AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokayukta Raid: ಲಂಚ ಪಡೆಯುತ್ತಿದ್ದ ಸರ್ಕಾರಿ ವಿಶೇಷ ಅಭಿಯೋಜಕಿ ಲೋಕಾಯುಕ್ತರ ವಶ

ಸರ್ಕಾರಿ ವಿಶೇಷ ಅಭಿಯೋಜಕಿ ಆರೋಪಿಯ ಬಳಿ 1.87 ಲಕ್ಷ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲದೆ ಪೋಕ್ಸೋ (POCSO) ಪ್ರಕರಣದ ಆರೋಪಿ ಬಳಿ 3 ಲಕ್ಷಕ್ಕೆ ಎಸ್​.ಎಸ್​​.ಪಿ ಬೇಡಿಕೆ ಇಟ್ಟ ಪ್ರಕರಣವೂ ಬೆಳಕಿಗೆ ಬಂದಿದೆ.

Lokayukta Raid: ಲಂಚ ಪಡೆಯುತ್ತಿದ್ದ ಸರ್ಕಾರಿ ವಿಶೇಷ ಅಭಿಯೋಜಕಿ ಲೋಕಾಯುಕ್ತರ ವಶ
Image Credit source: Thestatesman.com
TV9 Web
| Updated By: ನಯನಾ ರಾಜೀವ್|

Updated on:Feb 05, 2023 | 12:56 PM

Share

ದಾವಣಗೆರೆ: ದಾವಣಗೆರೆಯ ವಿಶೇಷ ಪೋಕ್ಸೋ ಕೋರ್ಟನ ವಿಶೇಷ ಅಭಿಯೋಜಕಿಯಾಗಿರುವ ರೇಣಾ ಎಸ್ ಕೊಟ್ರಗೌಡರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ನಡೆದಿದೆ. ರೇಣಾ.ಎಸ್ ಕೊಟ್ರಗೌಡರ ದಾವಣಗೆರೆಯ ಪಿಜೆ ಬಡಾವಣೆ ನಿವಾಸಿಯಾಗಿದ್ದು ಇದೀಗ ಲೋಕಾಯುಕ್ತರು ಇವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸರ್ಕಾರಿ ವಿಶೇಷ ಅಭಿಯೋಜಕಿ ಆರೋಪಿಯ ಬಳಿ 1.87 ಲಕ್ಷ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲದೆ ಪೋಕ್ಸೋ (POCSO) ಪ್ರಕರಣದ ಆರೋಪಿ ಬಳಿ 3 ಲಕ್ಷಕ್ಕೆ ಎಸ್​.ಎಸ್​​.ಪಿ ಬೇಡಿಕೆ ಇಟ್ಟ ಪ್ರಕರಣವೂ ಬೆಳಕಿಗೆ ಬಂದಿದೆ.ದಾವಣಗೆರೆ ಲೋಕಾಯುಕ್ತ ಎಸ್​ಪಿ ಎಂ.ಎಸ್​ ಕೌಲಾಪುರೆ ನೇತೃತ್ವದಲ್ಲಿ ದಾಳಿ ನಡೆದಿದ್ದು ಸರ್ಕಾರಿ ವಿಶೇಷ ಅಭಿಯೋಜಕಿ ರೇಣಾ.ಎಸ್ ಕೊಟ್ರಗೌಡರನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಲೋಕಾಯುಕ್ತರ ಬಲೆಗೆ ಬಿದ್ದದ್ದು ಹೇಗೆ?

ಆರೋಪಿ ರೇಣಾ ಎಸ್ ಕೊಟ್ರಗೌಡರ ಪಿಜೆ ಬಡಾವಣೆಯ ತಮ್ಮ ನಿವಾಸದಲ್ಲೇ ಲಂಚ ಸ್ವೀಕಾರ ಮಾಡುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಪೋಕ್ಸೋ ಪ್ರಕರಣದ ಆರೋಪಿ ಮದನ್ ಎಂಬಾತನಿಂದ 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಹಿಂದೆ 1 ಲಕ್ಷ 13 ಸಾವಿರ ಪಡೆದಿದ್ದ ಇದೀಗ ಉಳಿದ ಮೊತ್ತ ತೆಗೆಕೊಳ್ಳುತ್ತಿರುವ ಸಮಯದಲ್ಲಿ ಲೋಕಾಯುಕ್ತರು ಆರೋಪಿಯನ್ನು ವಶಕ್ಕೆ ಪಡೆದ್ದಿದ್ದಾರೆ. ಮದನ್ ಒಬ್ಬ ಪೋಕ್ಸೋ ಪ್ರಕರಣದ ಆರೋಪಿ, ಸಂತ್ರಸ್ಥೆ ಪರ ವಾದ ಮಾಡಬೇಕಾದ ವಿಶೇಷ ಅಭಿಯೋಜಕಿ ಹಣದಾಸೆಗೆ ಪೋಕ್ಸೋ ಆರೋಪಿಯ ರಕ್ಷಣೆಗೆ ಮುಂದಾಗಿದ್ದಾರೆ. ಕೊನೆಗೂ ಆರೋಪಿ ರೇಣಾ ಎಸ್ ಕೊಟ್ರಗೌಡರನ್ನು ಲೋಕಾಯುಕ್ತರ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ; ಕಮಿಷನರ್​ಗೆ ಲೋಕಾಯುಕ್ತ ಬುಲಾವ್

Published On - 12:48 pm, Sun, 5 February 23

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್