದಂಡದನ್ವಯ ಮುಂದಿನ ದಿನಗಳಲ್ಲಿ ಅಧಿಕೃತ ಟ್ಯಾಗ್ ನೀಡಲಿದ್ದು ಇದಕ್ಕಾಗಿ ಆಹಾರ ಸುರಕ್ಷತಾ ಕಾಯಿದೆ ನಿಯಮ ಪಾಲನೆ, ಗುಣಮಟ್ಟ, ಕಲಬೆರಕೆ ರಹಿತ ಆಹಾರದ ಮಾನದಂಡಗಳನ್ನು ಅಳವಡಿಸಿಕೊಳ್ಳುವವರಿಗೆ ಈ ಟ್ಯಾಗ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ .ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್