AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಜಮೀನಿಗೆ ನುಗ್ಗಿದ ಕರಡಿಗಳಿಂದ ಬೆಳೆ ನಾಶ; ಹೊನ್ನಾಳಿ ತಾಲೂಕಿನ ರೈತರಲ್ಲಿ ಕಾಡುತ್ತಿರುವ ಭಯ

ಹೊನ್ನಾಳಿ ತಾಲೂಕಿನ ನರಸಗೊಂಡನಹಳ್ಳಿಯ ಕೆಲವೇ ಕಿ.ಮೀ ದೂರದಲ್ಲಿ ಮಹಿಳೆಯೊಬ್ಬರನ್ನು ಕರಡಿಯೊಂದು ಬಲಿ ಪಡೆದಿದಿತ್ತು. ಇದೀಗ ಮತ್ತೆ ಜಮೀನುಗಳಿಗೆ ನುಗ್ಗಿದ ಕರಡಿಗಳು ಅಪಾರ ಪ್ರಮಾಣದಲ್ಲಿ ಬೆಳೆ ನಾಶ ಮಾಡಿವೆ.

ರಾತ್ರೋರಾತ್ರಿ ಜಮೀನಿಗೆ ನುಗ್ಗಿದ ಕರಡಿಗಳಿಂದ ಬೆಳೆ ನಾಶ; ಹೊನ್ನಾಳಿ ತಾಲೂಕಿನ ರೈತರಲ್ಲಿ ಕಾಡುತ್ತಿರುವ ಭಯ
ರಾತ್ರೋರಾತ್ರಿ ಜಮೀನಿಗೆ ನುಗ್ಗಿದ ಕರಡಿಗಳಿಂದ ಬೆಳೆ ನಾಶ; ರೈತರಲ್ಲಿ ಕಾಡುತ್ತಿರುವ ಭಯ
TV9 Web
| Edited By: |

Updated on:Dec 06, 2022 | 11:11 AM

Share

ದಾವಣಗೆರೆ: ಅರಣ್ಯ ಪ್ರದೇಶಗಳು ಹೆಚ್ಚಿರುವ ಚಾಮರಾಜನಗರ, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಡು ಪ್ರಾಣಿಗಳ ಹಾವಳಿ (Wild animals menace) ಹೆಚ್ಚಾಗುತ್ತಿದ್ದು, ನರ ಬಲಿ, ಪ್ರಾಣಿ ಬಲಿಗಳು ನಡೆಯುತ್ತಿವೆ. ಆಹಾರ ಅರಸಿಕೊಂಡು ಆನೆಗಳು, ಚಿರತೆಗಳು, ಹುಲಿಗಳು ಕಾಡಿನಿಂದ ನಾಡಿಗೆ ಲಗ್ಗೆ ಇಡುತ್ತಿದ್ದು, ಇದೀಗ ಕರಡಿಗಳು ಕೂಡ ತಾವೇನು ಕಮ್ಮಿ ಇಲ್ಲ ಎಂದು ಜನರಿಗೆ ಕಾಟ ಕೊಡಲು ಆರಂಭಿಸಿವೆ. ಹೊನ್ನಾಳಿ ತಾಲೂಕಿನಲ್ಲಿ ಮತ್ತೆ ಕರಡಿ ಕಾಟ (Bear menace) ಆರಂಭವಾಗಿದೆ. ರಾತ್ರೋರಾತ್ರಿ ಮೂರು ನಾಲ್ಕು ಕರಡಿಗಳು ರೈತರ ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಬೆಳೆ ನಾಶಗೊಳಿಸಿದ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ನರಸಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಅಶೋಕ ಎಂಬ ರೈತ ಬೆಳೆದ ಕಬ್ಬು, ತೆಂಗು ಸೇರಿದಂತೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಬೆಳೆಗಳನ್ನು ಕರಡಿಗಳು ನಾಶಗೊಳಿಸಿವೆ. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಇಲ್ಲಿಂದ ಕೆಲ ಕಿಲೋ ಮೀಟರ್ ದೂರದಲ್ಲಿ ಮಹಿಳೆಯೊಬ್ಬರನ್ನು ಕರಡಿಗಳು ಬಲಿ ಪಡೆದಿದ್ದವು.

ಇದನ್ನೂ ಓದಿ: ಹರಿಹರ: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ; ಗಾಯಾಳು ಗಂಭೀರ

ಇದೀಗ ಮತ್ತೆ ಜಮೀನಿಗೆ ಕರಡಿಗಳು ಲಗ್ಗೆ ಇಟ್ಟಿವೆ. ಈಗಾಗಲೇ ಒಬ್ಬರನ್ನು ಕರಡಿಗಳು ಬಲಿ ಪಡೆದಿದ್ದು, ಇನ್ನೊಂದೆಡೆ ಜಮೀನಿಗೆ ನುಗ್ಗಿ ಬೆಳೆ ನಾಶಗೊಳಿಸುತ್ತಿವೆ. ಇದರಿಂದಾಗ ಜಮೀನಿಗೆ ಹೋಗಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಕರಡಿ ಹಾವಳಿ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಲಾಗಿದ್ದು, ನಾಶಗೊಂಡ ಬೆಳೆಗೆ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಅಲ್ಲದೆ ಕರಡಿಗಳನ್ನು ಸೆರೆಹಿಡಿದು ಅರಣ್ಯಗಳಿಗೆ ಅಟ್ಟಲು ಕಾರ್ಯಾಚರಣೆ ಮಾಡುವಂತೆ ರೈತರು ವಿನಂತಿಸಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 am, Tue, 6 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?