AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡಾಯ ಮಣಿಸಿ ದಾವಣಗೆರೆ ಬೈ ಎಲೆಕ್ಷನ್​ ಗೆದ್ದ ಸಮರ್ಥ್ ಶಾಮನೂರು

ಸಾಕಷ್ಟು ಸವಾಲುಗಳ ನಡುವೆಯೂ ದಾವಣಗೆರೆ ದಕ್ಷಿಣ ಕ್ಷೇತ್ರವನ್ನು ಮರಳಿ ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಕಾಂಗ್ರೆಸ್​​ ಯಶಸ್ವಿಯಾಗಿದೆ. ಉಪ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿಯ ಶ್ರೀನಿವಾಸ ದಾಸ್ ಕರಿಯಪ್ಪ ವಿರುದ್ಧ ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವಿನ ಬಾವುಟ ಹಾರಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಈ ಕ್ಷೇತ್ರ ತೆರವಾಗಿದ್ದ ಹಿನ್ನೆಲೆ ಉಪ ಚುನಾವಣೆ ನಡೆದಿತ್ತು.

ಬಂಡಾಯ ಮಣಿಸಿ ದಾವಣಗೆರೆ ಬೈ ಎಲೆಕ್ಷನ್​ ಗೆದ್ದ ಸಮರ್ಥ್ ಶಾಮನೂರು
ಸಮರ್ಥ್ ಶಾಮನೂರು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:May 04, 2026 | 4:53 PM

Share

ದಾವಣಗೆರೆ, ಮೇ 04: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮೊಮ್ಮಗ, ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪಗೆ ಸೋಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರಾಭಯಗೊಂಡಿದೆ. ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಆಡಳಿತಾರೂಢ ಕಾಂಗ್ರೆಸ್​​ ಮರಳಿ ತೆಕ್ಕೆಗೆ ಪಡೆದಿದೆ.

ಯಾರಿಗೆ ಎಷ್ಟು ಮತ?

ಕಾಂಗ್ರೆಸ್​ನ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪ ವಿರುದ್ಧ  5,708 ಮತಗಳ ಅಂತರಿಂದ ಜಯ ಸಾಧಿಸಿದ್ದಾರೆ.  ಸಮರ್ಥ್ ಶಾಮನೂರುಗೆ 69,578 ಮತಗಳು ಬಿದ್ದಿದ್ದರೆ,  ಶ್ರೀನಿವಾಸ ಟಿ.ದಾಸ ಕರಿಯಪ್ಪ 63,870 ಮತಗಳನ್ನು ಪಡೆದಿದ್ದಾರೆ. ಇನ್ನು ಎಸ್​ಡಿಪಿಐನ ಅಫ್ಸರ್ ಕೊಡ್ಲಿಪೇಟೆಗೆ 18975 ಮತಗಳು ಮತ್ತು ನೋಟಾಗೆ 511 ಮತಗಳು ಚಲಾವಣೆಯಾಗಿವೆ.

ಇದನ್ನೂ ಓದಿ: ಬಾಗಲಕೋಟೆ ಬೈ ಎಲೆಕ್ಷನ್​​; ಮೊದಲ ಚುನಾವಣೆಯಲ್ಲೇ ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ

ಕಣದಲ್ಲಿದ್ದ 15 ಮುಸ್ಲಿಂ ಅಭ್ಯರ್ಥಿಗಳು

ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್​​ ಟಿಕೆಟ್​​ ಸಿಗದ ಕಾರಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಕೆಲ ನಾಯಕರು ಬಂಡಾಯವೆದ್ದಿದ್ದರು. ಹೀಗಾಗಿ ಎಸ್​​ಡಿಪಿಐನ ಅಭ್ಯರ್ಥಿ ಸೇರಿ ಒಟ್ಟು 15 ಜನ ಮುಸ್ಲಿಂಮರು ಉಪಚುನಾವಣೆಗೆ ಸ್ಫರ್ಧೆ ಮಾಡಿದ್ದರು. ಈ ಎಲ್ಲರಿಗೆ ಸೇರಿ ಒಟ್ಟು 22,768 ಮತಗಳು ಚಲಾವಣೆಗೊಂಡಿವೆ. ಇವರ ಸ್ಪರ್ಧೆಯಿಂದ ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್​​ ಶಾಮನೂರುಗೆ ಸೋಲಾಗದಿದ್ದರೂ ಗೆಲುವಿನ ಅಂತರ ಕಡಿಮೆಗೊಳಿಸುವ ಮೂಲಕ ಪ್ರಯಾಸದ ಗೆಲುವು ತರುವಲ್ಲಿ ಪಾತ್ರವಹಿಸಿದೆ.

ಕಾರ್ಯಕರ್ತರ ವಿಜಯೋತ್ಸವ

ಸಮರ್ಥ್ ಶಾಮನೂರು ಗೆಲುವಿನ ಹಿನ್ನೆಲೆ ಕಾಂಗ್ರೆಸ್​​ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ಕೆಲವರು ಮುಸ್ಲಿಂ ಮತಗಳು ವಿಭಜನೆ ಆಗುವಂತೆ ಮಾಡಿದ್ದು, ಕಾಂಗ್ರೆಸ್​​ನ 22 ಸಾವಿರ ಮತಗಳು ಬೇರೆಯವರ ಪಾಲಾಗಿವೆ. ಹೀಗಾಗಿಯೇ ಇದಕ್ಕೆ ಕಾರಣರಾದ ಮುಖಂಡರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಮುಸ್ಲಿಂ‌‌ ಮುಖಂಡ ಅಮಾನತ್ತನ್ನು ಕಾರ್ಯಕರ್ತರು ಸಮರ್ಥಿಸಿಕೊಂಡಿದ್ದಾರೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ.

Published On - 3:05 pm, Mon, 4 May 26

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!