AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಜಮೀನಿಗೆ ನುಗ್ಗಿದ ಕರಡಿಗಳಿಂದ ಬೆಳೆ ನಾಶ; ಹೊನ್ನಾಳಿ ತಾಲೂಕಿನ ರೈತರಲ್ಲಿ ಕಾಡುತ್ತಿರುವ ಭಯ

ಹೊನ್ನಾಳಿ ತಾಲೂಕಿನ ನರಸಗೊಂಡನಹಳ್ಳಿಯ ಕೆಲವೇ ಕಿ.ಮೀ ದೂರದಲ್ಲಿ ಮಹಿಳೆಯೊಬ್ಬರನ್ನು ಕರಡಿಯೊಂದು ಬಲಿ ಪಡೆದಿದಿತ್ತು. ಇದೀಗ ಮತ್ತೆ ಜಮೀನುಗಳಿಗೆ ನುಗ್ಗಿದ ಕರಡಿಗಳು ಅಪಾರ ಪ್ರಮಾಣದಲ್ಲಿ ಬೆಳೆ ನಾಶ ಮಾಡಿವೆ.

ರಾತ್ರೋರಾತ್ರಿ ಜಮೀನಿಗೆ ನುಗ್ಗಿದ ಕರಡಿಗಳಿಂದ ಬೆಳೆ ನಾಶ; ಹೊನ್ನಾಳಿ ತಾಲೂಕಿನ ರೈತರಲ್ಲಿ ಕಾಡುತ್ತಿರುವ ಭಯ
ರಾತ್ರೋರಾತ್ರಿ ಜಮೀನಿಗೆ ನುಗ್ಗಿದ ಕರಡಿಗಳಿಂದ ಬೆಳೆ ನಾಶ; ರೈತರಲ್ಲಿ ಕಾಡುತ್ತಿರುವ ಭಯ
TV9 Web
| Edited By: |

Updated on:Dec 06, 2022 | 11:11 AM

Share

ದಾವಣಗೆರೆ: ಅರಣ್ಯ ಪ್ರದೇಶಗಳು ಹೆಚ್ಚಿರುವ ಚಾಮರಾಜನಗರ, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಡು ಪ್ರಾಣಿಗಳ ಹಾವಳಿ (Wild animals menace) ಹೆಚ್ಚಾಗುತ್ತಿದ್ದು, ನರ ಬಲಿ, ಪ್ರಾಣಿ ಬಲಿಗಳು ನಡೆಯುತ್ತಿವೆ. ಆಹಾರ ಅರಸಿಕೊಂಡು ಆನೆಗಳು, ಚಿರತೆಗಳು, ಹುಲಿಗಳು ಕಾಡಿನಿಂದ ನಾಡಿಗೆ ಲಗ್ಗೆ ಇಡುತ್ತಿದ್ದು, ಇದೀಗ ಕರಡಿಗಳು ಕೂಡ ತಾವೇನು ಕಮ್ಮಿ ಇಲ್ಲ ಎಂದು ಜನರಿಗೆ ಕಾಟ ಕೊಡಲು ಆರಂಭಿಸಿವೆ. ಹೊನ್ನಾಳಿ ತಾಲೂಕಿನಲ್ಲಿ ಮತ್ತೆ ಕರಡಿ ಕಾಟ (Bear menace) ಆರಂಭವಾಗಿದೆ. ರಾತ್ರೋರಾತ್ರಿ ಮೂರು ನಾಲ್ಕು ಕರಡಿಗಳು ರೈತರ ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಬೆಳೆ ನಾಶಗೊಳಿಸಿದ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ನರಸಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಅಶೋಕ ಎಂಬ ರೈತ ಬೆಳೆದ ಕಬ್ಬು, ತೆಂಗು ಸೇರಿದಂತೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಬೆಳೆಗಳನ್ನು ಕರಡಿಗಳು ನಾಶಗೊಳಿಸಿವೆ. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಇಲ್ಲಿಂದ ಕೆಲ ಕಿಲೋ ಮೀಟರ್ ದೂರದಲ್ಲಿ ಮಹಿಳೆಯೊಬ್ಬರನ್ನು ಕರಡಿಗಳು ಬಲಿ ಪಡೆದಿದ್ದವು.

ಇದನ್ನೂ ಓದಿ: ಹರಿಹರ: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ; ಗಾಯಾಳು ಗಂಭೀರ

ಇದೀಗ ಮತ್ತೆ ಜಮೀನಿಗೆ ಕರಡಿಗಳು ಲಗ್ಗೆ ಇಟ್ಟಿವೆ. ಈಗಾಗಲೇ ಒಬ್ಬರನ್ನು ಕರಡಿಗಳು ಬಲಿ ಪಡೆದಿದ್ದು, ಇನ್ನೊಂದೆಡೆ ಜಮೀನಿಗೆ ನುಗ್ಗಿ ಬೆಳೆ ನಾಶಗೊಳಿಸುತ್ತಿವೆ. ಇದರಿಂದಾಗ ಜಮೀನಿಗೆ ಹೋಗಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಕರಡಿ ಹಾವಳಿ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಲಾಗಿದ್ದು, ನಾಶಗೊಂಡ ಬೆಳೆಗೆ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಅಲ್ಲದೆ ಕರಡಿಗಳನ್ನು ಸೆರೆಹಿಡಿದು ಅರಣ್ಯಗಳಿಗೆ ಅಟ್ಟಲು ಕಾರ್ಯಾಚರಣೆ ಮಾಡುವಂತೆ ರೈತರು ವಿನಂತಿಸಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 am, Tue, 6 December 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ