AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬರ ಬೈಕ್​ ದಾಖಲಾತಿ ಮತ್ತೊಬ್ಬರ ಹೆಸರಿಗೆ, ಬೈಕ್ ಕಳ್ಳತನ ಪ್ರಕರಣದಿಂದ ಬಯಲಿಗೆ ಬಿದ್ದ ದಾವಣಗೆರೆ RTO ಸಿಬ್ಬಂದಿ

ಬೈಕ್ ಕಳ್ಳತನ ಪ್ರಕರಣದಿಂದ ದಾವಣಗೆರೆ RTO ಕಚೇರಿ ಸಿಬ್ಬಂದಿಯ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಒಬ್ಬರ ಬೈಕ್ ಗಳನ್ನ ಇನ್ನೊಬ್ಬರ ಹೆಸರಿಗೆ‌ ಮಾಡಿಕೊಡುತ್ತಿದ್ದ ದಂಧೆ ಬಯಲಿಗೆ ಬಂದಿದೆ.

ಒಬ್ಬರ ಬೈಕ್​ ದಾಖಲಾತಿ ಮತ್ತೊಬ್ಬರ ಹೆಸರಿಗೆ, ಬೈಕ್ ಕಳ್ಳತನ ಪ್ರಕರಣದಿಂದ ಬಯಲಿಗೆ ಬಿದ್ದ ದಾವಣಗೆರೆ RTO ಸಿಬ್ಬಂದಿ
ದಾವಣಗೆರೆ ಪೊಲೀಸ್
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Aug 02, 2023 | 9:57 AM

Share

ದಾವಣಗೆರೆ, (ಆಗಸ್ಟ್, 02): ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾದ ಬೈಕ್(bike) ಕಳ್ಳತನ ಪ್ರಕರಣದಿಂದ ದಾವಣಗೆರೆ ಆರ್​ಟಿಓ ಕಚೇರಿಯ ಬ್ರಹ್ಮಾಂಡ ಭ್ರಷ್ಟಾಚಾರ ಬಟಾಬಯಲಾಗಿದೆ. ಹೌದು…ನಕಲಿ ದಾಖಲೆ ಸೃಷ್ಟಿಸಿ ಒಬ್ಬರ ಬೈಕ್ ಗಳನ್ನ ಇನ್ನೊಬ್ಬರ ಹೆಸರಿಗೆ‌ ಮಾಡಿಕೊಡುತ್ತಿದ್ದ ದಂಧೆ ಬಯಲಿಗೆ ಬಂದಿದೆ. ಬೈಕ್ ಕಳ್ಳತನ ಪ್ರಕರಣದಿಂದ ಈ ಜಾಲ ಪತ್ತೆಯಾಗಿದ್ದು ಈ ಸಂಬಂಧ ದಾವಣಗೆರೆ(ಧಅವಅನಅಗೆರೆ)  ಆರ್ ಟಿ ಓ ಕಚೇರಿಯ ಸಿಬ್ಬಂದಿ ಪ್ರದೀಪ, ಜಗದೀಶ, ಶಶಿಕುಮಾರ ಹಾಗೂ ವಸಂತಕುಮಾರ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಅಡಿಕೆ ತೋಟ ನಾಶ ಮಾಡಿದ ದುಷ್ಕರ್ಮಿಗಳು, ವೈಷಮ್ಯಕ್ಕೆ 10 ವರ್ಷದಿಂದ ಪೋಷಣೆ ಮಾಡಿದ ಮರಗಳು ಸರ್ವನಾಶ

ಮೂಲ ಮಾಲೀಕರ ಬದಲು ಬ್ರೋಕರ್ ಸಹಿ ಮಾಡಿಸಿ ಬೇರೆಯವರ ಹೆಸರಿಗೆ ಬೈಕ್ ದಾಖಲು ಮಾಡಿಕೊಟ್ಟಿದ್ದಾರೆ. ಆರ್ ಟಿ ಓ ಎಜೆಂಟ್ ರಸೂಲ್ ಎಂಬಾತನಿಂದ ಸಹಿ ಪಡೆದು ಬೈಕ್ ಗಳ ದಾಖಲಾತಿ ಬದಲಿಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾದ ಬೈಕ್ ಕಳ್ಳತನ ಪ್ರಕರಣದಿಂದ ಸಿಬ್ಬಂದಿಯ ಕರ್ಮಕಾಂಡ ಬಯಲಿಗೆ ಬಂದಿದೆ. ಈ ಸಂಬಂಧ ಆರ್ ಟಿಓ ಕಚೇರಿಯ ಹತ್ತು ಜನ ಸಿಬ್ಬಂದಿ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ದಾವಣೆಗರೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!