AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿದ್ದ ಹಸುಗಳ ರಕ್ಷಣೆ

ದಾವಣಗೆರೆಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಹಸುಗಳನ್ನು ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಅವುಗಳನ್ನು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ: ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿದ್ದ ಹಸುಗಳ ರಕ್ಷಣೆ
ಹಸುಗಳ ರಕ್ಷಣೆ
ಆಯೇಷಾ ಬಾನು
|

Updated on: Apr 18, 2023 | 8:02 AM

Share

ದಾವಣಗೆರೆ: ಇಲ್ಲಿನ ಬೇತೂರು ಹಳ್ಳದ ಹತ್ತಿರವಿರುವ ರಿಂಗ್ ರಸ್ತೆಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಹಸುಗಳನ್ನು ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಕಸಾಯಿ ಖಾನೆಗೆ ಹಸುಗಳನ್ನು ಸಾಗಿಸಲಾಗುತ್ತಿದೆ ಎಂಬ ದೂರನ್ನು ಆಧರಿಸಿ ದಾಳಿ ನಡೆಸಿದ ಪೊಲೀಸರು 15,000 ಮೌಲ್ಯದ ಒಂದು ಜರ್ಸಿ ಹಸು, 12,000 ಮೌಲ್ಯದ ಎಚ್ಎಫ್‌ ತಳಿಯ ಜರ್ಸಿ ಹಸು, 14 ,000 ಮೌಲ್ಯದ ಜವಾರಿ ಹಸು, 15,000 ಮೌಲ್ಯದ ಕಂದು ಬಣ್ಣದ ಜವಾರಿ ಜಾತಿಯ ಹಸು 8,000 ಮೌಲ್ಯದ ಹೋರಿಕರುಗಳನ್ನು ಆಹಾರ, ನೀರಿನ ವ್ಯವಸ್ಥೆ ಮಾಡದೇ ಹಿಂಸೆಯಾಗುವ ರೀತಿಯಲ್ಲಿ ಸಾಗಿಸುತ್ತಿದ್ದಾಗ ಪೊಲೀಸರು ಹಸುಗಳನ್ನು ವಶಕ್ಕೆ ಪಡೆದಿದ್ದಾರೆ. ಅಹ್ಮದ್‌ ನಗರದ ಚಾಲಕ ಸೈಯದ್ ವಿರುದ್ಧ ಆಜಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗಾಂಜಾ ಗುಂಗಿನಲ್ಲಿ ಮಹಿಳೆ ಫೋಟೋ ಯೂಟ್ಯೂಬ್​ಗೆ ಹಾಕಿ‌ದ ಕಿಲಾಡಿಗಳ ಬಂಧನ

ಇನ್ನು ಮತ್ತೊಂದೆಡೆ ಮಹಿಳೆಯರ ಭಾವಚಿತ್ರಗಳನ್ನು ತಿರುಚಿ ಯೂಟ್ಯೂಬ್‌ನಲ್ಲಿ ಹಾಕಿ ಅವರ ವೈಯಕ್ತಿಕ ಖ್ಯಾತಿಗೆ ಹಾನಿಯುಂಟು ಮಾಡಿ, ತೇಜೋವಧೆ ಮಾಡುತ್ತಿದ್ದ ಇಬ್ಬರನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಗೊರವನಗುಡ್ಡ ತಾಂಡಾದ ಸುರೇಶ ಲಂಬಾಣಿ ಹಾಗೂ ದೊಂಬರಹಳ್ಳಿ ತಾಂಡಾದ ಜಯಕುಮಾರ್ ಬಂಧಿತರು. ಏ.16ರಂದು ದಾವಣಗೆರೆ ತಾಲೂಕಿನ ಯರಗುಂಟೆ ಗ್ರಾಮದ ಬಳಿ ಈ ಇಬ್ಬರು ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಬಂಧಿಸಿ ಮೊಬೈಲ್ ಜಪ್ತಿ ಮಾಡಿ ಪರಿಶೀಲಿಸಿದಾಗ ಈ ವಿಷಯ ಪತ್ತೆಯಾಗಿದೆ. ಇವರಿಬ್ಬರೂ ‘ಸೆಕೆಂಡ್ ಮ್ಯಾರೇಜ್ ಮ್ಯಾಟ್ರಿಮೋನಿ ಕನ್ನಡ’ ಚಾನಲ್‌ನಲ್ಲಿ ಹೆಚ್ಚಿನ ನೋಡುಗರನ್ನು (ವೀವರ್ಸ್‌) ಅನ್ನು ಗಳಿಸಿ ಹಣ ಸಂಪಾದನೆ ಉದ್ದೇಶದಿಂದ ಈ ಕೆಲಸ ಮಾಡುತ್ತಿದ್ದರು ಎಂದು ಗೊತ್ತಾಗಿದೆ.

ಇದನ್ನೂ ಓದಿ: ಆಡುತ್ತಿದ್ದಾಗ ಕಬ್ಬಿಣದ ಪೈಪ್​ ಒಳಗೆ ಸಿಲುಕಿದ ಒಂದೂವರೆ ವರ್ಷದ ಮಗುವಿನ ಕೈ!

ಡಿಸಿಆರ್‌ಬಿ ಡಿವೈಎಸ್ಪಿ ರೋಷನ್ ಜಮೀರ್ ಅವರ ಮಾರ್ಗದರ್ಶನದಲ್ಲಿ ಸಿಇಎನ್ ಠಾಣೆಯ ಪಿಐ ಮಂಜುನಾಥ್ ಬಿ ಹಾಗೂ ತಂಡ ದಾಳಿ ನಡೆಸಿ 5,500 ಮೌಲ್ಯದ 280 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡಿದೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿ.ಇ.ಎನ್ ಪೊಲೀಸ್ ಠಾಣೆಯ ಸಿಬ್ಬಂದಿ ಗೋವಿಂದರಾಜ್, ಲೋಹಿತ್, ಕೊಟ್ರೇಶ್, ಉಮೇಶ್, ಲಿಂಗರಾಜು ಭಾಗವಹಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ