AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಕಾಮಗಾರಿ ಆರಂಭ; ರಸ್ತೆ ನಿರ್ಮಿಸದೇ ಮದುವೆ ಆಗಲ್ಲ ಎಂದ ಯುವತಿಯ ಛಲಕ್ಕೆ ಸಿಕ್ಕಿತು ಪ್ರತಿಫಲ

ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನಡುರಸ್ತೆಯಲ್ಲಿ ತಮ್ಮ ಕಾರ್ ನಿಲ್ಲಿಸಿ ನಡೆದುಕೊಂಡು ಹೋಗಿ ಗ್ರಾಮ ತಲುಪಿದ್ದರು.

ರಸ್ತೆ ಕಾಮಗಾರಿ ಆರಂಭ; ರಸ್ತೆ ನಿರ್ಮಿಸದೇ ಮದುವೆ ಆಗಲ್ಲ ಎಂದ ಯುವತಿಯ ಛಲಕ್ಕೆ ಸಿಕ್ಕಿತು ಪ್ರತಿಫಲ
ರಸ್ತೆ ಕಾಮಗಾರಿ
TV9 Web
| Updated By: guruganesh bhat|

Updated on: Sep 17, 2021 | 5:25 PM

Share

ದಾವಣಗೆರೆ: ಗ್ರಾಮಕ್ಕೆ ರಸ್ತೆಯಾಗುವವರೆಗೂ ಮದುವೆಯಾಗುವುದಿಲ್ಲ ಎಂದು ಪಣ ತೊಟ್ಟಿದ್ದ ಯುವತಿಯ ಆಸೆ ಅಂತೂ ಈಡೇರತೊಡಗಿದೆ. ದಾವಣಗೆರೆ ತಾಲೂಕಿನ ಎಚ್.ರಾಂಪುರ ಗ್ರಾಮಕ್ಕೆ ರಸ್ತೆ ಕಾಮಗಾರಿ ಆರಂಭಗೊಂಡಿದೆ. ನಿನ್ನೆಯಷ್ಟೇ (ಸೆಪ್ಟೆಂಬರ್ 16) ಜಿಲ್ಲಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿ ಆರಂಭಿಸುವ ಬಗ್ಗೆ ಭರವಸೆ ನೀಡಿದ್ದು. ಈ ಬೆನ್ನಲ್ಲೆ ಇಂದು ರಸ್ತೆ ಕಾಮಗಾರಿ ಆರಂಭಗೊಂಡಿದೆ. ಸ್ವತಃ ಜಿಲ್ಲಾ ಪಂಚಾಯತ ಸಿಇಓ ಮಹಾಂತೇಶ ದ್ಯಾಮಕ್ಕನ್ನವರ ಸಮ್ಮುಖದಲ್ಲಿ ಕಾಮಗಾರಿ ನಡೆಯುತ್ತಿದೆ.

ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನಡುರಸ್ತೆಯಲ್ಲಿ ತಮ್ಮ ಕಾರ್ ನಿಲ್ಲಿಸಿ ನಡೆದುಕೊಂಡು ಹೋಗಿ ಗ್ರಾಮ ತಲುಪಿದ್ದರು. ಬಳಿಕ ಯುವತಿ ಬಿಂದು ಜೊತೆ ಮಾತನಾಡಿ ಗ್ರಾಮದ ಸಮಸ್ಯೆ ಬಗೆಹರಿಸುವಂತೆ ಭರವಸೆ ನೀಡಿದ್ದರು.

ಈ ವೇಳೆ ಅವರು ನಿಮ್ಮೂರಿಗೆ ರಸ್ತೆ ಮಾಡಿಸುತ್ತೇನೆ, ಬಸ್ ವ್ಯವಸ್ಥೆ ಮಾಡುತ್ತೇನೆ. ಜೊತೆಗೆ ನಿನಗೆ ಮದ್ವೆ ಕೂಡಾ ಮಾಡಿಸುತ್ತೇನೆ. ಒಳ್ಳೆ ಗಂಡು ಹುಡುಕಿ ಮದ್ವೆ ಮಾಡಿಸುವೆ. ನಿನ್ನ ಬಗ್ಗೆ ಗೊತ್ತಾಗಿದೆ. ನಿಮ್ಮೂರಲ್ಲಿಯೇ ಬಂದಿವೆ. ಆದಷ್ಟು ಬೇಗ ಮದ್ವೆ ಕೂಡಾ ಮಾಡಿಸುವೆ ಎಂದು ಬಿಂದುಗೆ ಮಹಾಂತೇಶ ಬೀಳಗಿ ಭರವಸೆ ನೀಡಿದ್ದರು. ರಾಂಪುರ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಬಿಂದು ಜೊತೆ ಪೋನ್ ನಲ್ಲಿ ಮಾತಾಡಿದ ಜಿಲ್ಲಾಧಿಕಾರಿ ಗ್ರಾಮಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡುವೆ. ನಾಳೆಯಿಂದಲೇ ರಸ್ತೆ ಕಾಮಗಾರಿ ಆರಂಭ ಮಾಡಲಾಗುವುದು ಎಂದಿದ್ದಾರೆ. ಖಾಸಗಿ ಶಾಲೆಯಲ್ಲಿ ಶಿಕ್ಷಕಿ ಆಗಿರುವ ಬಿಂದು ಸದ್ಯ ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಇದ್ದಾರೆ.

ಘಟನೆ ಹಿನ್ನೆಲೆ: ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿ‌ ಇರುವ ರಾಂಪುರ ಗ್ರಾಮದ ಯುವತಿ ಬಿಂದು ನಮ್ಮೂರು ಕಾಡು, ಗುಡ್ಡಗಾಡಿನ ಮಧ್ಯೆ ಇರುವ ಕುಗ್ರಾಮ. ಕೆಟ್ಟ ರಸ್ತೆಗಳು ದಶಕಗಳಿಂದ ಸುಧಾರಣೆ ಆಗಿಲ್ಲ, ಗ್ರಾಮದಲ್ಲಿ ಮೂಲ ಸೌಕರ್ಯದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ತಮ್ಮೂರಿಗೆ ಯಾರು ಹೆಣ್ಣು ಕೊಡಲ್ಲ. ಹೀಗಾಗಿ ರಸ್ತೆಯಾಗೋವರೆಗೂ ನಾನು ಮದ್ವೆ ಆಗಲ್ಲ ಎಂದು ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದರು.

ಸಿಎಂ, ಪಿಎಂವರೆಗೂ ಪತ್ರ ಬರೆದರೂ ಪ್ರಯೋಜನವಾಗಿರಲಿಲ್ಲ. ಸದ್ಯ ಡಿಸಿ ಮಹಾಂತೇಶ ಬೀಳಗಿ ನಡುರಸ್ತೆಯಲ್ಲಿ ಕಾರು ನಿಲ್ಲಿಸಿ ಕಾಲ್ನಡಿಗೆಯಲ್ಲೇ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿ ಗ್ರಾಮದ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: 

TV9 Impact: ಗ್ರಾಮಕ್ಕೆ ರಸ್ತೆಯಿಲ್ಲವೆಂದು ಯುವತಿ ಮದುವೆಗೆ ಹಿಂದೇಟು, ಬೇಡಿಕೆ ಈಡೇರಿಸಲು ಗ್ರಾಮಕ್ಕೆ ಬಂದ ದಾವಣಗೆರೆ ಡಿಸಿ ಮಹಾಂತೇಶ ಬೀಳಗಿ

ರಸ್ತೆ ಆಗುವವರೆಗೂ ಮದುವೆಯಾಗಲ್ಲ ಎಂದು ಪಟ್ಟು ಹಿಡಿದ ಯುವತಿಗೆ ಗುಡ್ ನ್ಯೂಸ್; ರಸ್ತೆ ಮಾತ್ರವಲ್ಲ ನಿನ್ನ ಮದುವೆ ಕೂಡಾ ಮಾಡುತ್ತೇನೆ ಎಂದ ದಾವಣಗೆರೆ ಡಿಸಿ

(Davanagere Road Construction work started on h rampur village young lady says did not marry until her village have road)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ