AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ವಿಶ್ವವಿದ್ಯಾಲಯ ಘಟಿಕೋತ್ಸವ: ಮೆದುಳಿನಲ್ಲಿ ರಕ್ತಸ್ರಾವ ಆದರೂ ಛಲ ಬಿಡದೆ ಚಿನ್ನದ ಪದಕ ಮುಡಿಗೇರಿಸಿಕೊಂಡ ಯುವತಿ

ಸ್ನಾತಕೋತ್ತರ ವಿಭಾಗ ಒಟ್ಟಾರೇ ಶೇಖಡಾ 95.31 ರಷ್ಟು ಫಲಿತಾಂಶ ಪಡೆದಿದೆ. ಇನ್ನು ಈ ಘಟಿಕೋತ್ಸವದಲ್ಲಿ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ ಹಾಗೂ ಹಿರಿಯ ವೈದ್ಯ ಡಾ. ರಮೇಶ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ದಾವಣಗೆರೆ ವಿಶ್ವವಿದ್ಯಾಲಯ ಘಟಿಕೋತ್ಸವ: ಮೆದುಳಿನಲ್ಲಿ ರಕ್ತಸ್ರಾವ ಆದರೂ ಛಲ ಬಿಡದೆ ಚಿನ್ನದ ಪದಕ ಮುಡಿಗೇರಿಸಿಕೊಂಡ ಯುವತಿ
ದಾವಣಗೆರೆ ವಿಶ್ವವಿದ್ಯಾಲಯದ ಎಂಟನೆ ಘಟಿಕೋತ್ಸವ
preethi shettigar
|

Updated on: Apr 09, 2021 | 2:00 PM

Share

ದಾವಣಗೆರೆ: ಜಿಲ್ಲೆಯ ವಿಶ್ವವಿದ್ಯಾಲಯದಲ್ಲಿ ಏಪ್ರಿಲ್ 8ರಂದು ಎಂಟನೇ ಘಟಿಕೋತ್ಸವ ಆಚರಿಸಿಲಾಯಿತು. ಈ ವಿಶ್ವವಿದ್ಯಾಲಯದಲ್ಲಿ ಚಿನ್ನಗಳಿಸುವ ಪಟ್ಟಿಯಲ್ಲಿ ಮಹಿಳೆಯರ ಪಾಲು ಹೆಚ್ಚಾಗಿದ್ದು, ವಿಶ್ವವಿದ್ಯಾಲಯದ ಉತ್ತಮ ಫಲಿತಾಂಶಕ್ಕೆ ಮತ್ತು ವಿಶ್ವವಿದ್ಯಾಲಯದ ಪ್ರಗತಿಗೆ ಹುಡುಗಿಯರೇ ಕಾರಣರಾಗಿದ್ದಾರೆ. ಇನ್ನು ಸಾಧನೆಗೆ ಯಾವುದೂ ಅಡ್ಡಿಪಡಿಸುವುದಿಲ್ಲ ಎನ್ನುವುದನ್ನು ಈ ವಿಶ್ವವಿದ್ಯಾಲಯದ ಯುವತಿಯೊಬ್ಬರು ನಿರೂಪಿಸಿದ್ದಾರೆ.

ಇಂಗ್ಲೀಷ್​ ವಿಭಾಗದ ನಿಸರ್ಗ ಎಂಬ ಯುವತಿ ಮೆದುಳಿನಲ್ಲಿ ರಕ್ತಸ್ರಾವ ಆಗಿ ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದರೂ ಅದರ ನಡುವೆಯೂ ಓದಿ ಚಿನ್ನದ ಪದಕ ಪಡೆದಿದ್ದಾರೆ. ಆ ಮೂಲಕ ನಿಸರ್ಗ ಇತರರಿಗೆ ಸ್ಪೂರ್ತಿ ಆಗಿದ್ದಾರೆ. ಇನ್ನು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬಾನುವಳ್ಳಿ ಗ್ರಾಮದ ಬಳೆ ಮಾರಾಟ ಮಾಡುವ ವ್ಯಕ್ತಿ ಪುತ್ರ ಹೈದರ್ ಅಲಿ ರಾಜ್ಯಶಾಸ್ತ್ರದಲ್ಲಿ ಚಿನ್ನದ ಪಡೆದು ಗಮನ ಸೆಳೆದಿದ್ದಾರೆ.

ನವದೆಹಲಿ ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ ನ್ಯಾಕ್ ಸಮಿತಿಯು ದಾವಣಗೆರೆ ವಿವಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದೆ. ಮೇಲಾಗಿ ವಿವಿಗೆ ಮೂರು ವಿಶೇಷ ಸಂಶೋಧನಾ ಯೋಜನೆಗಳನ್ನ ಕೊಟ್ಟಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಪಾಠ -ಪ್ರವಚನದಲ್ಲಿ ಒಂದಿಷ್ಟು ಸಹ ತೊಂದರೆ ಆಗದಂತೆ ಇಲ್ಲಿನ ಸಿಬ್ಬಂದಿ ಕಾರ್ಯ ನಿರ್ವಹಿಸಿದೆ. ಇದೇ ಕಾರಣಕ್ಕೆ ಸ್ನಾತಕೋತ್ತರ ವಿಭಾಗದಲ್ಲಿ ಈ ವರ್ಷ 2,014 ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ. ಇವರಲ್ಲಿ 1,189 ವಿದ್ಯಾರ್ಥಿನಿಯರು ಹಾಗೂ 824 ವಿದ್ಯಾರ್ಥಿಗಳು ಇದ್ದಾರೆ.

university convacation

ಚಿನ್ನದ ಪದಕ ಗೆಲ್ಲುವಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈ

ಸ್ನಾತಕೋತ್ತರ ವಿಭಾಗ ಒಟ್ಟಾರೆ ಶೇಕಡಾ 95.31 ರಷ್ಟು ಫಲಿತಾಂಶ ಪಡೆದಿದೆ. ಇನ್ನು ಈ ಘಟಿಕೋತ್ಸವದಲ್ಲಿ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ ಹಾಗೂ ಹಿರಿಯ ವೈದ್ಯ ಡಾ. ರಮೇಶ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಏಳು ಜನ ಪಿಎಚ್​ಡಿ ವಿದ್ಯಾರ್ಥಿಗಳಲ್ಲಿ ಮೂರು ಜನ ಮಹಿಳಾ ಅಭ್ಯರ್ಥಿಗಳು. ಸ್ನಾತಕ ಪದವಿ ಪಡೆಯುವ 11,193 ವಿದ್ಯಾರ್ಥಿಗಳಲ್ಲಿ 6873 ವಿದ್ಯಾರ್ಥಿನಿಯರು ಹಾಗೂ ಸ್ನಾತಕೋತ್ತರ ವಿಭಾಗಗಳಲ್ಲಿ 2,014 ಮಂದಿ ಪದವಿ ಸ್ವೀಕರಿಸಿದ್ದಾರೆ. ಇವರಲ್ಲಿ 1,189 ಜನ ವಿದ್ಯಾರ್ಥಿನಿಯರು. ಒಟ್ಟು ಪದವಿ ಪಡೆಯುವ 13,207 ಜನರಲ್ಲಿ 8,099 ಜನ ವಿದ್ಯಾರ್ಥಿನಿಯರು ಇದ್ದರು. ಇನ್ನು ಚಿನ್ನದ ಪದಕದ ವಿಚಾರಕ್ಕೆ ಬಂದರೆ ವಿವಿಯಲ್ಲಿ 74 ಚಿನ್ನದ ಪದಕಗಳು ಬಂದಿದೆ.

unvirsity convacation

ದಾವಣಗೆರೆ ವಿಶ್ವವಿದ್ಯಾಲಯದ ಎಂಟನೆ ಘಟಿಕೋತ್ಸವದ ಸಂಭ್ರಮಾಚರಣೆ

ಈ ಘಟಿಕೋತ್ಸವಕ್ಕೆ ರಾಜ್ಯಪಾಲರು ಹಾಗೂ ಉನ್ನತ ಶಿಕ್ಷಣ ಇಲಾಖೆ ಸಚಿವರು ಗೈರು ಹಾಜರಾಗಿದ್ದರು. ಕುಲಪತಿ ಪ್ರೊ. ಶರಣಪ್ಪ ಹಲಸೆ ಪದವಿ ಪ್ರದಾನ ಮಾಡಿದರು. ಹಿರಿಯ ಚಿಂತಕ ಡಾ. ಗುರುರಾಜ ಕರಜಗಿ ಅವರು ಘಟಿಕೋತ್ಸವ ಭಾಷಣ ಮಾಡಿ, ಹಣ ಮುಖ್ಯ ಆದರೆ ಹಣವೇ ಮುಖ್ಯವಲ್ಲ ಎಂದು ತಮ್ಮ ಜೀವನದ ಅನುಭವಗಳನ್ನ ಹೇಳಿದರು.

ಇದನ್ನೂ ಓದಿ: 

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ; 14 ಚಿನ್ನದ ಪದಕಗಳಿಸಿ ಸಂಭ್ರಮಿಸಿದ ವಿದ್ಯಾರ್ಥಿ

ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಹೆಚ್ಚಾಯಿತು ಅನೈತಿಕ ಚಟುವಟಿಕೆಗಳ ಆರೋಪ; ಎಲ್ಲಾ ತಿಳಿದರು ಮೌನವಾಗಿದೆ ಆಡಳಿತ ಮಂಡಳಿ

(Davanagere University Young lady won gold medal without losing persistence even though bleeding in the brain)

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ