AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ದಿಢೀರ್ ಕುಸಿದ ಈರುಳ್ಳಿ ಬೆಲೆ, ರೈತರು ಕಂಗಾಲು

ಈರುಳ್ಳಿ ಬೆಲೆ ಕುಸಿತ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಸಾರಿಗೆ ವೆಚ್ಚ ಸಹ ಸಿಗದ ಸ್ಥಿತಿ ಇರುವುದರಿಂದ ಈರುಳ್ಳಿಯನ್ನು ಮಾರುಕಟ್ಟೆಗೆ ಸಾಗಿಸುವುದೇ ವ್ಯರ್ಥ. ಹೀಗಾಗಿ ಹೊಲದಲ್ಲಿಯೇ ಬಿಡುವುದು ಉತ್ತಮ ಎಂಬ ನಿರ್ಧಾರಕ್ಕೆ ರೈತರು ಬಂದಿದ್ದಾರೆ.

ದಾವಣಗೆರೆ: ದಿಢೀರ್ ಕುಸಿದ ಈರುಳ್ಳಿ ಬೆಲೆ, ರೈತರು ಕಂಗಾಲು
ಸಾಂದರ್ಭಿಕ ಚಿತ್ರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jan 26, 2024 | 12:39 PM

Share

ದಾವಣಗೆರೆ, ಜನವರಿ 26: ಕೆಲವು ತಿಂಗಳ ಹಿಂದೆ ಬೆಲೆ ಏರಿಕೆ ಮೂಲಕ ಗ್ರಾಹಕರನ್ನು ಕಂಗಾಲಾಗಿಸಿದ್ದ ಈರುಳ್ಳಿ (Onion Price) ಇದೀಗ ಬೆಲೆ ಕುಸಿತದ ಮೂಲಕ ರೈತರು ಕಣ್ಣೀರು ಹಾಕುವಂತೆ ಮಾಡಿದೆ. ಈರುಳ್ಳಿ ಬೆಲೆ ದಿಢೀರ್ ಕುಸಿತವಾಗಿದ್ದು, ಸಣ್ಣ ಗಾತ್ರದ ಈರುಳ್ಳಿಗೆ ಕೆಜಿಗೆ ಒಂದು ರೂಪಾಯಿಗೆ ಇಳಿಕೆಯಾಗಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಾವಣಗೆರೆ ಎಪಿಎಂಸಿಯಲ್ಲಿ (Davanagere APMC) 31 ಲಾರಿ ಈರುಳ್ಳಿ ಮಾರುಕಟ್ಟೆಗೆ ಬಂದಿದೆ. ಸುಮಾರು 6200 ಚೀಲ ಈರುಳ್ಳಿಯನ್ನು ರೈತರು ಮಾರುಕಟ್ಟೆಗೆ ತಂದಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಈರುಳ್ಳಿಗೆ ಗರಿಷ್ಠ ದರ 1400 ರೂಪಾಯಿ ಇದೆ.

ಅತ್ಯುತ್ತಮ ದಪ್ಪ ಈರುಳ್ಳಿಗೆ 1200 – 1300 ರೂಪಾಯಿ ಇದೆ. ಉತ್ತಮ ದಪ್ಪ ಈರುಳ್ಳಿಗೆ 1000 – 1100 ರೂ. ಇದೆ. ಮಧ್ಯಮ ಗಾತ್ರದ ಈರುಳ್ಳಿಗೆ 600 – 800 ರೂ, ಸಣ್ಣ ಗಾತ್ರದ ಈರುಳ್ಳಿಗೆ 100 ರಿಂದ 300 ರೂ. ದರ ಇದೆ.

ಬೆಲೆ ಕುಸಿತದಿಂದಾಗಿ ಬೇಸತ್ತ ರೈತರು ಜಮೀನಿನಲ್ಲಿಯೇ ಈರುಳ್ಳಿ ಬಿಡಲು ನಿರ್ಧಿಸಿದ್ದಾರೆ. ಸಾರಿಗೆ ವೆಚ್ಚ ಸಹ ಸಿಗದ ಸ್ಥಿತಿ ಇರುವುದರಿಂದ ಈರುಳ್ಳಿಯನ್ನು ಮಾರುಕಟ್ಟೆಗೆ ಸಾಗಿಸುವುದೇ ವ್ಯರ್ಥ. ಹೀಗಾಗಿ ಹೊಲದಲ್ಲಿಯೇ ಬಿಡುವುದು ಉತ್ತಮ ಎಂಬ ನಿರ್ಧಾರಕ್ಕೆ ರೈತರು ಬಂದಿದ್ದಾರೆ.

ಇದನ್ನೂ ಓದಿ: ಗಗನಕ್ಕೇರಿದ ಈರುಳ್ಳಿ ಬೆಲೆ, ರೈತರಿಗೆ ದೊರೆಯುತ್ತಿಲ್ಲ ಪ್ರಯೋಜನ: ಮಧ್ಯವರ್ತಿಗಳು, ವ್ಯಾಪಾರಿಗಳಿಗಷ್ಟೇ ಲಾಭ

ಕಳೆದ ಅಕ್ಟೋಬರ್​ನಲ್ಲಿ ಈರುಳ್ಳಿ ಬೆಲೆ ಕೆಜಿಗೆ ಸುಮಾರು 80 ರೂಪಾಯಿ ತಲುಪಿತ್ತು. ಪರಿಣಾಮವಾಗಿ ಗ್ರಾಹಕರು ಕಣ್ಣೀರುಹಾಕುವಂತಾಗಿತ್ತು. ನಂತರ ಸರ್ಕಾರ ಕೂಡ ಈರುಳ್ಳಿ ಬೆಲೆ ಇಳಿಕೆಗೆ ಮಧ್ಯ ಪ್ರವೇಶ ಮಾಡಿ ಹಲವು ಕ್ರಮ ಕೈಗೊಂಡಿತ್ತು. ಈರುಳ್ಳಿ ಬೆಲೆ ಹೆಚ್ಚಳವಾದ ಕಾರಣ ಕೇಂದ್ರ ಸರ್ಕಾರ ಕೂಡ ಎರಡು ಎನ್​ಸಿಸಿಎಫ್ ಹಾಗೂ ಎನ್​ಎಎಎಫ್​ಡಿ ಜೊತೆ ಸೇರಿ ಜನರಿಗೆ ಅನಕೂಲ ಆಗಲಿ ಎನ್ನುವ ಕಾರಣಕ್ಕೆ ಈರುಳ್ಳಿಯನ್ನು ಸಬ್ಸಿಡಿ ಮೂಲಕ ವಿತರಣೆ ಮಾಡಿತ್ತು. ಇದೀಗ ಈರುಳ್ಳಿ ಬೆಲೆ ತೀವ್ರ ಕುಸಿತದಿಂದ ರೈತರು ಕಂಗಾಲಾಗಿದ್ದು, ಬೆಳೆಗಾರರ ರಕ್ಷಣೆಗೆ ಸರ್ಕಾರ ಧಾವಿಸಬೇಕಿದೆ.

ಇದಕ್ಕೂ ಮುನ್ನ ಟೊಮೆಟೊ ಬೆಲೆಯಲ್ಲಿ ವಿಪರೀತ ಏರಿಕೆಯಾಗಿ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ