AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ ಸೇವಿಸಿ ಶಾಲಾ ಮುಖ್ಯಶಿಕ್ಷಕ ಆತ್ಮಹತ್ಯೆ ಪ್ರಕರಣ: ಐವರು ಶಿಕ್ಷಕರು ಸೇರಿ 10 ಮಂದಿ ವಿರುದ್ಧ ಎಫ್​​ಐಆರ್​

ದಾವಣಗೆರೆ ಜಿಲ್ಲೆಯ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಜಯಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾತಿನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಐವರು ಶಿಕ್ಷಕರು ಸೇರಿದಂತೆ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪತಿ ಸಾವಿಗೆ ಕಿರುಕುಳವೇ ಕಾರಣವೆಂದು ಆರೋಪಿಸಿ ಜಯಪ್ಪ ಅವರ ಪತ್ನಿ ಅಂಜಿನಮ್ಮ ದೂರು ನೀಡಿದ್ದರು.

ವಿಷ ಸೇವಿಸಿ ಶಾಲಾ ಮುಖ್ಯಶಿಕ್ಷಕ ಆತ್ಮಹತ್ಯೆ ಪ್ರಕರಣ: ಐವರು ಶಿಕ್ಷಕರು ಸೇರಿ 10 ಮಂದಿ ವಿರುದ್ಧ ಎಫ್​​ಐಆರ್​
ಮೃತ ಮುಖ್ಯ ಶಿಕ್ಷಕ ಜಯಪ್ಪImage Credit source: Tv9 Kannada
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jun 18, 2026 | 6:09 PM

Share

ದಾವಣಗೆರೆ, ಜೂನ್​​ 18: ವಿಷ ಸೇವಿಸಿ ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ(54) ಆತ್ಮಹತ್ಯೆ ಪ್ರಕರಣ ಸಂಬಂಧ ಐವರು ಶಿಕ್ಷಕರು, ಬಿಸಿಯೂಟದ ನಾಲ್ವರು ಅಡುಗೆ ಸಿಬ್ಬಂದಿ, ಸಿಆರ್​​ಪಿ, ಬಿಆರ್​ಪಿ ಸೇರಿದಂತೆ 10 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಮಾನಸಿಕ ಹಿಂಸೆ, ಕಿರುಕುಳ ಹಾಗೂ ಜಾತಿನಿಂದನೆ ಆರೋಪದಡಿ ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ,ಮಹಾಂತೇಶ್ ಗೌಳಿ, ಅಡುಗೆ ಸಹಾಯಕರಾದ ಸುಮಾ, ಚೆನ್ನಮ್ಮ, ರೂಪಾ, ವಿಜಯಮ್ಮ ಸೇರಿದಂತೆ 10 ಜನರ ವಿರುದ್ಧ ಮಲೆಬೆನ್ನೂರು ಠಾಣೆಗೆ ಜಯಪ್ಪ ಪತ್ನಿ ಅಂಜನಮ್ಮ ದೂರು ನೀಡಿದ್ದರು.

ಅಂಜನಮ್ಮ ದೂರಿನಲ್ಲಿ ಏನಿದೆ?

ಕಳೆದ 10 ತಿಂಗಳಿಂದ ಕೊಕ್ಕನೂರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪತಿ ಜಯಪ್ಪಗೆ ನಿತ್ಯವೂ ಹಿಂಸೆ ನೀಡಲಾಗುತ್ತಿತ್ತು. ನಾವು ಪರಿಶಿಷ್ಟ ಜಾತಿಗೆ ಸೇರಿದ್ದರಿಂದ ಜಾತಿ ನಿಂದನೆ ಮಾಡುತ್ತಿದ್ದರು. ಈ ವಿಚಾರವನ್ನು ಹತ್ತಾರು ಸಲ ಪತಿ ಜಯಪ್ಪ ತನಗೆ ಹೇಳಿದ್ದರು. ಇವರು ನೀಡಿದ ಮಾನಸಿಕ ಹಿಂಸೆಯೇ ತನ್ನ ಪತಿ ಆತ್ಮಹತ್ಯೆಗೆ ಕಾರಣ ಎಂದು ದೂರಿನಲ್ಲಿ ಅಂಜಿನಮ್ಮ ಉಲ್ಲೇಖಿಸಿದ್ದರು.

ಇದನ್ನೂ ಓದಿ: ಏಕಾಏಕಿ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು; ಹೆತ್ತ ತಾಯಿ ಕಣ್ಣೆದುರೇ ಮಗನ ದುರಂತ ಅಂತ್ಯ!

ಕೊಕ್ಕನೂರು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ನಡುವೆ ಒಳಜಗಳದ ಆರೋಪ ಕೇಳಿಬಂದಿತ್ತು. ಸಹಶಿಕ್ಷಕರು, ಅಡುಗೆ ಸಹಾಯಕರು ಮತ್ತು ಮುಖ್ಯ ಶಿಕ್ಷಕನ ನಡುವೆ ಮನಸ್ಥಾಪದ ಹಿನ್ನೆಲೆ ಎಸ್​​ಡಿಎಂಸಿ ಹಾಗೂ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಂಧಾನ ಸಭೆ ನಡೆದಿತ್ತು. ಸಭೆ ಸೇರಿದ್ದ ವೇಳೆ ಶಾಲಾ ಶೌಚಾಲಯಕ್ಕೆ ಹೋಗಿ ಮುಖ್ಯ ಶಿಕ್ಷಕ ಜಯಪ್ಪ ವಿಷ ಸೇವಿಸಿದ್ದರು. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು. ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್