AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jain Sanyasa Deeksha: ದಾವಣಗೆರೆಯ ಜೈನ್ ಸಮಾಜದ ನಾಲ್ವರಿಂದ ಸನ್ಯಾಸ ದೀಕ್ಷೆ ಸ್ವೀಕಾರ

ದಾವಣಗೆರೆಯಲ್ಲಿ ಮಾರ್ಚ್ 4ರಂದು ಐತಿಹಾಸಿಕ ಜೈನ್ ದೀಕ್ಷಾ ಮಹೋತ್ಸವ ನಡೆಯಲಿದೆ. ಪ್ರಸಿದ್ಧ ಉದ್ಯಮಿ ದಂಪತಿ ಸೇರಿ ಎಂಬಿಎ ಮತ್ತು ಬಿಕಾಂ ಪದವೀಧರರಾದ ಇಬ್ಬರು ಯುವತಿಯರು ಸನ್ಯಾಸ ದೀಕ್ಷೆ ಸ್ವೀಕರಿಸಲಿದ್ದಾರೆ. ಜೈನ ಗುರು ಅಭಯ್ ಶೇಖರ್ ಸುರೀಶ್ವರ ಮಹಾರಾಜ್ ಸಮ್ಮುಖದಲ್ಲಿ ಈ ಅಪರೂಪದ ಆಧ್ಯಾತ್ಮಿಕ ಘಟನೆ ಜರುಗಲಿದೆ.

Jain Sanyasa Deeksha: ದಾವಣಗೆರೆಯ ಜೈನ್ ಸಮಾಜದ ನಾಲ್ವರಿಂದ ಸನ್ಯಾಸ ದೀಕ್ಷೆ ಸ್ವೀಕಾರ
ದಾವಣಗೆರೆಯ ಜೈನ್ ಸಮಾಜದ ನಾಲ್ವರಿಂದ ಸನ್ಯಾಸ ಧೀಕ್ಷೆ ಸ್ವೀಕಾರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Mar 03, 2026 | 10:48 AM

Share

ದಾವಣಗೆರೆ, ಮಾರ್ಚ್​ 03: ಜೈನ್ ಸಮುದಾಯದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆಯೊಂದು ನಗರದಲ್ಲಿ ನಡೆಯಲಿದೆ. ಜೈನ್ ಸಮಾಜದ ನಾಲ್ವರು ಸನ್ಯಾಸ ದೀಕ್ಷೆ ಸ್ವೀಕರಿಸಲು ನಿರ್ಧರಿಸಿದ್ದು, ಮಾರ್ಚ್ 4ರಂದು ನಗರದ (Davanagere) ಹೊಳೆಹೊನ್ನೂರು ತೋಟದಲ್ಲಿ ದೀಕ್ಷಾ ಮಹೋತ್ಸವ ಜರುಗಲಿದೆ. ಜೈನ ಗುರು ಅಭಯ್ ಶೇಖರ್ ಸುರೀಶ್ವರ ಮಹಾರಾಜ್ ಅವರ ಸಮ್ಮುಖದಲ್ಲಿ ಇಬ್ಬರು ಯುವತಿಯರು ಹಾಗೂ ಉದ್ಯಮಿ ದಂಪತಿ ಸನ್ಯಾಸ ಜೀವನಕ್ಕೆ ಕಾಲಿಡಲಿದ್ದಾರೆ.

ನಗರದ ಪ್ರಸಿದ್ಧ ಲಲಿತ್ ಗಾರ್ಮೆಂಟ್ಸ್ ಮಾಲೀಕರಾದ ಭರತ್ ಜೈನ್ (52) ಮತ್ತು ಅವರ ಪತ್ನಿ ಆರತಿ ಜೈನ್ (50) ಸನ್ಯಾಸ ಸ್ವೀಕರಿಸಲಿದ್ದು, ಇವರೊಂದಿಗೆ ಎಂಬಿಎ ಪದವೀಧರೆ ಕ್ರುನಾಲಿ ಜೈನ್ (30) ಹಾಗೂ ಬಿಕಾಂ ಪದವೀಧರೆ ದೀಕ್ಷಿತಾ ಜೈನ್ (28) ಸಹ ದೀಕ್ಷೆ ಪಡೆಯಲಿದ್ದಾರೆ.

ಮಕ್ಕಳ ಹಾದಿಯನ್ನೇ ಅನುಸರಿಸಿದ ದಂಪತಿ

ಕ್ರುನಾಲಿ ಜೈನ್ ಅವರು ಪುಣೆಯ ಸಿಂಬಯೋಸಿಸ್ ಕಾಲೇಜಿನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ದೀಕ್ಷಿತಾ ಜೈನ್ ಅವರು ಮೂಲತಃ ದಾವಣಗೆರೆಯವರಾಗಿದ್ದು, ಅರುಣ್ ಕುಮಾರ್ ಜೈನ್ ಹಾಗೂ ಅನ್ನಪೂರ್ಣ ಬಾಯಿ ಅವರ ಪುತ್ರಿಯಾಗಿದ್ದಾರೆ. ಕ್ರುನಾಲಿ ಅವರು ಕಮಲೇಶ್ ಜೈನ್ ಮತ್ತು ಬಬಿತಾ ಜೈನ್ ಅವರ ಪುತ್ರಿ. ವಿಶೇಷವೆಂದರೆ, ಭರತ್ ಜೈನ್ ಹಾಗೂ ಆರತಿ ದಂಪತಿಯ ಇಬ್ಬರು ಪುತ್ರರು ಮೂರು ವರ್ಷಗಳ ಹಿಂದೆ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಮಗ್ನಶೇಖರ್ ವಿಜಯ್ ಮಹಾರಾಜ್ (28) ಹಾಗೂ ಪೂರ್ಣಶೇಖರ್ ವಿಜಯ್ (25) ಈಗ ಧಾರ್ಮಿಕ ಕೈಂಕರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ಪುತ್ರರ ಮಾರ್ಗವನ್ನು ಅನುಸರಿಸಿ ದಂಪತಿಗಳೂ ಈಗ ಗ್ರಹಸ್ಥಾಶ್ರಮ ತ್ಯಜಿಸಿ ಧರ್ಮ ಮಾರ್ಗವನ್ನು ಆರಿಸಿಕೊಂಡಿದ್ದಾರೆ.

ಇದನ್ನೂ ಓದಿ ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವ ಉತ್ತಮ: ದಾವಣಗೆರೆ ಸಿವಿಲ್ ಇಂಜಿನಿಯರಿಂಗ್ ಟಾಪರ್ ಈಗ ಜೈನ ಸನ್ಯಾಸಿ

ಸನ್ಯಾಸ ದೀಕ್ಷೆಗೆ ಮುನ್ನ ಸೋಮವಾರ ರಾತ್ರಿ ಅರುಣಾ ಟಾಕೀಸ್ ಮುಂಭಾಗದ ಹೊಳೆಹೊನ್ನೂರು ತೋಟದಲ್ಲಿ ನಾಲ್ವರಿಗೆ ಭಾವಪೂರ್ಣ ಬೀಳ್ಕೊಡುಗೆ ನೀಡಲಾಯಿತು. ಕುಟುಂಬ ಜೀವನದ ಅಂತಿಮ ದಿನವನ್ನು ಆಚರಿಸಿಕೊಂಡು, ಇಂದು (ಮಾರ್ಚ್​ 3) ನಗರದಲ್ಲಿ ಭವ್ಯ ಮೆರವಣಿಗೆ ನಡೆಯಲಿದ್ದು, ನಾಳೆ ವಿಧಿವಿಧಾನಗಳೊಂದಿಗೆ ದೀಕ್ಷಾ ಸಮಾರಂಭ ಜರುಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:14 am, Tue, 3 March 26

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್