AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ದಾವಣಗೆರೆ ಜಿಲ್ಲಾಡಳಿತದಿಂದ ಸನ್ಮಾನ

Independence Day 2021: ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದಲ್ಲಿ ಜಗಳೂರಿನ ಸ್ವಾತಂತ್ರ್ಯ ಹೋರಾಟಗಾರರಾದ ರುದ್ರಮುನಿಯಪ್ಪ, ಹೆಚ್.ವೀರಯ್ಯ, ಚಂದ್ರರೆಡ್ಡಿ ನಿವಾಸಕ್ಕೆ ತೆರಳಿ ಸನ್ಮಾನಿಸಿ ಗೌರವ ಸಲ್ಲಿಸಲಾಗಿದೆ.

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ದಾವಣಗೆರೆ ಜಿಲ್ಲಾಡಳಿತದಿಂದ ಸನ್ಮಾನ
ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ
TV9 Web
| Edited By: |

Updated on: Aug 15, 2021 | 11:10 PM

Share

ದಾವಣಗೆರೆ: ಸ್ವಾತಂತ್ರ್ಯ ದಿನಾಚರಣೆಯ ವಿಶೇಷವಾಗಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸನ್ಮಾನ ಮಾಡುವ ಉತ್ತಮ ಕಾರ್ಯವನ್ನು ದಾವಣಗೆರೆ ಜಿಲ್ಲಾಡಳಿತ ಕೈಗೊಂಡಿದೆ. ಈ ಮೂಲಕ, ದಾವಣಗೆರೆಯಲ್ಲಿ ವಿನೂತನವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ. ಇಂದು ದೇಶಕ್ಕೆ ಸ್ವಾತಂತ್ರ ಸಿಕ್ಕು 75 ವರ್ಷವಾಯಿತು. ಸ್ವಾತಂತ್ರ್ಯ ಎಂಬುದು ಸುಮ್ಮನೇ ಸಿಕ್ಕಿಲ್ಲ. ಲಕ್ಷಾಂತರ ಜನರ ತ್ಯಾಗ ಬಲಿದಾನಗಳ ಮೂಲಕ ಲಭಿಸಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಮನೆ ಬಿಟ್ಟು ಹೋರಾಟ ಮಾಡಿದ ಕೆಲವು ಹಿರಿಯರು ಈಗ ನಮ್ಮ ಜೊತೆಗೆ ಇದ್ದಾರೆ. ಅಂತಹವರ ಮನೆಗೆ ತೆರಳಿ ಅವರೊಂದಿಗೆ ಸಂಭ್ರಮ ಆಚರಣೆ ಮಾಡುವ ಕಾರ್ಯವನ್ನು ದಾವಣಗೆರೆ ಜಿಲ್ಲಾಡಳಿತ ಮಾಡಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ನಿವಾಸಿ ರುದ್ರಮುನಿಯಪ್ಪ, ಎಚ್. ವೀರಯ್ಯ ಹಾಗೂ ಚಂದ್ರ ರೆಡ್ಡಿ ಎಂಬ ಮೂರು ಜನ ಹಿರಿಯರು ದೇಶವನ್ನು ದಾಸ್ಯದಿಂದ ವಿಮೋಚನೆ ಮಾಡಲು ಮಹಾತ್ಮ ಗಾಂಧೀಜಿ ಆರಂಭಿಸಿದ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಜಗಳೂರು ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಭಾಗವಾಗಿತ್ತು. ಈ ಜಿಲ್ಲೆಯ ಭಾಗವಾದ ಜಗಳೂರಿನಲ್ಲಿ ನೂರಾರು ಜನ ತಂಡ ಕಟ್ಟಿ ಸ್ವಾತಂತ್ರ್ಯ ಹೋರಾಟ ನಡೆಸಿದ್ದರು. ಅವರಲ್ಲಿ ಈ ಮೂವರು ಈಗ ನಮ್ಮ ಜೊತೆಗಿದ್ದಾರೆ. ಗಾಂಧಿಯ ಆದರ್ಶದಂತೆ ಸರಳ ಜೀವನ ನಡೆಸುತ್ತಿರುವ ಇವರ ಮನೆಗಳಿಗೆ ತೆರಳಿ ಜಿಲ್ಲಾಡಳಿತ ಇಂದು ಸ್ವಾತಂತ್ರ್ಯ ದಿನ ಆಚರಿಸಿದೆ.

ಈ ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಗಳೂರು ಶಾಸಕ ಎಸ್.ವಿ ರಾಮಚಂದ್ರ, ಎಸ್​ಪಿ ಸಿ.ಬಿ ರಿಷ್ಯಂತ್ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ವಿಜಯ ಮಹಾಂತೇಶ ಭಾಗವಹಿಸಿದ್ದಾರೆ. ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದಲ್ಲಿ ಜಗಳೂರಿನ ಸ್ವಾತಂತ್ರ್ಯ ಹೋರಾಟಗಾರರಾದ ರುದ್ರಮುನಿಯಪ್ಪ, ಹೆಚ್.ವೀರಯ್ಯ, ಚಂದ್ರರೆಡ್ಡಿ ನಿವಾಸಕ್ಕೆ ತೆರಳಿ ಸನ್ಮಾನಿಸಿ ಗೌರವ ಸಲ್ಲಿಸಲಾಗಿದೆ.

ಇದನ್ನೂ ಓದಿ: Independence Day: ಸ್ವಾತಂತ್ರ್ಯದ ಅಮೃತ ಮಹೋತ್ಸವ; ಕರ್ನಾಟಕದ ವಿವಿಧೆಡೆ ಸಂಭ್ರಮಾಚರಣೆ

ದಾವಣಗೆರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನವೇ ಕಾರ್ಮಿಕರ ಪ್ರತಿಭಟನೆ!

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು