AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ 120ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಪತ್ತೆ

ಡೆಂಗ್ಯೂ ಸೇರಿ ಹಲವು ಕಾಯಿಲೆಗಳಿರುವ ಮಕ್ಕಳಿಗೆ ಜಿಲ್ಲಾಸ್ಪತ್ರೆ, ಬಾಪೂಜಿ ಆಸ್ಪತ್ರೆ ಮತ್ತು ಎಸ್ ಎಸ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.

ದಾವಣಗೆರೆಯಲ್ಲಿ 120ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಪತ್ತೆ
ಎಚ್ಚರಿಕೆ ಇರಲಿ
TV9 Web
| Updated By: guruganesh bhat|

Updated on: Sep 11, 2021 | 8:04 PM

Share

ದಾವಣಗೆರೆ: ಜಿಲ್ಲೆಯಲ್ಲಿ 120ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ. ಜಿಲ್ಲಾ ಮಲೇರಿಯಾ ಅಧಿಕಾರಿ ನಟರಾಜ್ ನೇತೃತ್ವದ ತಂಡ ಡೆಂಗ್ಯೂ ಜ್ವರ ಪತ್ತೆಯಾದವರಿಗೆ ಚಿಕಿತ್ಸೆ ನೀಡುವ ತಂಡದ ನೇತೃತ್ವ ವಹಿಸಿದ್ದಾರೆ. ಡೆಂಗ್ಯೂ ಸೇರಿ ಹಲವು ಕಾಯಿಲೆಗಳಿರುವ ಮಕ್ಕಳಿಗೆ ಜಿಲ್ಲಾಸ್ಪತ್ರೆ, ಬಾಪೂಜಿ ಆಸ್ಪತ್ರೆ ಮತ್ತು ಎಸ್ ಎಸ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಡೆಂಗ್ಯೂ ಟೆಸ್ಟ್ ಮಾಡುವಂತೆ ಸೂಚಿಸಲಾಗಿದೆ ಎಂದು ಸಹ ಅವರು ತಿಳಿಸಿದ್ದಾರೆ.

Dengue Symptoms: ನಿಮ್ಮ ಜ್ವರ ಡೆಂಗ್ಯೂ ಜ್ವರವಾ ಎಂದು ಪತ್ತೆ ಹಚ್ಚುವುದು ಹೇಗೆ?; ಇಲ್ಲಿದೆ ಉಪಯುಕ್ತ ಮಾಹಿತಿ

ವೈರಲ್ ಫೀವರ್ ಹಾಗೂ ಡೆಂಗ್ಯೂ ಜ್ವರ ಆರಂಭದಲ್ಲಿ ಒಂದೇ ರೀತಿಯಾಗಿರುತ್ತವೆ. ಇದು ಸಾಮಾನ್ಯ ಜ್ವರ ಎಂದು ನಿರ್ಲಕ್ಷ್ಯ ಮಾಡಿದರೆ ಅಪಾಯ ಖಂಡಿತ. ವಿಪರೀತ ಚಳಿ ಹಾಗೂ ಜ್ವರದಿಂದ ಆರಂಭವಾಗುವ ಡೆಂಗ್ಯೂ ಜ್ವರ ಸೋಂಕಿತ ವ್ಯಕ್ತಿಯಿಂದ ಬೇರೊಬ್ಬರಿಗೆ ಗಾಳಿಯ ಮೂಲಕ ಹರಡುತ್ತದೆ. ಮುಂಜಾನೆ ಕಚ್ಚುವ ಈಡಿಸ್ ಎಂಬ ಸೊಳ್ಳೆಯಿಂದ ಹರಡುವ ಡೆಂಗ್ಯೂ ನಮ್ಮ ದೇಹದೊಳಗೆ ಸೇರಿಕೊಳ್ಳುತ್ತಿದ್ದಂತೆ ಬಳಿ ರಕ್ತ ಕಣಗಳು ಕಡಿಮೆಯಾಗುತ್ತವೆ.

ತೀವ್ರ ಜ್ವರ, ಸಂದು ನೋವು, ವಿಪರೀತ ತಲೆನೋವು, ತಲೆಸುತ್ತು, ವಾಂತಿ, ಮೈಯಲ್ಲಿ ಗುಳ್ಳೆಗಳು ಡೆಂಗ್ಯೂ ರೋಗದ ಮುಖ್ಯ ಲಕ್ಷಣಗಳು. 105 ಡಿಗ್ರಿ ತಾಪಮಾನಕ್ಕಿಂತಲೂ ಹೆಚ್ಚಿರುವ ನಿರಂತರ ಜ್ವರ ಕೊವಿಡ್ ಹಾಗೂ ಡೆಂಗ್ಯೂ ಎರಡೂ ರೋಗಗಳ ಲಕ್ಷಣವೂ ಹೌದು. ಹೀಗಾಗಿ, ಯಾರಾದರೂ ನಿರಂತರ ಜ್ವರದಿಂದ ಬಳಲುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ.

ಜ್ವರ ಬಂದಾಗ ದೇಹದ ಉಷ್ಣಾಂಶವನ್ನು ಹೆಚ್ಚಾಗುತ್ತಿದೆಯಾ ಅಥವಾ ಕಡಿಮೆಯಾಗುತ್ತಿದೆಯಾ? ಎಂಬುದನ್ನು ಪರೀಕ್ಷಿಸಿಕೊಳ್ಳುತ್ತಿರಿ. ಡೆಂಗ್ಯೂ ಬಂದರೆ ಮೈಯಲ್ಲಿ ಗುಳ್ಳೆ, ಚರ್ಮದ ಸುಕ್ಕು ಹಾಗೂ ಕೆಲವು ದಿನಗಳ ನಂತರ ತಲೆ ಸುತ್ತು ಹಾಗೂ ವಾಂತಿ ಕಾಣಿಸಿಕೊಳ್ಳುತ್ತದೆ. ಡೆಂಗ್ಯೂ ಜ್ವರವಾ? ಅಥವಾ ಬೇರೆ ಸೋಂಕಾ? ಎಂಬುದನ್ನು ಖಚಿತಪಡಿಸಿಕೊಳ್ಳಲು ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ. ಹೆಚ್ಚು ದ್ರವ ಪದಾರ್ಥಗಳನ್ನು ಸೇವಿಸಿ. ಜ್ವರದಿಂದ ದೇಹ ನಿರ್ಜಲೀಕರಣವಾಗದಂತೆ ನೋಡಿಕೊಳ್ಳಿ.

ಡೆಂಗ್ಯೂ ರೋಗಲಕ್ಷಣಗಳು ಸಾಮಾನ್ಯವಾಗಿ ಸೋಂಕು ತಗುಲಿದ ಮೂರರಿಂದ 14 ದಿನಗಳಲ್ಲಿ ಕಾಣಿಸಿಕೊಳ್ಳುತ್ತದೆ. ಹೆಚ್ಚಿನ ಜ್ವರ, ತಲೆನೋವು, ವಾಂತಿ, ಸ್ನಾಯು ಮತ್ತು ಸಂಧಿ ನೋವು, ಮತ್ತು ಗುಳ್ಳೆಗಳು ಕಂಡುಬಂದರೆ ವೈದ್ಯರನ್ನು ಭೇಟಿಯಾಗಿ. ಈಡಿಸ್ ಸೊಳ್ಳೆ ಹೂವಿನ ಕುಂಡ, ಹಳೆಯ ಟೈರ್, ಹಳೆಯ ಎಣ್ಣೆಯ ಡ್ರಮ್, ನೀರು ಸಂಗ್ರಹಿಸುವ ತೊಟ್ಟಿಗಳಲ್ಲಿ ಉತ್ಪತ್ತಿಯಾಗುತ್ತವೆ. ಆದ್ದರಿಂದಲೇ ಮಳೆಗಾಲದಲ್ಲಿ ಸೋಂಕು ಹೆಚ್ಚಾಗಿ ಹರಡುತ್ತವೆ. ಆದ್ದರಿಂದ ಇವುಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ನೋಡಿಕೊಳ್ಳಬೇಕು. ಇದರಿಂದ ಡೆಂಗ್ಯೂ ಹರಡುವುದನ್ನು ತಪ್ಪಿಸಬಹುದು.

ಡೆಂಗ್ಯೂ ಬಂದಾಗ ಹೆಚ್ಚಿನ ವಿಶ್ರಾಂತಿ ಬಹಳ ಮುಖ್ಯ. ಜ್ವರಕ್ಕೆ ಔಷಧವಾಗಿ ಪ್ಯಾರಸಿಟಮಾಲ್ ಬಳಸಿ. ಆದರೂ ಜ್ವರ ಕಡಿಮೆಯಾಗದಿದ್ದರೆ ಒದ್ದೆ ಬಟ್ಟೆಯಲ್ಲಿ ದೇಹವನ್ನು ಒರೆಸಿ. ದ್ರವ ಪದಾರ್ಥಗಳನ್ನೇ ಹೆಚ್ಚು ಸೇವಿಸಿ. ಅತಿಯಾದ ಸುಸ್ತು ಕಂಡುಬಂದಲ್ಲಿ ಅದು ಪ್ಲೇಟ್ಲೆಟ್ ಕಡಿಮೆಯಾಗಿರುವ ಲಕ್ಷಣವೂ ಆಗಿರಬಹುದು. ಹೊಟ್ಟೆ ನೋವು, ಎದೆನೋವು, ವಾಂತಿ, ರಕ್ತಸ್ರಾವ, ಮೂಗು, ವಸಡು ಮತ್ತು ಮಲಮೂತ್ರದ ಬಣ್ಣದಲ್ಲಿ ವ್ಯತ್ಯಾಸ ಕಂಡುಬಂದರೆ ತಕ್ಷಣವೇ ವೈದ್ಯರ ಬಳಿ ಚಿಕಿತ್ಸೆ ಪಡೆಯಿರಿ.

ಇದನ್ನೂ ಓದಿ: 

ಮಳೆಗಾಲದಲ್ಲಿ ಡೆಂಗ್ಯೂ ರೋಗ ಹರಡಬಹುದು ಎಚ್ಚರ! ರೋಗ ಬಾರದಂತೆ ತಡೆಗಟ್ಟುವ ಕ್ರಮಗಳನ್ನು ತಿಳಿಯಿರಿ

Travel: ಪ್ರಪಂಚದ ಈ ಸ್ಥಳಗಳಲ್ಲಿ ಸೂರ್ಯ ಮುಳುಗುವುದೇ ಇಲ್ಲ; ಅಚ್ಚರಿಯ ಮಾಹಿತಿ ಇಲ್ಲಿದೆ

(Davanagere more than 120 dengue cases found hospitals allocated for treatment)

ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!