AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯ ಗಾಜಿನ ಮನೆಗೆ ಪ್ರವಾಸಿಗರು ಫಿದಾ; ಧಾರಾವಾಹಿ, ಸಿನಿಮಾ ಶೂಟಿಂಗ್​ಗಳಿಗೂ ಇದು ನೆಚ್ಚಿನ ತಾಣ

ದಾವಣಗೆರೆಯ ಕುಂದವಾಡ ಕೆರೆ ಪಕ್ಕ ತಲೆ ಎತ್ತಿರುವ ಗಾಜಿನ ಮನೆ ಈಗ ಜಿಲ್ಲೆಯ ಪ್ರವಾಸೋದ್ಯಮಕ್ಕೇ ಹೊಸ ಸ್ಪರ್ಶ ಕೊಟ್ಟಿದೆ. ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಗಾಜಿನ ಮನೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡ್ತಿದ್ದಾರೆ.

ದಾವಣಗೆರೆಯ ಗಾಜಿನ ಮನೆಗೆ ಪ್ರವಾಸಿಗರು ಫಿದಾ; ಧಾರಾವಾಹಿ, ಸಿನಿಮಾ ಶೂಟಿಂಗ್​ಗಳಿಗೂ ಇದು ನೆಚ್ಚಿನ ತಾಣ
ದಾವಣಗೆರೆಯ ಗಾಜಿನ ಮನೆ
TV9 Web
| Edited By: |

Updated on: Jan 02, 2022 | 8:02 AM

Share

ದಾವಣಗೆರೆ: ವಿಶಾಲವಾದ 28 ಎಕರೆ ಪ್ರದೇಶ. ಪಕ್ಕದಲ್ಲಿಯೇ ಪ್ರಸಿದ್ಧ ಕುಂದವಾಡ ಕೆರೆ. ಬೆಂಗಳೂರಿನ ಲಾಲ್ಬಾಗ್ನಲ್ಲಿನ ಗಾಜಿನ ಮನೆಗಿಂತ ಹತ್ತು ಪಟ್ಟು ದೊಡ್ಡದಾದ ಕಟ್ಟಡ. ಬೆಣ್ಣೆನಗರಿಯ ಗ್ಲಾಸ್ಹೌಸ್ ಈಗ ಪ್ರವಾಸಿಗರ ಹಾಟ್ ಸ್ಫಾಟ್. ಧಾರಾವಾಹಿ, ಸಿನಿಮಾ ಶೂಟಿಂಗ್ಗಳಿಗೂ ನೆಚ್ಚಿನ ತಾಣ.

ದಾವಣಗೆರೆಯ ಕುಂದವಾಡ ಕೆರೆ ಪಕ್ಕ ತಲೆ ಎತ್ತಿರುವ ಗಾಜಿನ ಮನೆ ಈಗ ಜಿಲ್ಲೆಯ ಪ್ರವಾಸೋದ್ಯಮಕ್ಕೇ ಹೊಸ ಸ್ಪರ್ಶ ಕೊಟ್ಟಿದೆ. ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಗಾಜಿನ ಮನೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡ್ತಿದ್ದಾರೆ. ಗ್ಲಾಸ್ ಹೌಸ್ ಎದುರು ನಿಂತು ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಿಸ್ತಿದ್ದಾರೆ.

ಇನ್ನು ಮೈಸೂರು ದಸರಾ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ ಸೇರಿದಂತೆ ಮಕ್ಕಳನ್ನ ಆಕರ್ಷಿಸಲು ನಾನಾ ಗೇಮ್ಸ್, ಪಕ್ಕದಲ್ಲೇ ಇರೋ ವಿಶಾಲವಾದ ಕೆರೆ ಪರಿಸರಕ್ಕೆ ಪ್ರವಾಸಿಗರು ಮಾರುಹೋಗ್ತಿದ್ದಾರೆ. KRS ಮಾದರಿಯಲ್ಲೇ ಸಂಗೀತಯುಕ್ತ ಬೆಳಕಿನ ಕಾರಂಜಿಯೂ ಇಲ್ಲಿ ರೂಪುಗೊಳ್ತಿದ್ದು, ಸ್ಮಾರ್ಟ್ ಸಿಟಿ ಯೋಜನೆಯಡಿ ವಿವಿಧ ಕಾಮಗಾರಿಗಳು ನಡೀತಿವೆ. ಇವುಗಳ ಜೊತೆಗೆ ಫ್ರೀ ವೆಡ್ಡಿಂಗ್, ಸಿನಿಮಾ, ಧಾರವಾಹಿ ಚಿತ್ರೀಕರಣಗಳಿಗೂ ಈ ಗಾಜಿನ ಮನೆ ಹೆಚ್ಚಾಗಿ ಬಳಕೆಯಾಗ್ತಿರೋದು, ಪ್ರವಾಸೋದ್ಯಮದ ಆದಾಯ ಹೆಚ್ಚಿಸ್ತಿದೆ.

ದಾವಣಗೆರೆಯಲ್ಲಿ ಈವರೆಗೂ ಇಂತಹದ್ದೊಂದು ಪ್ರವಾಸಿ ತಾಣವೇ ಇರಲಿಲ್ಲ. ಪ್ರವಾಸೋದ್ಯಮ ಅಂದ್ರೆ ಪಕ್ಕದ ಶಿವಮೊಗ್ಗ, ಹಾವೇರಿಗೆ ಹೋಗುವಂತಹ ಸ್ಥಿತಿ ಇತ್ತು. ಆದ್ರೀಗ ಗಾಜಿನ ಮನೆಯ ನಿರ್ಮಾಣ ಈ ಎಲ್ಲಾ ಕೊರತೆಗಳನ್ನ ನೀಗಿಸಿದೆ. ಸುತ್ತಮಯತ್ತಲಿನ ಜಿಲ್ಲೆಗಳ ಜನರನ್ನು ತನ್ನತ್ತ ಸೆಳೆಯುತ್ತಿದೆ.

ಒಟ್ನಲ್ಲಿ ಬೆಣ್ಣೆ ದೋಸೆಯ ಜೊತೆಗೆ ಗಾಜಿನ ಮನೆಯಿಂದಲೂ ಸದ್ಯ ದಾವಣಗೆರೆ ಫೇಮಸ್ ಆಗ್ತಿದೆ. ಸಂಗೀತ ಕಾರಂಜಿಯೂ ಶೀಘ್ರ ಆರಂಭಗೊಂಡಿದ್ದೇ ಆದಲ್ಲಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಬಹುದೆಂಬ ನಿರೀಕ್ಷೆ ಪ್ರವಾಸೋದ್ಯಮ ಇಲಾಖೆಯದ್ದು.

ಬಸವರಾಜ್ ದೊಡ್ಮನಿ ಟಿವಿ, ದಾವಣಗೆರೆ

glass house 1

ದಾವಣಗೆರೆಯ ಗಾಜಿನ ಮನೆ

glass house 2

ದಾವಣಗೆರೆಯ ಗಾಜಿನ ಮನೆಗೆ ಪ್ರವಾಸಿಗರು ಫಿದಾ

glass house 3

ದಾವಣಗೆರೆಯ ಗಾಜಿನ ಮನೆಗೆ ಪ್ರವಾಸಿಗರು ಫಿದಾ

ಇದನ್ನೂ ಓದಿ: ಕೊವಿಡ್‌ನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಎಂ.ಪಿ. ರೇಣುಕಾಚಾರ್ಯ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?