AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಆಗುವವರೆಗೂ ಮದುವೆಯಾಗಲ್ಲ ಎಂದು ಪಟ್ಟು ಹಿಡಿದ ಯುವತಿಗೆ ಗುಡ್ ನ್ಯೂಸ್; ರಸ್ತೆ ಮಾತ್ರವಲ್ಲ ನಿನ್ನ ಮದುವೆ ಕೂಡಾ ಮಾಡುತ್ತೇನೆ ಎಂದ ದಾವಣಗೆರೆ ಡಿಸಿ

ರಸ್ತೆ ಮಾಡಿಸಿ ಬಸ್ ಬಿಡುವ ವ್ಯವಸ್ಥೆ ಮಾಡುತ್ತೇನೆ. ಜೊತೆಗೆ ಮುದುವೆಯಾಗಲ್ಲ ಎಂದು ಹೇಳಿದ್ದ ಯುವತಿಗೆ ಗಂಡು ಹುಡುಕಿ ಮದುವೆ ಕೂಡಾ ಮಾಡಿಸುವೆ ಅಂತ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.

ರಸ್ತೆ ಆಗುವವರೆಗೂ ಮದುವೆಯಾಗಲ್ಲ ಎಂದು ಪಟ್ಟು ಹಿಡಿದ ಯುವತಿಗೆ ಗುಡ್ ನ್ಯೂಸ್; ರಸ್ತೆ ಮಾತ್ರವಲ್ಲ ನಿನ್ನ ಮದುವೆ ಕೂಡಾ ಮಾಡುತ್ತೇನೆ ಎಂದ ದಾವಣಗೆರೆ ಡಿಸಿ
ಹಾಳಾಗಿರುವ ರಸ್ತೆ, ಮದುವೆಯಾಗಲ್ಲ ಎಂದು ಪಟ್ಟು ಹಿಡಿದ ಯುವತಿ
Follow us
TV9 Web
| Updated By: sandhya thejappa

Updated on:Sep 16, 2021 | 5:40 PM

ದಾವಣಗೆರೆ: ನಮ್ಮೂರಿಗೆ ರಸ್ತೆ ಆಗುವ ತನಕ ನಾನು ಮದ್ವೆನೇ ಆಗಲ್ಲ ಎಂದು ಪಟ್ಟು ಹಿಡಿದಿದ್ದ ಯುವತಿಗೆ ಮದುವೆ ಭಾಗ್ಯ ಬಂದಿದೆ. ದಾವಣಗೆರೆ ತಾಲೂಕಿನ ರಾಂಪುರ ಗ್ರಾಮಕ್ಕೆ ಸೂಕ್ತ ರಸ್ತೆಯಿಲ್ಲ. ಹೀಗಾಗಿ ಈ ಗ್ರಾಮದ ಯುವಕ- ಯುವತಿಯರಿಗೆ ಮದುವೆ ಭಾಗ್ಯ ಇಲ್ಲದಂತಾಗಿದೆ. ಯುವತಿಯೊಬ್ಬಳು ಕೂಡ ರಸ್ತೆ ಆಗುವವರೆಗೆ ಮದುವೆ ಆಗಲ್ಲ ಅಂತ ಪಟ್ಟು ಹಿಡಿದಿದ್ದಳು. ಈಗ ಜಿಲ್ಲಾಧಿಕಾರಿ ರಾಂಪುರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಸಮಸ್ಯೆಯನ್ನು ಆಲಿಸಿದ್ದಾರೆ. ಈ ವೇಳೆ ನಾಳೆಯಿಂದಲೇ ರಸ್ತೆ ಕಾಮಗಾರಿಗೆ ಆರಂಭಕ್ಕೆ ಆದೇಶ ಮಾಡಿದ್ದಾರೆ.

ರಸ್ತೆ ಮಾಡಿಸಿ ಬಸ್ ಬಿಡುವ ವ್ಯವಸ್ಥೆ ಮಾಡುತ್ತೇನೆ. ಜೊತೆಗೆ ಮುದುವೆಯಾಗಲ್ಲ ಎಂದು ಹೇಳಿದ್ದ ಯುವತಿಗೆ ಗಂಡು ಹುಡುಕಿ ಮದುವೆ ಕೂಡಾ ಮಾಡಿಸುವೆ ಅಂತ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ. ಅಧಿಕಾರಿಗಳ ತಂಡದೊಂದಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಗ್ರಾಮಕ್ಕೆ ನಡೆದುಕೊಂಡು ಹೋದರು. ರಸ್ತೆಯ ಸ್ಥಿತಿಯನ್ನ ಕಣ್ಣಾರೆ ಕಂಡ ಜಿಲ್ಲಾಧಿಕಾರಿ ಗ್ರಾಮದ ಬೇವಿನ ಮರದ ಕಟ್ಟೆಯ ಮೇಲೆ ಕುಳಿತು ಗ್ರಾಮದ ಪ್ರಮುಖರ ಜೊತೆ ಮಾತಾಡಿದರು. ಇದಕ್ಕೆಲ್ಲಾ ಕಾರಣ ಮದುವೆಯಾಗಲ್ಲ ಅಂತ ಪಟ್ಟು ಹಿಡಿದಿದ್ದ ಯುವತಿ ಬಿಂದು.

ಬಿಂದು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಕೆಲಸ ನಿರ್ವಹಿಸುತ್ತಿದ್ದಾಳೆ. ನಮ್ಮೂರಿಗೆ ರಸ್ತೆ ಆಗುವ ತನಕ ಮದುವೆ ಆಗಲ್ಲ ಎಂದು ಪ್ರಧಾನಿ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆದು ಸುದ್ದಿ ಮಾಡಿದ್ದಳು. ಈ ಬಗ್ಗೆ ಟಿವಿ9 ವರದಿ ಮಾಡಿತ್ತು. ವರದಿ ನೋಡಿದ ಜಿಲ್ಲಾಧಿಕಾರಿಗಳು ನೇರ ಗ್ರಾಮಕ್ಕೆ ಬಂದು ನಾಳೆಯಿಂದಲೇ ರಸ್ತೆ ಕಾಮಗಾರಿ ಆರಂಭಿಸಲು ತಿಳಿಸಿದ್ದಾರೆ. ಇದೇ ವೇಳೆ ಪತ್ರ ಬರೆದ ಬಿಂದುಳಿಗೆ ಪೋನ್ ಮಾಡಿ, ನಿಮ್ಮೂರಿಗೆ ರಸ್ತೆ, ಬಸ್ಸ್ ಹಾಗೂ ಮೊಬೈಲ್ ನೆಟ್​ವರ್ಕ್​ ವ್ಯವಸ್ಥೆ ಮಾಡುವೆ. ಜೊತೆಗೆ ನಿನಗೊಂದು ಗಂಡು ಹುಡುಕಿ ಮದುವೆ ಕೂಡಾ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ಸೂಕ್ತ ವ್ಯವಸ್ಥೆ ಇಲ್ಲದಕ್ಕೇ ಈ ಗ್ರಾಮದವರಿಗಿಲ್ಲ ಮದುವೆ ಭಾಗ್ಯ, ನಮ್ಮೂರಿಗೆ ರಸ್ತೆ ಆಗುವವರೆಗೂ ಮದುವೆ ಆಗಲ್ಲ ಎಂದು ಯುವತಿ ಪಟ್ಟು

ಗುಜರಾತ್​​ನಲ್ಲಿ ಸಂಪೂರ್ಣ ಹೊಸ ಕ್ಯಾಬಿನೆಟ್ ರಚನೆ ​; ರಾಜ್ಯಪಾಲರಿಗೂ ಒಲಿದ ಸಚಿವ ಸ್ಥಾನ, 24 ಮಂತ್ರಿಗಳ ಪಟ್ಟಿ ಹೀಗಿದೆ

(Davanagere District Collector has responded to the young woman who did not marry until she was on the road)

Published On - 5:27 pm, Thu, 16 September 21

ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ
Daily Devotional: ದೇವರು ಯಾರಿಗೆ ಸಹಾಯ ಮಾಡುತ್ತಾನೆ ಗೊತ್ತಾ?
Daily Devotional: ದೇವರು ಯಾರಿಗೆ ಸಹಾಯ ಮಾಡುತ್ತಾನೆ ಗೊತ್ತಾ?
Daily Horoscope: ಕುಜ ಸಿಂಹ ರಾಶಿಯಲ್ಲಿ ಕೇತುವಿನೊಂದಿಗೆ ಸಂಚಾರ
Daily Horoscope: ಕುಜ ಸಿಂಹ ರಾಶಿಯಲ್ಲಿ ಕೇತುವಿನೊಂದಿಗೆ ಸಂಚಾರ