AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿದ್ದ ಹಸುಗಳ ರಕ್ಷಣೆ

ದಾವಣಗೆರೆಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಹಸುಗಳನ್ನು ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಅವುಗಳನ್ನು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ: ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿದ್ದ ಹಸುಗಳ ರಕ್ಷಣೆ
ಹಸುಗಳ ರಕ್ಷಣೆ
ಆಯೇಷಾ ಬಾನು
|

Updated on: Apr 18, 2023 | 8:02 AM

Share

ದಾವಣಗೆರೆ: ಇಲ್ಲಿನ ಬೇತೂರು ಹಳ್ಳದ ಹತ್ತಿರವಿರುವ ರಿಂಗ್ ರಸ್ತೆಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಹಸುಗಳನ್ನು ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಕಸಾಯಿ ಖಾನೆಗೆ ಹಸುಗಳನ್ನು ಸಾಗಿಸಲಾಗುತ್ತಿದೆ ಎಂಬ ದೂರನ್ನು ಆಧರಿಸಿ ದಾಳಿ ನಡೆಸಿದ ಪೊಲೀಸರು 15,000 ಮೌಲ್ಯದ ಒಂದು ಜರ್ಸಿ ಹಸು, 12,000 ಮೌಲ್ಯದ ಎಚ್ಎಫ್‌ ತಳಿಯ ಜರ್ಸಿ ಹಸು, 14 ,000 ಮೌಲ್ಯದ ಜವಾರಿ ಹಸು, 15,000 ಮೌಲ್ಯದ ಕಂದು ಬಣ್ಣದ ಜವಾರಿ ಜಾತಿಯ ಹಸು 8,000 ಮೌಲ್ಯದ ಹೋರಿಕರುಗಳನ್ನು ಆಹಾರ, ನೀರಿನ ವ್ಯವಸ್ಥೆ ಮಾಡದೇ ಹಿಂಸೆಯಾಗುವ ರೀತಿಯಲ್ಲಿ ಸಾಗಿಸುತ್ತಿದ್ದಾಗ ಪೊಲೀಸರು ಹಸುಗಳನ್ನು ವಶಕ್ಕೆ ಪಡೆದಿದ್ದಾರೆ. ಅಹ್ಮದ್‌ ನಗರದ ಚಾಲಕ ಸೈಯದ್ ವಿರುದ್ಧ ಆಜಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗಾಂಜಾ ಗುಂಗಿನಲ್ಲಿ ಮಹಿಳೆ ಫೋಟೋ ಯೂಟ್ಯೂಬ್​ಗೆ ಹಾಕಿ‌ದ ಕಿಲಾಡಿಗಳ ಬಂಧನ

ಇನ್ನು ಮತ್ತೊಂದೆಡೆ ಮಹಿಳೆಯರ ಭಾವಚಿತ್ರಗಳನ್ನು ತಿರುಚಿ ಯೂಟ್ಯೂಬ್‌ನಲ್ಲಿ ಹಾಕಿ ಅವರ ವೈಯಕ್ತಿಕ ಖ್ಯಾತಿಗೆ ಹಾನಿಯುಂಟು ಮಾಡಿ, ತೇಜೋವಧೆ ಮಾಡುತ್ತಿದ್ದ ಇಬ್ಬರನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಗೊರವನಗುಡ್ಡ ತಾಂಡಾದ ಸುರೇಶ ಲಂಬಾಣಿ ಹಾಗೂ ದೊಂಬರಹಳ್ಳಿ ತಾಂಡಾದ ಜಯಕುಮಾರ್ ಬಂಧಿತರು. ಏ.16ರಂದು ದಾವಣಗೆರೆ ತಾಲೂಕಿನ ಯರಗುಂಟೆ ಗ್ರಾಮದ ಬಳಿ ಈ ಇಬ್ಬರು ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಬಂಧಿಸಿ ಮೊಬೈಲ್ ಜಪ್ತಿ ಮಾಡಿ ಪರಿಶೀಲಿಸಿದಾಗ ಈ ವಿಷಯ ಪತ್ತೆಯಾಗಿದೆ. ಇವರಿಬ್ಬರೂ ‘ಸೆಕೆಂಡ್ ಮ್ಯಾರೇಜ್ ಮ್ಯಾಟ್ರಿಮೋನಿ ಕನ್ನಡ’ ಚಾನಲ್‌ನಲ್ಲಿ ಹೆಚ್ಚಿನ ನೋಡುಗರನ್ನು (ವೀವರ್ಸ್‌) ಅನ್ನು ಗಳಿಸಿ ಹಣ ಸಂಪಾದನೆ ಉದ್ದೇಶದಿಂದ ಈ ಕೆಲಸ ಮಾಡುತ್ತಿದ್ದರು ಎಂದು ಗೊತ್ತಾಗಿದೆ.

ಇದನ್ನೂ ಓದಿ: ಆಡುತ್ತಿದ್ದಾಗ ಕಬ್ಬಿಣದ ಪೈಪ್​ ಒಳಗೆ ಸಿಲುಕಿದ ಒಂದೂವರೆ ವರ್ಷದ ಮಗುವಿನ ಕೈ!

ಡಿಸಿಆರ್‌ಬಿ ಡಿವೈಎಸ್ಪಿ ರೋಷನ್ ಜಮೀರ್ ಅವರ ಮಾರ್ಗದರ್ಶನದಲ್ಲಿ ಸಿಇಎನ್ ಠಾಣೆಯ ಪಿಐ ಮಂಜುನಾಥ್ ಬಿ ಹಾಗೂ ತಂಡ ದಾಳಿ ನಡೆಸಿ 5,500 ಮೌಲ್ಯದ 280 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡಿದೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿ.ಇ.ಎನ್ ಪೊಲೀಸ್ ಠಾಣೆಯ ಸಿಬ್ಬಂದಿ ಗೋವಿಂದರಾಜ್, ಲೋಹಿತ್, ಕೊಟ್ರೇಶ್, ಉಮೇಶ್, ಲಿಂಗರಾಜು ಭಾಗವಹಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ