AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಕಾಯಿಲೆಗಳು ಬಾರದಿರಲಿ ಅಂತ ದಾವಣಗೆರೆಯಲ್ಲಿ ವಿಶಿಷ್ಟ ಆಚರಣೆ: ಅಜ್ಜಿ ಹಬ್ಬ 

ಭಾರತದಲ್ಲಿ ಪ್ರತಿಯೊಂದು ಆಚರಣೆಯ ಹಿಂದೆ ಒಂದೊಂದು ಕಾರಣ ಇರುತ್ತದೆ. ಮಳೆಗಾಲದ ಸಮಯದಲ್ಲಿ ಸಾಂಕ್ರಾಮಿಕ ರೋಗಗಳು ಜಾಸ್ತಿ. ಇಂತಹ ರೋಗಗಳ ನಿಯಂತ್ರಣಕ್ಕೆ ದಾವಣಗೆರೆ ನಗರದ ನಿಟ್ಟುವಳ್ಳಿ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶಿಷ್ಟ ಹಬ್ಬ ಆಚರಿಸಲಾಗುತ್ತದೆ. ಅದು ಯಾವ ಅಬ್ಬ? ಯಾವ ಕಾರಣಕ್ಕೆ ಮಾಡಲಾಗುತ್ತದೆ? ಇಲ್ಲಿದೆ ವಿವರ

ಮಕ್ಕಳಿಗೆ ಕಾಯಿಲೆಗಳು ಬಾರದಿರಲಿ ಅಂತ ದಾವಣಗೆರೆಯಲ್ಲಿ ವಿಶಿಷ್ಟ ಆಚರಣೆ: ಅಜ್ಜಿ ಹಬ್ಬ 
ದಾವಣಗೆರೆಯಲ್ಲಿ ದೇವಿಗೆ ಅಜ್ಜಿ ಪೂಜೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Jul 19, 2025 | 4:40 PM

Share

ದಾವಣಗೆರೆ, ಜುಲೈ 19: ದಾವಣಗೆರೆ (Davanagere) ನಗರದ ನಿಟ್ಟುವಳ್ಳಿ ದುರ್ಗಾಂಬಿಕಾ ದೇವಸ್ಥಾನದಲ್ಲಿ ಆಷಾಢ ಮಾಸದಲ್ಲಿ (Ashada Masa) ಪ್ರತಿದಿನ ವಿಶೇಷ ಪೂಜೆಗಳು ನೆರವೇರಿದವು. ಆದರೆ, ಆಷಾಢ ಮಾಸದ ಕೊನೆ ಶುಕ್ರವಾರ ಮತ್ತು ಶನಿವಾರ (ಜು.18, 19) ಎರಡು ದಿನಗಳಕಾಲ ದೇವಸ್ಥಾನದಲ್ಲಿ ನಡೆದ ಪೂಜೆ ಮಾತ್ರ ಭಾರಿ ವಿಶೇಷತೆಯಿಂದ ಕೂಡಿದೆ. ಈ ಪೂಜೆಗೆ ಅಜ್ಜಿ ಹಬ್ಬ ಎಂದು ಕರೆಯಲಾಗುತ್ತದೆ. ಅಜ್ಜಿ ಹಬ್ಬ ಮಾಡಲು ಕಾರಣವೂ ಇದೆ. ಮಕ್ಕಳ ಮೈಮೇಲೆ ಗುಳ್ಳೆಗಳು ಆಗುವುದು, ಜ್ವರ ಬರುವುದನ್ನು ತಪ್ಪಿಸಲು ಎರಡು ದಿನಗಳ ಕಾಲ ದೇವಿಗೆ ವಿಶೇಷ ಪೂಜೆ ಮಾಡುತ್ತಾರೆ.

ದೇವಸ್ಥಾನದ ಆವರಣದಲ್ಲಿಯೇ ಒಂದು ದೇವಿ ಮೂರ್ತಿ ತಯಾರಿಸಿ ಇಡಲಾಗಿರುತ್ತದೆ. ಈ ಮೂರ್ತಿಗೆ ಮಹಿಳೆಯರು ವಿಶೇಷ ಪೂಜೆ ಸಲ್ಲಿಸುತ್ತಾರೆ. ಬಳಿಕ ಬಾಳೆ ಎಲೆಯಲ್ಲಿ ತಂದ ಸಿಹಿ ಪದಾರ್ಥಗಳ ನೈವದ್ಯೆ ಅರ್ಪಿಸುತ್ತಾರೆ. ಬಳಿಕ ದೇವಿಗೆ ಪ್ರದಕ್ಷಿಣೆ ಹಾಕಿ, 20 ಸುತ್ತು ದಾರ ಸುತ್ತುತ್ತಾರೆ. ಹೀಗೆ ಮಾಡುವುದರಿಂದ ಮಕ್ಕಳಿಗೆ ಕಾಯಿಲೆ ಬರಲ್ಲ ಎಂಬುದು ಇಲ್ಲಿನ ಜನರ ನಂಬಿಕೆಯಾಗಿದೆ.

ಇದನ್ನೂ ನೋಡಿ: ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ

ಭಾರತದಲ್ಲಿ ಪ್ರತಿಯೊಂದು ಕಾರಣಕ್ಕೂ ಒಂದೊಂದು ಹಬ್ಬಗಳಿವೆ. ಮಳೆಗಾಲದಲ್ಲಿ ಮಕ್ಕಳಿಗೆ ರೋಗ ಬರಬಾರದು ಎನ್ನುವುದಕ್ಕೆ ರೀತಿ ಹಬ್ಬ ಮಾಡಲಾಗುತ್ತಿದೆ. ವಿಶೇಷವಾಗಿ ಮಧ್ಯ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂತಹ ಅಜ್ಜಿ ಹಬ್ಬ ಪ್ರಸಿದ್ಧಯಾಗಿದೆ. ಇದು ಜನರ ನಂಬಿಕೆ ಮತ್ತು ತಮ್ಮ ಮಕ್ಕಳ ಆರೋಗ್ಯ ಚೆನ್ನಾಗಿರಲಿ ಅಂತ ಈ ರೀತಿ ಮಾಡುತ್ತಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:34 pm, Sat, 19 July 25

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?