AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere: ಆರ್​ಟಿಐ ಕಾರ್ಯಕರ್ತನ ಹತ್ಯೆ: ಕೊಲೆಯಾದ ಮರುದಿನವೇ ಗ್ರಾ.ಪಂ‌ ಖಾತೆಯಿಂದ 21 ಲಕ್ಷ ರೂ ದೋಚಿಕೊಂಡು ಹೋದ ಪಿಡಿಓ

ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಆಗಿದ್ದ ಆರ್​ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪಿಡಿಓ ಎಟಿ ನಾಗರಾಜ್ ಪಂಚಾಯತ್​ ಖಾತೆಯಿಂದ 21 ಲಕ್ಷ ರೂಪಾಯಿ ಬಿಡುಗಡೆ ಮಾಡಿಕೊಂಡು ನಾಪತ್ತೆಯಾಗಿದ್ದಾನೆ.

Davanagere: ಆರ್​ಟಿಐ ಕಾರ್ಯಕರ್ತನ ಹತ್ಯೆ: ಕೊಲೆಯಾದ ಮರುದಿನವೇ ಗ್ರಾ.ಪಂ‌ ಖಾತೆಯಿಂದ 21 ಲಕ್ಷ ರೂ ದೋಚಿಕೊಂಡು ಹೋದ ಪಿಡಿಓ
ಆರೋಪಿ ಪಿಡಿಓ ನಾಗರಾಜ್​ನನ್ನು ಬಂಧಿಸುವಂತೆ ​ ಸದಸ್ಯರ ಮನವಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 10, 2023 | 4:13 PM

Share

ದಾವಣಗೆರೆ: ಜಗಳೂರು ತಾಲೂಕಿನ ಹೊಸಕೆರೆ ಡಾಬಾದಲ್ಲಿ ಆರ್​ಟಿಐ ಕಾರ್ಯಕರ್ತನನ್ನು ಹಳೆ ದ್ವೇಷದ ಹಿನ್ನಲೆ ಗುಂಪೊಂದು ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯ ಪ್ರಮುಖ ಆರೋಪಿ ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮ ಪಂಚಾಯತಿ ಪಿಡಿಓ ನಾಗರಾಜ್ ಹತ್ಯೆಯಾದ ಮರುದಿನವೇ ಪಂಚಾಯತಿ ಖಾತೆಯಿಂದ 21 ಲಕ್ಷ ರೂಪಾಯಿ ಬಿಡುಗಡೆ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ಇದಕ್ಕೆ ಪಂಚಾಯತಿ ಅಧ್ಯಕ್ಷೆ ಸಾಥ್ ನೀಡಿದ್ದಾರೆ ಎಂದು ಆರೋಪಿಸಿ ಹಿರೇಮಲ್ಲನಹೊಳೆ ಗ್ರಾಮ ಪಂಚಾಯತಿಯ 19 ಜನ ಸದಸ್ಯರು ತಹಶಿಲ್ದಾರಗೆ ದೂರು ನೀಡಿದ್ದಾರೆ.

ಇದೇ ಜ.7 ರಂದು ಸಂಜೆ ಜಗಳೂರು ತಾಲೂಕಿನ ಹೊಸಕೆರೆ ಡಾಬಾದಲ್ಲಿ ಆರ್​ಟಿಐ ಕಾರ್ಯಕರ್ತ ರಾಮಕೃಷ್ಣನನ್ನ ಹಳೇ ದ್ವೇಷದ ಹಿನ್ನೆಲೆ ಗ್ಯಾಂಗ್​ಯೊಂದು ಕಬ್ಬಿಣದ ರಾಡ್​ನಿಂದ ಹೊಡೆದು ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿತ್ತು. ಈ ಹತ್ಯೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಪಿಡಿಓ ಪ್ರಮುಖ ಆರೋಪಿ ಎಂದು ಸಂಬಂಧಿಕ್ಕರು ಆರೋಪಿಸಿದ್ದರು. ಇದಕ್ಕೆ ಪುಷ್ಠಿ ಎಂಬಂತೆ ಪಿಡಿಓ ನಾಗರಾಜ್, ರಾಮಕೃಷ್ಣ ಹತ್ಯೆಯಾದ ಮರುದಿನವೇ ಪಂಚಾಯತಿ ಖಾತೆಯಿಂದ 21 ಲಕ್ಷ ರೂಪಾಯಿ ಹಣ ಬಿಡುಗಡೆ ಮಾಡಿಕೊಂಡು ಪರಾರಿಯಾಗಿದ್ದಾನೆ. ಇದಕ್ಕೆ ಪಂಚಾಯತ್​ ಅಧ್ಯಕ್ಷೆ ಸಾಥ್ ನೀಡಿದ್ದು ಎಂದು ಆರೋಪಿಸಿದ ಸದಸ್ಯರು. ಪಂಚಾಯತ್ ರಾಜ್​ ಇಲಾಖೆ ಹಾಗೂ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ:Davanagere: ಆರ್​ಟಿಐ ಕಾರ್ಯಕರ್ತನ ಬರ್ಬರ ಕೊಲೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಇನ್ನು ಕೊಲೆಯಾದ ಗೌರಿಪುರ ಗ್ರಾಮದ ನಿವಾಸಿ ರಾಮಕೃಷ್ಣ ಒಬ್ಬ ಆರ್​ಟಿಐ ಕಾರ್ಯಕರ್ತನಾಗಿದ್ದು, ಭ್ರಷ್ಟರು ಆತನನ್ನ ‌ಕಂಡರೆ ಸಾಕು ಬೇವರುತ್ತಿದ್ದರು. ಕಾರಣ ಕೈಯಲ್ಲಿ ‌ಖಚಿತ ಮಾಹಿತಿ ಪಡೆದು ಭ್ರಷ್ಟರನ್ನ ಜೈಲಿಗೆ ಕಳುಹಿಸಲು ಆತ ಪ್ರತಿಜ್ಞೆ ಮಾಡಿದ್ದ. ಅದೇ ಹಳೇ ದ್ವೇಷದ ಹಿನ್ನೆಲೆ ಡಾಬಾದಲ್ಲಿ ಊಟ ಮಾಡಲು ಬಂದಿದ್ದ ರಾಮಕೃಷ್ಣನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ತಡ ರಾತ್ರಿ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಬರುತ್ತಿದ್ದಂತೆ ಕೊಲೆಯಾದ ವ್ಯಕ್ತಿಯ ಸಂಬಂಧಿಕರು ಹಾಗೂ ಸ್ನೇಹಿತರು ಆರೋಪಿಗಳಿಗೆ ಶಿಕ್ಷೆ ಕೊಡಿಸುವಂತೆ ಎಸ್ಪಿ ಮುಂದೆ ಕೈ ಮುಗಿದು ಬೇಡಿಕೊಂಡ ಘಟನೆ ನಡೆದಿದೆ. ಇದರಿಂದ ಇದೊಂದು ಹಳೆ ದ್ವೇಷದ ಹಿನ್ನೆಲೆಯಿಂದ ನಡೆದ ಕೊಲೆ ಆಗಿರುವ ಬಗ್ಗೆ ಘಟನೆ ನಡೆದಾಗಲೇ ಪೊಲೀಸರಿಗೆ ಶಂಕೆ ವ್ಯಕ್ತವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 24 ವರ್ಷದ ಅರ್ಜುನ್ ಹಾಗೂ ಪ್ರಶಾಂತ ಎಂಬ ಇಬ್ಬರನ್ನ ಪೊಲೀಸರು‌ ಬಂಧಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು