AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಅಪಘಾತವಾಗಿ 5 ವರ್ಷವಾದರೂ ಪರಿಹಾರ ನೀಡದ ಸಾರಿಗೆ ಇಲಾಖೆ; ಕೋರ್ಟ್​ನಿಂದ 2 ಬಸ್​ಗಳ ಜಪ್ತಿ

1.32 ಕೋಟಿ ರೂಪಾಯಿಯನ್ನು ಮೃತರ ಕುಟುಂಬಕ್ಕೆ ಪರಿಹಾರವಾಗಿ ನೀಡುವಂತೆ ಕೋರ್ಟ್​ ಆದೇಶ ನೀಡಿತ್ತು. ಅಪಘಾತ ಸಂಭವಿಸಿ ಐದು ವರ್ಷವಾದರೂ ಸಾರಿಗೆ ಇಲಾಖೆ ಪರಿಹಾರ ನೀಡಲಿಲ್ಲ.

ದಾವಣಗೆರೆಯಲ್ಲಿ ಅಪಘಾತವಾಗಿ 5 ವರ್ಷವಾದರೂ ಪರಿಹಾರ ನೀಡದ ಸಾರಿಗೆ ಇಲಾಖೆ; ಕೋರ್ಟ್​ನಿಂದ 2 ಬಸ್​ಗಳ ಜಪ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 15, 2022 | 2:42 PM

Share

ದಾವಣಗೆರೆ: ಅಪಘಾತ ಸಂಭವಿಸಿ 5 ವರ್ಷವಾದರೂ ಸಾರಿಗೆ ಇಲಾಖೆ (Transport Department) ಪರಿಹಾರ ನೀಡದ ಹಿನ್ನೆಲೆಯಲ್ಲಿ ಕೋರ್ಟ್​ ಸಿಬ್ಬಂದಿ 2 ಬಸ್​ಗಳನ್ನು​ ಜಪ್ತಿ ಮಾಡಿದ್ದಾರೆ. 2019ರ ಮೇ 6ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಳಿ ಕಾರಿಗೆ ಬಸ್​ ಡಿಕ್ಕಿಯಾಗಿ (Bus Accident) ಇಬ್ಬರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ 1.32 ಕೋಟಿ ರೂ. ಪರಿಹಾರ ನೀಡುವಂತೆ ಕೋರ್ಟ್​ ಸೂಚಿಸಿತ್ತು. ಆದರೆ, ಇನ್ನೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಕೋರ್ಟ್ ಸಿಬ್ಬಂದಿ ಬಸ್​ ಜಪ್ತಿ ಮಾಡಿದ್ದಾರೆ.

ಅಪಘಾತ ಸಂಭವಿಸಿ ಐದು ವರ್ಷವಾದರೂ ಸಾರಿಗೆ ಇಲಾಖೆ ಪರಿಹಾರ ನೀಡಲಿಲ್ಲ. 1.32 ಕೋಟಿ ರೂಪಾಯಿಯನ್ನು ಮೃತರ ಕುಟುಂಬಕ್ಕೆ ಪರಿಹಾರವಾಗಿ ನೀಡುವಂತೆ ಕೋರ್ಟ್​ ಆದೇಶ ನೀಡಿತ್ತು. ಪರಿಹಾರಕ್ಕಾಗಿ ಮೃತ ಪ್ರಾಧ್ಯಾಪಕನ ಪತ್ನಿ ಪರದಾಡುತ್ತಿದ್ದಾರೆ. ಪರಿಹಾರ ನೀಡದ ಹಿನ್ನೆಲೆಯಲ್ಲಿ ಕೋರ್ಟ್​ ಸಿಬ್ಬಂದಿ ಎರಡು ಬಸ್ ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಮೈಜುಮ್ಮೆನ್ನಿಸುವ ವಿಶೇಷ ಹರಕೆ ಜಾತ್ರೆ; ಬಾಯಲ್ಲಿ ಕಬ್ಬಣದ ರಾಡ್, ಬೆನ್ನಿಗೆ ಹುಕ್‌ ಹಾಕಿಕೊಂಡು ಭಯಾನಕವಾಗಿ ಹರಕೆ ತೀರಿಸಿದ ಭಕ್ತರು

ದಾವಣಗೆರೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಎರಡು ಬಸ್​ಗಳನ್ನು ಕೋರ್ಟ್​ ಸಿಬ್ಬಂದಿ ಜಪ್ತಿ ಮಾಡಿದ್ದಾರೆ. 2019ರ ಮೇ 6ರಂದು ಈ ಘಟನೆ ನಡೆದಿತ್ತು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಳಿಯ ಕಾರ್ ಗೆ ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದು, ದಾವಣಗೆರೆ ಎವಿಕೆ ಕಾಲೇಜ್ ಪ್ರಾಧ್ಯಾಪಕ ನಂಜುಂಡಸ್ವಾಮಿ ಸೇರಿ ಇಬ್ಬರು ಸಾವನ್ನಪ್ಪಿದ್ದರು. ಈ ವೇಳೆ ಓರ್ವನಿಗೆ ಗಂಭೀರ ಗಾಯಗಳಾಗಿತ್ತು. ಹೀಗಾಗಿ, ಪರಿಹಾರಕ್ಕಾಗಿ ಪುತ್ರನೊಂದಿಗೆ ಮೃತ ನಂಜುಂಡಸ್ವಾಮಿ ಅವರ ಪತ್ನಿ ಸುಮಾ ಕೋರ್ಟ್​ಗೆ ಅಲೆದಾಡುತ್ತಲೇ ಇದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು