ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ; ಪ್ರಿನ್ಸಿಪಾಲ್‌, ಮೇಲ್ವಿಚಾರಕಿ ಅಮಾನತು ಮಾಡಿದ ಡಿಸಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 28, 2023 | 6:56 PM

ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ ಹಿನ್ನಲೆ ಹಾಸ್ಟೆಲ್‌ನಲ್ಲಿ ನೀಡಿದ್ದ ಊಟದಲ್ಲಿ ಹುಳು ಇರುವ ಬಗ್ಗೆ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ ಹಿನ್ನೆಲೆ ಅಮಾನತು ಆದೇಶಗೊಳಿಸಿದ್ದಾರೆ. ಜೊತೆಗೆ ಅಮಾನತುಗೊಂಡವರು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಡಿಸಿ ಖಡಕ್​ ಸೂಚನೆ ನೀಡಿದ್ದಾರೆ.

ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ; ಪ್ರಿನ್ಸಿಪಾಲ್‌, ಮೇಲ್ವಿಚಾರಕಿ ಅಮಾನತು ಮಾಡಿದ ಡಿಸಿ
ದಾವಣಗೆರೆ ಜಿಲ್ಲಾಧಿಕಾರಿ
Follow us on

ದಾವಣಗೆರೆ, ನ.28: ಜಿಲ್ಲೆಯ ಚನ್ನಗಿರಿ(Channagiri)ತಾಲೂಕಿನ ಕಾಕನೂರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ(Kittur Rani Channamma Residential School) ಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಿನ್ಸಿಪಾಲ್‌ ಮಂಜುನಾಥ ಪುರದ್ ಹಾಗೂ ವಸತಿ ಶಾಲೆಯ ಮೇಲ್ವಿಚಾರಕಿ ನಸೀನಾ ಬಾನು ಅವರನ್ನು ಸೇವೆಯಿಂದ  ಅಮಾನತುಗೊಳಿಸಿ ದಾವಣಗೆರೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಆದೇಶಿಸಿದ್ದಾರೆ.

ಹಾಸ್ಟೆಲ್‌ನಲ್ಲಿ ನೀಡಿದ್ದ ಊಟದಲ್ಲಿ ಹುಳು ಇರುವ ಬಗ್ಗೆ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ ಹಿನ್ನೆಲೆ ಅಮಾನತು ಆದೇಶಗೊಳಿಸಿದ್ದಾರೆ. ಜೊತೆಗೆ ಅಮಾನತುಗೊಂಡವರು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಡಿಸಿ ಖಡಕ್​ ಸೂಚನೆ ನೀಡಿದ್ದಾರೆ. ಇನ್ನು ಜಿಲ್ಲಾಸ್ಪತ್ರೆ ಸೇರಿದಂತೆ ಸಂತೆಬೆನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಹಾಗೂ ಪೋಷಕರು ವಸತಿ ಶಾಲೆ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.

ಇದನ್ನೂ ಓದಿ:ದಾವಣಗೆರೆ: ವಸತಿ ಶಾಲೆಯಲ್ಲಿ ಊಟ ಮಾಡಿದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಘಟನೆ ವಿವರ

ನಿನ್ನೆ(ನ.28) ಮಧ್ಯಾಹ್ನ ಊಟ ಮಾಡಿದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದರು. ವಾಂತಿ ಭೇದಿ ಶುರುವಾದ ತಕ್ಷಣವೇ ಅಸ್ವಸ್ಥ ಮಕ್ಕಳಿಗೆ ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದರಲ್ಲಿ ಐವರು ಮಕ್ಕಳು ಗಂಭೀರ ಅಸ್ವಸ್ಥಗೊಂಡಿದ್ದ ಹಿನ್ನಲೆ ಕೂಡಲೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಈ ಮಧ್ಯೆ, ಹಾಸ್ಟೆಲ್‌ನಲ್ಲಿ ಸ್ವಚ್ಛತೆ ಕಾಪಾಡದೆ ಮಕ್ಕಳಿಗೆ ಆಹಾರ ನೀಡುತ್ತಿರುವ ಆರೋಪ ಕೇಳಿಬಂದಿದೆ. ವಸತಿ ಶಾಲೆ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Tue, 28 November 23