AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere: ಮಾಜಿ ಶಾಸಕನ ಸಮಾಧಿ ಧ್ವಂಸ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಶೋಷಿತರ ಕಲ್ಯಾಣಕ್ಕಾಗಿ ನಿತ್ಯ ಹೋರಾಟ, ಭರಮಸಾಗರದ ಮಾಜಿ ಶಾಸಕ ಜೊತೆಗೆ ಖ್ಯಾತ ನೇತ್ರ ತಜ್ಞ ಆಗಿದ್ದ ಡಾ.ಬಿ.ಎಂ. ತಿಪ್ಪೇಸ್ವಾಮೀಯವರ ಸಮಾಧಿ ಮೇಲೆ ರಿಯಲ್ ಎಸ್ಟೇಟ್ ದಂಧೆಕೋರರು ಕಣ್ಣು ಬಿದ್ದಿದೆ. ಇದ್ದಕ್ಕಿದಂತೆ ಡಾ.ಬಿ.ಎಂ. ತಿಪ್ಪೇಸ್ವಾಮಿ ಸೇರಿದಂತೆ ನಾಲ್ಕು ಜನರ ಸಮಾಧಿ ಧ್ವಂಸ ಮಾಡಲಾಗಿದೆ.

Davanagere: ಮಾಜಿ ಶಾಸಕನ ಸಮಾಧಿ ಧ್ವಂಸ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ವಿವಿಧ ಸಂಘಟನೆಗಳಿಂದ ಪ್ರತಿಭಟನೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 26, 2022 | 8:45 AM

Share

ದಾವಣಗೆರೆ: ಉನ್ನತ ವಿದ್ಯಾಭ್ಯಾಸ ಮಾಡಿ ಶೋಷಿತರ, ಬಡವರ ಸೇವೆ ಮಾಡಿದ ಮಹಾಪುರುಷ. ಡಾ.ಬಿ.ಎಂ. ತಿಪ್ಪೇಸ್ವಾಮಿ (dr.B.M thippeswamy), ಒಂದು ಕಾಲದಲ್ಲಿ ಖ್ಯಾತ ನೇತ್ರತಜ್ಞ. ಜೊತೆಗೆ ಭರಮಸಾಗರ ಕ್ಷೇತ್ರದ ಶಾಸಕ, ಕರ್ನಾಟಕ ಲೋಕ ಸೇವಾ ಆಯೋಗದ ಸದಸ್ಯ. ಶೋಷಿತರ ಕಲ್ಯಾಣಕ್ಕಾಗಿ ಆದಿ‌ಕರ್ನಾಟಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು. ಇವರು 1990 ರಲ್ಲಿ ಸಾವನ್ನಪ್ಪಿದ್ದರು. ಆಗ ಜಮೀನು ಆಗಿದ್ದ ಪ್ರದೇಶ ಈಗ ವಿದ್ಯುತ್ ನಗರ ಎಂದು ಹೈಟೆಕ್ ಆಗಿದೆ. ಈ ಪ್ರದೇಶದಲ್ಲಿ ಇವರ ಸಮಾಧಿ ಇದೆ. ಇವರ ಪತ್ನಿ ಯಲ್ಲಮ್ಮ, ಪುತ್ರರಾದ ಮಲ್ಲಿಕಾರ್ಜುನ, ಡಾ.ಬಿ.ಟಿ.ಮೋಹನ್ ಹೀಗೆ ನಾಲ್ಕು ಜನರ ಸಮಾಧಿ ಇಲ್ಲಿದೆ. ಇದನ್ನು ಮಾಜಿ ಸಚಿವರಾದ ದಿವಂಗತ ಬಿ. ಬಸಲಿಂಗಪ್ಪ ಅವರು ಡಾ. ತಿಪ್ಪೇಸ್ವಾಮಿ ಹಿರಿಯ ಪುತ್ರ ಮಲ್ಲಿಕಾರ್ಜುನ ಹೆಸರಿಗೆ ನೀಡಿದ ಜಮೀನು.

ಈ ಜಮೀನನ್ನು ಕೆಲವರು ನಾವು ಖರೀದಿಸಿದ್ದೇವೆ ಎಂದು ಹೇಳಿ ಸಮಾಧಿಯನ್ನು ದ್ವಂಸಗೊಳಿಸಿದ್ದಾರೆ. ಇಂತಹ ಘಟನೆಯನ್ನು ಖಂಡಿಸಿ ದಾವಣಗೆರೆಯಲ್ಲಿ ನ.24ರಂದು ದೊಡ್ಡ ಪ್ರತಿಭಟನೆ ನಡೆಯಿತು. ವಿವಿಧ ಪ್ರಗತಿಪರ ಹಾಗೂ ದಲಿತ ಸಂಘಟನೆಗಳು ಬೀದಿಗಳಿದು ಹೋರಾಟ ನಡೆಸಿದವು. ಇದಕ್ಕಾಗಿ ಬೆಂಗಳೂರಿನಿಂದ ಹಿರಿಯ ಚಿಂತಕ ದ್ವಾರಕಾನಾಥ ಬಂದಿದ್ದರು. ಮೂಲಗಳ ಪ್ರಕಾರ ಇದು ಎರಡು ಎಕರೆ ಇಪ್ಪತ್ತು ಗುಂಟೆ ಜಮೀನು. ಇದರಲ್ಲಿ ಒಂದಿಷ್ಟು ಜಮೀನು ಮಾರಾಟ ಮಾಡಲಾಗಿದೆ. ಜೊತೆಗೆ 1990 ರಿಂದ 2016 ವರೆಗೆ ಅಂದರೆ ಡಾ.ತಿಪ್ಪೇಸ್ವಾಮಿ ಅವರ ನಿಧನದಿಂದ ಅವರ ಪುತ್ರ ಮಲ್ಲಿಕಾರ್ಜುನ ಸಾವನ್ನಪ್ಪುವ ತನಕ ಇವರ ಕುಟುಂಬ ಸದಸ್ಯರ ಎಲ್ಲ ಸಮಾಧಿ ಇಲ್ಲಿಯೇ ಇದೆ. ಅದಕ್ಕೊಂದು ಗೋಡೆ ಸಹ ಕಟ್ಟಿಸಲಾಗಿದೆ. ಇಷ್ಟಿದ್ದರು ಸಹ ಜೆಸಿಬಿಯಿಂದ ಸಮಾಧಿಯನ್ನು ಧ್ವಂಸ ಮಾಡಿದ್ದಾರೆ.

ರಿಯಲ್ ಎಸ್ಟೇಟ್ ದಂಧೆಗಾಗಿ ಸಮಾಜ ಸುಧಾರಕನ ಸಮಾಧಿ ನಾಶ ಮಾಡಿದ್ದಾರೆ. ಈ ಬಗ್ಗೆ ಕೆಟಿಜೆ ಪೊಲೀಸ್ ಠಾಣೆ ಯಲ್ಲಿ ದೂರು ಸಹ ದಾಖಲಿಸಿದ್ದಾರೆ. ನಿಜಕ್ಕೂ ಈ ಜಮೀನು ಯಾರಿಂದ ಯಾರು ಖರೀದಿಸಿದ್ದಾರೆ. ಹಾಗೂ ಸಮಾಧಿ ಒಡೆಯುವಂತ ದುಷ್ಟ ಸಾಹಸಕ್ಕೆ ಹೋದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಮಾತುಗಳು ಕೇಳಿ ಬರುತ್ತಿದೆ. ದಾವಣಗೆರೆ ನಗರದಲ್ಲಿ ದಿನದಿಂದ ದಿನಕ್ಕೆ ರಿಯಲ್ ಎಸ್ಟೇಟ್ ದಂಧೆ ಜೀವ ಪಡೆದುಕೊಳ್ಳುತ್ತಿದೆ. ಇದಕ್ಕಾಗಿ ಕೊಲೆ ಸುಲಿಗೆ ಸಹ‌ ನಡೆಯುತ್ತಿದೆ. ಈ ಜಮೀನು ಖರೀದಿ ಮಾಡಿದವರು ಯಾರು. ಅವರು ಮತ್ಯಾರಿಗೆ ಕೊಟ್ಟರು. ಈ ಜಮೀನಿನ ಮೂಲ ದಾಖಲೆಗಳು ಡಾ.ತಿಪ್ಪೇಸ್ವಾಮಿ ಅವರ ಕುಟುಂಬದವರ ಬಳಿ‌ ಇರಬಹುದಾ  ಎಂಬ ಎಲ್ಲ ಪ್ರಶ್ನೆಗೆ ಉತ್ತರ ಹುಡುಕ ಬೇಕಾಗಿದೆ.

ಇದನ್ನೂ ಓದಿ:ಬೆಣ್ಣೆ ನಗರಿ ದಾವಣಗೆರೆಯಲ್ಲಿಂದು ಬಿಜೆಪಿ ಶಕ್ತಿ ಪ್ರದರ್ಶನ, ಜನಸಂಕಲ್ಪ ಸಮಾವೇಶಕ್ಕೆ ಸಿದ್ಧವಾಯ್ತು ಬೃಹತ್ ವೇದಿಕೆ

ಸದ್ಯ ಸ್ಥಳಕ್ಕೆ ಕೆಟಿಜೆ ನಗರ‌ ಠಾಣೆಯ ಪೊಲೀಸರು ಭೇಟಿ ನೀಡಿ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ. ಎನೇ ಆಗಲಿ ಡಾ.ತಿಪ್ಪೇಸ್ವಾಮಿಯಂತ‌ಹ ಮಹಾನ್ ವ್ಯಕ್ತಿಯ ಸಮಾಧಿಗೆ ಈ ಸ್ಥಿತಿ ಬರಬಾರದಿತ್ತು. ಇದು ಇನ್ನಷ್ಟು ತೀವ್ರವಾದ ಹೋರಾಟಕ್ಕೆ ತಿರುಗುವ ಮೊದಲು ಜಿಲ್ಲಾಡಳಿತ ಎಚ್ಚತ್ತುಕೊಂಡು ಕ್ರಮ ಕೈಗೊಳ್ಳಬೇಕಾಗಿದೆ.

ವರದಿ: ಬಸವರಾಜ್ ದೊಡ್ಮನಿ ಟಿವಿ9 ದಾವಣಗೆರೆ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು