AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಗಣಿ ಸಚಿವ ಮಲ್ಲಿಕಾರ್ಜುನ್ ಅವರನ್ನು ನಾಯಿಗೆ ಹೋಲಿಸಿದ ಸಂಸದ ಜಿಎಂ ಸಿದ್ದೇಶ್ವರ

ಆಗ ಶಾಮ‌ನೂರು ಶಿವಶಂಕರಪ್ಪ ಅವರೂ ತೆರಿಗೆ ಪಾವತಿ ಮಾಡುವುದಕ್ಕಾಗಿ ಸಾಲ‌ ಪಡೆದಿದ್ದರು. ಚುನಾವಣೆ ವೇಳೆ ಸಮಯಕ್ಕೆ ಸರಿಯಾಗಿ ಸಾಲ ವಾಪಸ್ ಕೊಡಲಿಲ್ಲ, ನಂತರ ಬಡ್ಡಿ ಸಮೇತ ವಸೂಲಿ ಮಾಡಿದ್ದೆ ಎಂದು ಸಿದ್ದೇಶ್ವರ ಹೇಳಿದ್ದಾರೆ.

Karnataka Politics: ಗಣಿ ಸಚಿವ ಮಲ್ಲಿಕಾರ್ಜುನ್ ಅವರನ್ನು ನಾಯಿಗೆ ಹೋಲಿಸಿದ ಸಂಸದ ಜಿಎಂ ಸಿದ್ದೇಶ್ವರ
ಜಿಎಂ ಸಿದ್ದೇಶ್ವರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Ganapathi Sharma|

Updated on: Jul 14, 2023 | 10:59 PM

Share

ದಾವಣಗೆರೆ: ಗಣಿ ಸಚಿವ ಮಲ್ಲಿಕಾರ್ಜುನ್ (SS Mallikarjun) ಅವರನ್ನು ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ (GM Siddeswara) ಪರೋಕ್ಷವಾಗಿ ನಾಯಿಗೆ ಹೋಲಿಸಿದ್ದಾರೆ. ಆಸ್ತಿ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಶ್ನಿಸಿದ್ದಕ್ಕೆ ಸಿಟ್ಟಿನಿಂದ ಪ್ರತಿಕ್ರಿಯಿಸಿದ ಸಿದ್ದೇಶ್ವರ, ಆನೆ ಹೋಗುವಾಗ ನಾಯಿ ಬೊಗಳುವುದು ಸಹಜ ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಮಲ್ಲಿಕಾರ್ಜುನ್ ನನ್ನ ಆಸ್ತಿ ಬಗ್ಗೆ ಕೇಳ್ತಾರೆ. ಮಲ್ಲಿಕಾರ್ಜುನ್ ತಂದೆ ಶಾಮನೂರು ಶಿವಶಂಕರಪ್ಪಗೆ ‌1994 ರಲ್ಲಿ ಸಾಲ‌ ಕೊಟ್ಟಿದ್ದೆ. ನಾನು, ಶಾಮ‌ನೂರು ಮಾವ ಚನ್ನಾಗಿದ್ವಿ. 1996 ರಲ್ಲೂ ಶಿವಶಂಕರಪ್ಪ ಅವರು ಸಾಲ‌ ಇಸ್ಕೊಂಡಿದ್ರು. 1997 ರಲ್ಲಿ ಆಸ್ತಿ ಸೆಲ್ಫ್ ಡೆಕ್ಲರೆಷ‌ನ್ ಮಾಡಿಕೊಳ್ಳಲು ಸರ್ಕಾರ ಅವಕಾಶ ನೀಡಿತ್ತು. ಆಗ ನಾನು 6 ಕೋಟಿ ರೂ. ಘೋಷಣೆ ಮಾಡಿಕೊಂಡು 1.80 ಕೋಟಿ ರೂ. ತೆರಿಗೆ ಕಟ್ಟಿದ್ದೆ. ಆಗ ಶಾಮ‌ನೂರು ಶಿವಶಂಕರಪ್ಪ ಅವರೂ ತೆರಿಗೆ ಪಾವತಿ ಮಾಡುವುದಕ್ಕಾಗಿ ಸಾಲ‌ ಪಡೆದಿದ್ದರು. ಚುನಾವಣೆ ವೇಳೆ ಸಮಯಕ್ಕೆ ಸರಿಯಾಗಿ ಸಾಲ ವಾಪಸ್ ಕೊಡಲಿಲ್ಲ, ನಂತರ ಬಡ್ಡಿ ಸಮೇತ ವಸೂಲಿ ಮಾಡಿದ್ದೆ ಎಂದು ಸಿದ್ದೇಶ್ವರ ಹೇಳಿದ್ದಾರೆ.

ಇದನ್ನೂ ಓದಿ: Siddaramaiah: 123 ಸ್ಥಾನ ಬರದಿದ್ದರೆ ಪಕ್ಷ ವಿಸರ್ಜಿಸುತ್ತೇವೆ ಎಂದಿದ್ದ ಕುಮಾರಸ್ವಾಮಿ- ಪರಿಷತ್​​ನಲ್ಲಿ ಜೆಡಿಎಸ್​ಗೆ ತಿವಿದ ಟಗರು ಸಿದ್ದರಾಮಯ್ಯ

ಕಾಲೇಜು ಮೇಲೆ‌‌ ಕಾಲೇಜು, ಜಮೀನಿನ ಮೇಲೆ ಜಮೀನು ತೆಗೆದುಕೊಳ್ತಾ ಇದ್ದೀನಿ ಅಂತ ಆರೋಪ ಮಾಡಿದ್ದಾರೆ. ಹೌದು, ತಗೊಳ್ತಿನಿ, ದುಡಿದಿದ್ದೀನಿ ತೆಗೆದುಕೊಳ್ತಿನಿ. ನಾನು ಭ್ರಷ್ಟಾಚಾರ ಮಾಡಿಲ್ಲ, ದುಡ್ಡು ಹೊಡೆದಿಲ್ಲ. ಆದಾಯ, ತೆರಿಗೆ ಇಲಾಖೆ ಇದ್ದಾವೆ, ಅವು ನೋಡಿಕೊಳ್ತಾವೆ. ದಾವಣಗೆರೆಯಲ್ಲಿ ಸ್ಮಾರ್ಟ್ ಸಿಟಿ, ಆಶ್ರಯ ಮನೆ ಹಂಚಿಕೆ ತನಿಖೆ ಮಾಡಿಸ್ತಾರಂತೆ. ಅವನು, ಮಲ್ಲಿಕಾರ್ಜುನ್ ಹಿಂದೆ ಮಂತ್ರಿ ಆಗಿದ್ನಾಲ್ಲ ಆಗಿನಿಂದಲೂ ತನಿಖೆ ಮಾಡ್ಲಿ. ಎಲ್ಲವೂ ತನಿಖೆ ಮಾಡ್ಲಿ, ನನಗೇನು ಭಯ ಇಲ್ಲ ಎಂದು ಸಿದ್ದೇಶ್ವರ ಸವಾಲೆಸೆದಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ