AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ನಿಂದನಾತ್ಮಕ ಹೇಳಿಕೆ: ಕೆಎಸ್ ಶಿವರಾಮು ವಿರುದ್ಧ ದಾವಣಗೆರೆಯಲ್ಲಿ ದೂರು ದಾಖಲು

ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವಿಚಾರವಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆಎಸ್ ಶಿವರಾಮು ವಿರುದ್ಧ ದಾವಣಗೆರೆ ಜಿಲ್ಲಾ ಪಂಚಮಸಾಲಿ‌‌ ಸಮಾಜದ ಅಧ್ಯಕ್ಷ ಗೋಪನಾಳ್ ಪೊಲೀಸರಿಗೆ ದೂರು ನೀಡಿದ್ದಾರೆ. ಕ್ಷಮೆಯಾಚಿಸುವಂತೆಯೂ ಆಗ್ರಹಿಸಿದ್ದಾರೆ.

ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ನಿಂದನಾತ್ಮಕ ಹೇಳಿಕೆ: ಕೆಎಸ್ ಶಿವರಾಮು ವಿರುದ್ಧ ದಾವಣಗೆರೆಯಲ್ಲಿ ದೂರು ದಾಖಲು
ಕೆಎಸ್ ಶಿವರಾಮು & ಜಯಮೃತ್ಯುಂಜಯ ಸ್ವಾಮೀಜಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Dec 17, 2024 | 11:34 AM

Share

ದಾವಣಗೆರೆ, ಡಿಸೆಂಬರ್ 17: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆಎಸ್ ಶಿವರಾಮು ವಿರುದ್ಧ ದಾವಣಗೆರೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ. ದಾವಣಗೆರೆ ಜಿಲ್ಲಾ ಪಂಚಮಸಾಲಿ‌‌ ಸಮಾಜದ ಅಧ್ಯಕ್ಷ ಗೋಪನಾಳ್ ಅಶೋಕ ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಂತರ ಮಾತನಾಡಿದ ಅವರು, ಪಂಚಮಸಾಲಿ ಸಮಾಜದವರು ಹೇಡಿಗಳಲ್ಲ. ಕೆಎಸ್ ಶಿವರಾಮು ತಕ್ಷಣವೇ ಸ್ವಾಮೀಜಿಗಳ ಬಗ್ಗೆ ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಗೋಪನಾಳ್ ಅಶೋಕ ಆಗ್ರಹಿಸಿದ್ದಾರೆ.

ಏನು ಹೇಳಿದ್ದರು ಕೆಎಸ್​ ಶಿವರಾಮು?

ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ತೀವ್ರಗೊಳಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕೆಎಸ್​ ಶಿವರಾಮು, ಆ ವಿಚಾರವಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ವಾಮೀಜಿ ಬಿಜೆಪಿ ಏಜೆಂಟ್​ರಂತೆ ವರ್ತಿಸುತ್ತಿದ್ದಾರೆ. ಕಾವಿ ಬಿಚ್ಚಿ ರಾಜಕೀಯಕ್ಕೆ ಬರಲಿ ಎಂದಿದ್ದರು.

ಇದನ್ನೂ ಓದಿ: ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ: ಜಯಮೃತ್ಯುಂಜಯ ಸ್ವಾಮೀಜಿಗೆ ಕೆಎಸ್ ಶಿವರಾಮು ಎಚ್ಚರಿಕೆ

ಮೈಸೂರಿನಲ್ಲಿ ಮಾತನಾಡಿದ್ದ ಶಿವರಾಮು, ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ. ಸ್ವಾಮೀಜಿಗಳು ರಾಜಕೀಯ ಪುಢಾರಿ ರೀತಿ ನಡೆದುಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ಅವರು ಸನ್ಯಾಸಿಯಾಗಿ ಒಂದು ಜಾತಿ ಪರವಾಗಿ ಕೆಲಸ ಮಾಡುವುದು ಸರಿಯಲ್ಲ. ಸ್ವಾಮೀಜಿಯಾಗಲು ನಾಲಾಯಕ್. ಕಾವಿ ಬಟ್ಟೆ ಬಿಚ್ವಿಟ್ಟು ಬರುವುದು ಉತ್ತಮ ಎಂದು ಕೆಎಸ್ ಶಿವರಾಮು ಹೇಳಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ