AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ; ಸಾರ್ವಜನಿಕರಿಂದ ದೂರಿನ ಸುರಿಮಳೆ, ಪಿಡಿಓಗೆ ತರಾಟೆಗೆ ತೆಗೆದುಕೊಂಡ ಶಾಸಕರ ವಿಡಿಯೋ ವೈರಲ್

ದೊಡ್ಡಅಬ್ಬಿಗೆರೆ ಗ್ರಾಮದ ಪಿಡಿಓ ರಂಗನಾಥ ಎಂಬುರನ್ನ ಶಾಸಕ ಬಸವರಾಜ್ ಶಿವಗಂಗಾ ತರಾಟೆ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮ ಹಿನ್ನೆಲೆ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕರಾದ ಬಸವರಾಜು ವಿ ಶಿವಗಂಗಾ ಅವರ ಬಳಿ ಸಾರ್ವಜನಿಕರು ಪಿಡಿಓ ವಿರುದ್ಧ ದೂರುಗಳ ಸರಮಾಲೆ ಇಟ್ಟಿದ್ದಾರೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Aug 20, 2023 | 11:07 AM

Share

ದಾವಣಗೆರೆ, ಆ.20: ಜಿಲ್ಲೆಯ ಚನ್ನಗಿರಿ ವಿಧಾನ ಸಭಾ ಕ್ಷೇತ್ರದಿಂದ ಬಸವರಾಜ್ ಶಿವಗಂಗಾ(MLA Basavaraj Shivaganga) ಆಯ್ಕೆ ಆಗಿದ್ದಾರೆ. ಇದೇ ಮೊದಲ ಸಲ ವಿಧಾನ ಸಭೆಗೆ ಕಾಂಗ್ರೆಸ್ಸಿನಿಂದ ಆಯ್ಕೆ ಆಗಿದ್ದಾರೆ. ಹೀಗಾಗಿ ಏನಾದ್ರು ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಬೇಕು ಎಂಬುದು ಅವರ ಆಶಯ. ಹೀಗಾಗಿ ಇಂದು ದೊಡ್ಡ ಅಬ್ಬಿಗೆರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಇಲ್ಲಿನ ಕಸಗುಡಿಸುವ ಜನಕ್ಕೆ ಕಳೆದ ಏಳು ತಿಂಗಳಿಂದ ಸಂಬಳವೇ ಸಿಕ್ಕಿಲ್ಲ ಎಂಬ ವಿಚಾರ ಗಮನಕ್ಕೆ ಬಂದಿದೆ. ತಕ್ಷಣವೇ ಶಾಸಕ ಬಸವರಾಜ್ ಶಿವಗಂಗಾ ಪಿಡಿಓಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಹೀಗೆ ತರಾಟೆ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ.

ದೊಡ್ಡಅಬ್ಬಿಗೆರೆ ಗ್ರಾಮದ ಪಿಡಿಓ ರಂಗನಾಥ ಎಂಬುರನ್ನ ಶಾಸಕ ಬಸವರಾಜ್ ಶಿವಗಂಗಾ ತರಾಟೆ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮ ಹಿನ್ನೆಲೆ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕರಾದ ಬಸವರಾಜು ವಿ ಶಿವಗಂಗಾ ಅವರ ಬಳಿ ಸಾರ್ವಜನಿಕರು ಪಿಡಿಓ ವಿರುದ್ಧ ದೂರುಗಳ ಸರಮಾಲೆ ಇಟ್ಟಿದ್ದಾರೆ. ಇದನ್ನ ಗಮನಿಸಿದ ಶಾಸಕರು ತಕ್ಷಣ ಮೇಲಾಧಿಕಾರಿಗಳಿಗೆ ಸೂಚನೆ ನೀಡಿ ಇವರನ್ನ ಬೇರೆ ಕಡೆ ವರ್ಗಾವಣೆ ಮಾಡಿ. ಚನ್ನಗಿರಿ ವಿಧಾನ ಸಭಾ ಕ್ಷೇತ್ರದಲ್ಲಿ ಇವರು ಇರಬಾರದು ಎಂದು ತಾಕೀತು ಮಾಡಿದ್ದಾರೆ. ಚನ್ನಗಿರಿ ಕ್ಷೇತ್ರದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ಅಂತವರಿಗೆ ಇಲ್ಲಿ ಅವಕಾಶವಿಲ್ಲ. ಮೇಲಾಗಿ ಕಸ ತೆಗೆದುಕೊಂಡು ಹೋಗುವ ಸಿಬ್ಬಂದಿಗೆ ವೇತನ ನೀಡಲು ವಿಳಂಬ ಮಾಡದೆ ಅವರ ಸಂಕಷ್ಟಕ್ಕೆ ಸ್ಪಂದಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಶಾಸಕರು ಕಿಡಿಕಾರಿದರು.

ಇದನ್ನೂ ಓದಿ: ದತ್ತಪೀಠ ವಿವಾದ ಮತ್ತೆ ಮುನ್ನೆಲೆಗೆ: ವ್ಯವಸ್ಥಾಪನಾ ಸಮಿತಿ ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಇದೇ ವೇಳೆ ಶಾಸಕರನ್ನ ಕೆಲ ಅಧಿಕಾರಿಗಳು ಭೇಟಿಯಾದ್ರು. ಈ ವೇಳೆ ಕೆಲ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕರು ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕ್ಷೇತ್ರದಲ್ಲಿ ಹಲವಾರು ದಿನಗಳಿಂದ ಅಧಿಕಾರಿಗಳು ಠಿಕಾಣಿ ಹಾಕಿದ್ದು. ಇಂತವರನ್ನ ಬೇರೆ ಕಡೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ಶಾಸಕರು ಸ್ಪಷ್ಟವಾಗಿ ಹೇಳಿದ್ದಾರೆ.

ದಾವಣಗೆರೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್