AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ದಾವಣಗೆರೆ ಜಿಲ್ಲಾಡಳಿತದಿಂದ ಸನ್ಮಾನ

Independence Day 2021: ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದಲ್ಲಿ ಜಗಳೂರಿನ ಸ್ವಾತಂತ್ರ್ಯ ಹೋರಾಟಗಾರರಾದ ರುದ್ರಮುನಿಯಪ್ಪ, ಹೆಚ್.ವೀರಯ್ಯ, ಚಂದ್ರರೆಡ್ಡಿ ನಿವಾಸಕ್ಕೆ ತೆರಳಿ ಸನ್ಮಾನಿಸಿ ಗೌರವ ಸಲ್ಲಿಸಲಾಗಿದೆ.

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ದಾವಣಗೆರೆ ಜಿಲ್ಲಾಡಳಿತದಿಂದ ಸನ್ಮಾನ
ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ
TV9 Web
| Updated By: ganapathi bhat|

Updated on: Aug 15, 2021 | 11:10 PM

Share

ದಾವಣಗೆರೆ: ಸ್ವಾತಂತ್ರ್ಯ ದಿನಾಚರಣೆಯ ವಿಶೇಷವಾಗಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸನ್ಮಾನ ಮಾಡುವ ಉತ್ತಮ ಕಾರ್ಯವನ್ನು ದಾವಣಗೆರೆ ಜಿಲ್ಲಾಡಳಿತ ಕೈಗೊಂಡಿದೆ. ಈ ಮೂಲಕ, ದಾವಣಗೆರೆಯಲ್ಲಿ ವಿನೂತನವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ. ಇಂದು ದೇಶಕ್ಕೆ ಸ್ವಾತಂತ್ರ ಸಿಕ್ಕು 75 ವರ್ಷವಾಯಿತು. ಸ್ವಾತಂತ್ರ್ಯ ಎಂಬುದು ಸುಮ್ಮನೇ ಸಿಕ್ಕಿಲ್ಲ. ಲಕ್ಷಾಂತರ ಜನರ ತ್ಯಾಗ ಬಲಿದಾನಗಳ ಮೂಲಕ ಲಭಿಸಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಮನೆ ಬಿಟ್ಟು ಹೋರಾಟ ಮಾಡಿದ ಕೆಲವು ಹಿರಿಯರು ಈಗ ನಮ್ಮ ಜೊತೆಗೆ ಇದ್ದಾರೆ. ಅಂತಹವರ ಮನೆಗೆ ತೆರಳಿ ಅವರೊಂದಿಗೆ ಸಂಭ್ರಮ ಆಚರಣೆ ಮಾಡುವ ಕಾರ್ಯವನ್ನು ದಾವಣಗೆರೆ ಜಿಲ್ಲಾಡಳಿತ ಮಾಡಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ನಿವಾಸಿ ರುದ್ರಮುನಿಯಪ್ಪ, ಎಚ್. ವೀರಯ್ಯ ಹಾಗೂ ಚಂದ್ರ ರೆಡ್ಡಿ ಎಂಬ ಮೂರು ಜನ ಹಿರಿಯರು ದೇಶವನ್ನು ದಾಸ್ಯದಿಂದ ವಿಮೋಚನೆ ಮಾಡಲು ಮಹಾತ್ಮ ಗಾಂಧೀಜಿ ಆರಂಭಿಸಿದ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಜಗಳೂರು ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಭಾಗವಾಗಿತ್ತು. ಈ ಜಿಲ್ಲೆಯ ಭಾಗವಾದ ಜಗಳೂರಿನಲ್ಲಿ ನೂರಾರು ಜನ ತಂಡ ಕಟ್ಟಿ ಸ್ವಾತಂತ್ರ್ಯ ಹೋರಾಟ ನಡೆಸಿದ್ದರು. ಅವರಲ್ಲಿ ಈ ಮೂವರು ಈಗ ನಮ್ಮ ಜೊತೆಗಿದ್ದಾರೆ. ಗಾಂಧಿಯ ಆದರ್ಶದಂತೆ ಸರಳ ಜೀವನ ನಡೆಸುತ್ತಿರುವ ಇವರ ಮನೆಗಳಿಗೆ ತೆರಳಿ ಜಿಲ್ಲಾಡಳಿತ ಇಂದು ಸ್ವಾತಂತ್ರ್ಯ ದಿನ ಆಚರಿಸಿದೆ.

ಈ ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಗಳೂರು ಶಾಸಕ ಎಸ್.ವಿ ರಾಮಚಂದ್ರ, ಎಸ್​ಪಿ ಸಿ.ಬಿ ರಿಷ್ಯಂತ್ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ವಿಜಯ ಮಹಾಂತೇಶ ಭಾಗವಹಿಸಿದ್ದಾರೆ. ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದಲ್ಲಿ ಜಗಳೂರಿನ ಸ್ವಾತಂತ್ರ್ಯ ಹೋರಾಟಗಾರರಾದ ರುದ್ರಮುನಿಯಪ್ಪ, ಹೆಚ್.ವೀರಯ್ಯ, ಚಂದ್ರರೆಡ್ಡಿ ನಿವಾಸಕ್ಕೆ ತೆರಳಿ ಸನ್ಮಾನಿಸಿ ಗೌರವ ಸಲ್ಲಿಸಲಾಗಿದೆ.

ಇದನ್ನೂ ಓದಿ: Independence Day: ಸ್ವಾತಂತ್ರ್ಯದ ಅಮೃತ ಮಹೋತ್ಸವ; ಕರ್ನಾಟಕದ ವಿವಿಧೆಡೆ ಸಂಭ್ರಮಾಚರಣೆ

ದಾವಣಗೆರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನವೇ ಕಾರ್ಮಿಕರ ಪ್ರತಿಭಟನೆ!

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ