AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ದಿಢೀರ್ ಕುಸಿದ ಈರುಳ್ಳಿ ಬೆಲೆ, ರೈತರು ಕಂಗಾಲು

ಈರುಳ್ಳಿ ಬೆಲೆ ಕುಸಿತ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಸಾರಿಗೆ ವೆಚ್ಚ ಸಹ ಸಿಗದ ಸ್ಥಿತಿ ಇರುವುದರಿಂದ ಈರುಳ್ಳಿಯನ್ನು ಮಾರುಕಟ್ಟೆಗೆ ಸಾಗಿಸುವುದೇ ವ್ಯರ್ಥ. ಹೀಗಾಗಿ ಹೊಲದಲ್ಲಿಯೇ ಬಿಡುವುದು ಉತ್ತಮ ಎಂಬ ನಿರ್ಧಾರಕ್ಕೆ ರೈತರು ಬಂದಿದ್ದಾರೆ.

ದಾವಣಗೆರೆ: ದಿಢೀರ್ ಕುಸಿದ ಈರುಳ್ಳಿ ಬೆಲೆ, ರೈತರು ಕಂಗಾಲು
ಸಾಂದರ್ಭಿಕ ಚಿತ್ರ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Ganapathi Sharma

Updated on: Jan 26, 2024 | 12:39 PM

ದಾವಣಗೆರೆ, ಜನವರಿ 26: ಕೆಲವು ತಿಂಗಳ ಹಿಂದೆ ಬೆಲೆ ಏರಿಕೆ ಮೂಲಕ ಗ್ರಾಹಕರನ್ನು ಕಂಗಾಲಾಗಿಸಿದ್ದ ಈರುಳ್ಳಿ (Onion Price) ಇದೀಗ ಬೆಲೆ ಕುಸಿತದ ಮೂಲಕ ರೈತರು ಕಣ್ಣೀರು ಹಾಕುವಂತೆ ಮಾಡಿದೆ. ಈರುಳ್ಳಿ ಬೆಲೆ ದಿಢೀರ್ ಕುಸಿತವಾಗಿದ್ದು, ಸಣ್ಣ ಗಾತ್ರದ ಈರುಳ್ಳಿಗೆ ಕೆಜಿಗೆ ಒಂದು ರೂಪಾಯಿಗೆ ಇಳಿಕೆಯಾಗಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಾವಣಗೆರೆ ಎಪಿಎಂಸಿಯಲ್ಲಿ (Davanagere APMC) 31 ಲಾರಿ ಈರುಳ್ಳಿ ಮಾರುಕಟ್ಟೆಗೆ ಬಂದಿದೆ. ಸುಮಾರು 6200 ಚೀಲ ಈರುಳ್ಳಿಯನ್ನು ರೈತರು ಮಾರುಕಟ್ಟೆಗೆ ತಂದಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಈರುಳ್ಳಿಗೆ ಗರಿಷ್ಠ ದರ 1400 ರೂಪಾಯಿ ಇದೆ.

ಅತ್ಯುತ್ತಮ ದಪ್ಪ ಈರುಳ್ಳಿಗೆ 1200 – 1300 ರೂಪಾಯಿ ಇದೆ. ಉತ್ತಮ ದಪ್ಪ ಈರುಳ್ಳಿಗೆ 1000 – 1100 ರೂ. ಇದೆ. ಮಧ್ಯಮ ಗಾತ್ರದ ಈರುಳ್ಳಿಗೆ 600 – 800 ರೂ, ಸಣ್ಣ ಗಾತ್ರದ ಈರುಳ್ಳಿಗೆ 100 ರಿಂದ 300 ರೂ. ದರ ಇದೆ.

ಬೆಲೆ ಕುಸಿತದಿಂದಾಗಿ ಬೇಸತ್ತ ರೈತರು ಜಮೀನಿನಲ್ಲಿಯೇ ಈರುಳ್ಳಿ ಬಿಡಲು ನಿರ್ಧಿಸಿದ್ದಾರೆ. ಸಾರಿಗೆ ವೆಚ್ಚ ಸಹ ಸಿಗದ ಸ್ಥಿತಿ ಇರುವುದರಿಂದ ಈರುಳ್ಳಿಯನ್ನು ಮಾರುಕಟ್ಟೆಗೆ ಸಾಗಿಸುವುದೇ ವ್ಯರ್ಥ. ಹೀಗಾಗಿ ಹೊಲದಲ್ಲಿಯೇ ಬಿಡುವುದು ಉತ್ತಮ ಎಂಬ ನಿರ್ಧಾರಕ್ಕೆ ರೈತರು ಬಂದಿದ್ದಾರೆ.

ಇದನ್ನೂ ಓದಿ: ಗಗನಕ್ಕೇರಿದ ಈರುಳ್ಳಿ ಬೆಲೆ, ರೈತರಿಗೆ ದೊರೆಯುತ್ತಿಲ್ಲ ಪ್ರಯೋಜನ: ಮಧ್ಯವರ್ತಿಗಳು, ವ್ಯಾಪಾರಿಗಳಿಗಷ್ಟೇ ಲಾಭ

ಕಳೆದ ಅಕ್ಟೋಬರ್​ನಲ್ಲಿ ಈರುಳ್ಳಿ ಬೆಲೆ ಕೆಜಿಗೆ ಸುಮಾರು 80 ರೂಪಾಯಿ ತಲುಪಿತ್ತು. ಪರಿಣಾಮವಾಗಿ ಗ್ರಾಹಕರು ಕಣ್ಣೀರುಹಾಕುವಂತಾಗಿತ್ತು. ನಂತರ ಸರ್ಕಾರ ಕೂಡ ಈರುಳ್ಳಿ ಬೆಲೆ ಇಳಿಕೆಗೆ ಮಧ್ಯ ಪ್ರವೇಶ ಮಾಡಿ ಹಲವು ಕ್ರಮ ಕೈಗೊಂಡಿತ್ತು. ಈರುಳ್ಳಿ ಬೆಲೆ ಹೆಚ್ಚಳವಾದ ಕಾರಣ ಕೇಂದ್ರ ಸರ್ಕಾರ ಕೂಡ ಎರಡು ಎನ್​ಸಿಸಿಎಫ್ ಹಾಗೂ ಎನ್​ಎಎಎಫ್​ಡಿ ಜೊತೆ ಸೇರಿ ಜನರಿಗೆ ಅನಕೂಲ ಆಗಲಿ ಎನ್ನುವ ಕಾರಣಕ್ಕೆ ಈರುಳ್ಳಿಯನ್ನು ಸಬ್ಸಿಡಿ ಮೂಲಕ ವಿತರಣೆ ಮಾಡಿತ್ತು. ಇದೀಗ ಈರುಳ್ಳಿ ಬೆಲೆ ತೀವ್ರ ಕುಸಿತದಿಂದ ರೈತರು ಕಂಗಾಲಾಗಿದ್ದು, ಬೆಳೆಗಾರರ ರಕ್ಷಣೆಗೆ ಸರ್ಕಾರ ಧಾವಿಸಬೇಕಿದೆ.

ಇದಕ್ಕೂ ಮುನ್ನ ಟೊಮೆಟೊ ಬೆಲೆಯಲ್ಲಿ ವಿಪರೀತ ಏರಿಕೆಯಾಗಿ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ