Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ; ಸಾರ್ವಜನಿಕರಿಂದ ದೂರಿನ ಸುರಿಮಳೆ, ಪಿಡಿಓಗೆ ತರಾಟೆಗೆ ತೆಗೆದುಕೊಂಡ ಶಾಸಕರ ವಿಡಿಯೋ ವೈರಲ್

ದೊಡ್ಡಅಬ್ಬಿಗೆರೆ ಗ್ರಾಮದ ಪಿಡಿಓ ರಂಗನಾಥ ಎಂಬುರನ್ನ ಶಾಸಕ ಬಸವರಾಜ್ ಶಿವಗಂಗಾ ತರಾಟೆ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮ ಹಿನ್ನೆಲೆ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕರಾದ ಬಸವರಾಜು ವಿ ಶಿವಗಂಗಾ ಅವರ ಬಳಿ ಸಾರ್ವಜನಿಕರು ಪಿಡಿಓ ವಿರುದ್ಧ ದೂರುಗಳ ಸರಮಾಲೆ ಇಟ್ಟಿದ್ದಾರೆ.

Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಆಯೇಷಾ ಬಾನು

Updated on: Aug 20, 2023 | 11:07 AM

ದಾವಣಗೆರೆ, ಆ.20: ಜಿಲ್ಲೆಯ ಚನ್ನಗಿರಿ ವಿಧಾನ ಸಭಾ ಕ್ಷೇತ್ರದಿಂದ ಬಸವರಾಜ್ ಶಿವಗಂಗಾ(MLA Basavaraj Shivaganga) ಆಯ್ಕೆ ಆಗಿದ್ದಾರೆ. ಇದೇ ಮೊದಲ ಸಲ ವಿಧಾನ ಸಭೆಗೆ ಕಾಂಗ್ರೆಸ್ಸಿನಿಂದ ಆಯ್ಕೆ ಆಗಿದ್ದಾರೆ. ಹೀಗಾಗಿ ಏನಾದ್ರು ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಬೇಕು ಎಂಬುದು ಅವರ ಆಶಯ. ಹೀಗಾಗಿ ಇಂದು ದೊಡ್ಡ ಅಬ್ಬಿಗೆರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಇಲ್ಲಿನ ಕಸಗುಡಿಸುವ ಜನಕ್ಕೆ ಕಳೆದ ಏಳು ತಿಂಗಳಿಂದ ಸಂಬಳವೇ ಸಿಕ್ಕಿಲ್ಲ ಎಂಬ ವಿಚಾರ ಗಮನಕ್ಕೆ ಬಂದಿದೆ. ತಕ್ಷಣವೇ ಶಾಸಕ ಬಸವರಾಜ್ ಶಿವಗಂಗಾ ಪಿಡಿಓಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಹೀಗೆ ತರಾಟೆ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ.

ದೊಡ್ಡಅಬ್ಬಿಗೆರೆ ಗ್ರಾಮದ ಪಿಡಿಓ ರಂಗನಾಥ ಎಂಬುರನ್ನ ಶಾಸಕ ಬಸವರಾಜ್ ಶಿವಗಂಗಾ ತರಾಟೆ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮ ಹಿನ್ನೆಲೆ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕರಾದ ಬಸವರಾಜು ವಿ ಶಿವಗಂಗಾ ಅವರ ಬಳಿ ಸಾರ್ವಜನಿಕರು ಪಿಡಿಓ ವಿರುದ್ಧ ದೂರುಗಳ ಸರಮಾಲೆ ಇಟ್ಟಿದ್ದಾರೆ. ಇದನ್ನ ಗಮನಿಸಿದ ಶಾಸಕರು ತಕ್ಷಣ ಮೇಲಾಧಿಕಾರಿಗಳಿಗೆ ಸೂಚನೆ ನೀಡಿ ಇವರನ್ನ ಬೇರೆ ಕಡೆ ವರ್ಗಾವಣೆ ಮಾಡಿ. ಚನ್ನಗಿರಿ ವಿಧಾನ ಸಭಾ ಕ್ಷೇತ್ರದಲ್ಲಿ ಇವರು ಇರಬಾರದು ಎಂದು ತಾಕೀತು ಮಾಡಿದ್ದಾರೆ. ಚನ್ನಗಿರಿ ಕ್ಷೇತ್ರದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ಅಂತವರಿಗೆ ಇಲ್ಲಿ ಅವಕಾಶವಿಲ್ಲ. ಮೇಲಾಗಿ ಕಸ ತೆಗೆದುಕೊಂಡು ಹೋಗುವ ಸಿಬ್ಬಂದಿಗೆ ವೇತನ ನೀಡಲು ವಿಳಂಬ ಮಾಡದೆ ಅವರ ಸಂಕಷ್ಟಕ್ಕೆ ಸ್ಪಂದಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಶಾಸಕರು ಕಿಡಿಕಾರಿದರು.

ಇದನ್ನೂ ಓದಿ: ದತ್ತಪೀಠ ವಿವಾದ ಮತ್ತೆ ಮುನ್ನೆಲೆಗೆ: ವ್ಯವಸ್ಥಾಪನಾ ಸಮಿತಿ ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಇದೇ ವೇಳೆ ಶಾಸಕರನ್ನ ಕೆಲ ಅಧಿಕಾರಿಗಳು ಭೇಟಿಯಾದ್ರು. ಈ ವೇಳೆ ಕೆಲ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕರು ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕ್ಷೇತ್ರದಲ್ಲಿ ಹಲವಾರು ದಿನಗಳಿಂದ ಅಧಿಕಾರಿಗಳು ಠಿಕಾಣಿ ಹಾಕಿದ್ದು. ಇಂತವರನ್ನ ಬೇರೆ ಕಡೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ಶಾಸಕರು ಸ್ಪಷ್ಟವಾಗಿ ಹೇಳಿದ್ದಾರೆ.

ದಾವಣಗೆರೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ