ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷನಾಗಿದ್ದು ನನ್ನ ಸೌಭಾಗ್ಯ: ಶಾಮನೂರು ಶಿವಶಂಕರಪ್ಪ

ನಗರದ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ಆಯೋಜಿಸಿರುವ ಅಖಿಲ ಭಾರತ ವೀರಶೈವ ಲಿಂಗಾಯತ 24ನೇ ಮಹಾಸಭೆಯಲ್ಲಿ ಮಾತನಾಡಿದ ಹಿರಿಯ ಶಾಸಕ, ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಅಖಿಲ ಭಾರತ ವೀರಶೈವ ಮಹಾ ಸಭೆಯ 23 ಅಧ್ಯಕ್ಷನಾಗಿದ್ದು ನನ್ನ ಸೌಭಾಗ್ಯ ಎಂದು ಹೇಳಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷನಾಗಿದ್ದು ನನ್ನ ಸೌಭಾಗ್ಯ: ಶಾಮನೂರು ಶಿವಶಂಕರಪ್ಪ
ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Dec 23, 2023 | 10:40 PM

ದಾವಣಗೆರೆ, ಡಿಸೆಂಬರ್​ 23: ಅಖಿಲ ಭಾರತ ವೀರಶೈವ ಮಹಾಸಭೆಯ (VeeraShaiva Mahasabha Adhiveshana) ಅಧ್ಯಕ್ಷನಾಗಿದ್ದು ನನ್ನ ಸೌಭಾಗ್ಯ ಎಂದು ಹಿರಿಯ ಶಾಸಕ, ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ನಗರದ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ಆಯೋಜಿಸಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭೆಯ 24ನೇ ಮಹಾಸಭೆಯಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮಾಜ ವಿಭಜಿಸುವ ಪ್ರಯತ್ನಗಳು ನಡೆದವು. ಸಮಾಜದ ವಿಭಜನೆಗೆ ಅವಕಾಶ ಕೊಟ್ಟಿಲ್ಲ, ಮುಂದೆಯೂ ಸಹ ಕೊಡಲ್ಲ ಎಂದು ಹೇಳಿದ್ದಾರೆ.

ವೀರಶೈವ ಲಿಂಗಾಯತ ಸಮಾಜದ ಅಭಿವೃದ್ಧಿಗೆ ಚಿಂತನೆ ನಡೆಯಬೇಕು. ಹಾನಗಲ್ ಕುಮಾರಸ್ವಾಮಿಗಳು ಸಮಾಜವನ್ನು ಸಂಘಟನೆ ಮಾಡಿದ್ದಾರೆ. ಸಮಗ್ರ ವೀರಶೈವರ ಕಲ್ಯಾಣಕ್ಕಾಗಿ ಸ್ವಾಮೀಜಿ ಸಂಘಟನೆ ಮಾಡಿದ್ದಾರೆ. ಇಂತಹ ಸಂಘಟನೆಯ ಅಧ್ಯಕ್ಷನಾಗಿದ್ದು ನನ್ನ ಸೌಭಾಗ್ಯ ಎಂದಿದ್ದಾರೆ.

ಲಿಂಗಾಯತ ಸಮಾಜವನ್ನ ನಿರ್ಲಿಕ್ಷಿಸುವುದು ಸರಿಯಲ್ಲ: ಡಾ‌. ಚನ್ನಸಿದ್ದರಾಮ ಸ್ವಾಮೀಜಿ

ಶ್ರೀಶೈಲ ಗುರುಪೀಠದ ಡಾ‌. ಚನ್ನಸಿದ್ದರಾಮ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಲಿಂಗಾಯತ ಸಮಾಜವನ್ನ ನಿರ್ಲಿಕ್ಷಿಸುವುದು ಸರಿಯಲ್ಲ. ಈ ಹಿಂದಿನ ಚನ್ನಪ್ಪ ರೆಡ್ಡಿ ಆಯೋಗದ ಪ್ರಕಾರ 17 ರಷ್ಟು ಇದ್ದಾರೆ ಎಂದು ಹೇಳುತ್ತು. ಈಗಿನ ಜಾತಿ ಗಣತಿ ಪ್ರಕಾರ 10 ರಷ್ಟು ರಾಜ್ಯದಲ್ಲಿ ಲಿಂಗಾಯತರು ಇದ್ದಾರೆ ಅಂದರೆ ಏನು ಅರ್ಥ. ಈಗ ಉದ್ದೇಶಿತ ಜಾತಿ ಗಣತಿ ಸಾರಾಸಗಟಾಗಿ ತಿರಸ್ಕರಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಶಾಮನೂರು ಶಿವಶಂಕರಪ್ಪರ ಮೆರವಣಿಗೆ ಮೂಲಕ ವೀರಶೈವ ಮಹಾಸಭಾ ಅಧಿವೇಶನಕ್ಕೆ ಚಾಲನೆ

ವೀರಶೈವ ಲಿಂಗಾಯತರು ಎಲ್ಲರು ಒಂದು. ವಿಶ್ವವೇ ನಮ್ಮ ಬಂಧು ಇದ್ದಂತೆ. ಈ ಹಿಂದೆ ಪ್ರತ್ಯೇಕ ಸ್ವತಂತ್ರ ಲಿಂಗಾಯತ ಧರ್ಮ ಹೋರಾಟ ಶುರುವಾದಾಗಿನಿಂದ ಶಾಮನೂರು ಶಿವಶಂಕರಪ್ಪ ಗಟ್ಟಿಯಾಗಿ ನಿಂತು ವೀರಶೈವ ಲಿಂಗಾತರೆಲ್ಲ ಒಂದೇ ಎಂದು ಹೇಳಿದ್ದರು. ಇದೇ ಕಾರಣಕ್ಕೆ ಇಂದು ವೀರಶೈವ ಲಿಂಗಾಯತ ಸಮಾಜ ಒಂದಾಗಿ ಉಳಿದಿದೆ. ವೀರಶೈವ ವಿರಕ್ತರು ಒಂದೇ ಆಗಿದೆ ಎಂದರು.

ರಾಜ್ಯದಲ್ಲಿ ವೀರಶೈವ ಮಹಾಸಭೆ ರಾಜ್ಯದಲ್ಲಿ ವಿಶಿಷ್ಠ ಕಾರ್ಯ ಮಾಡಿದೆ: ಸಚಿವ ಈಶ್ವರ ಖಂಡ್ರೆ

ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿದ್ದು, ರಾಜ್ಯದಲ್ಲಿ ವೀರಶೈವ ಮಹಾಸಭೆ ರಾಜ್ಯದಲ್ಲಿ ವಿಶಿಷ್ಠ ಕಾರ್ಯ ಮಾಡಿದೆ. ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಕ್ಷೇತ್ರದಲ್ಲಿ ಸಾಧನೆ ಮೆಚ್ಚಲೇಬೇಕು. ಹಾನಗಲ್ ಕುಮಾರಸ್ವಾಮಿ ವೀರಶೈವ ಮಹಾಸಭೆ ಆರಂಭಿಸಿ ಉತ್ತಮಕಾರ್ಯ. ಸುತ್ತೂರು ಸ್ವಾಮೀಜಿಯವರು ಅದೇ ಕೆಲಸ ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ