Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬೊಬ್ಬರಾಗಿ ಸುರಕ್ಷಿತವಾಗಿ ಮನೆ ಸೇರಿದ ದಾವಣಗೆರೆಯ 22 ಹಕ್ಕಿಪಿಕ್ಕಿ ಜನರು

ಮಧ್ಯ ಆಫ್ರಿಕಾದ ಗಬಾನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ದಾವಣಗೆರೆ ಮತ್ತು ಶಿವಮೊಗ್ಗದ 22 ಹಕ್ಕಿಪಿಕ್ಕಿ ಜನರು ಸುರಕ್ಷಿತವಾಗಿ ತಮ್ಮ ಸ್ವಗ್ರಾಮಗಳಿಗೆ ಮರಳಿದ್ದಾರೆ. ಗಿಡಮೂಲಿಕೆ ಔಷಧಿ ಮಾರಾಟಕ್ಕೆ ಹೋಗಿದ್ದ ಅವರು, ಹೊಸ ಸರ್ಕಾರದ ವಲಸಿಗ ವಿರೋಧಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಭಾರತ ಸರ್ಕಾರದ ಸಹಾಯದಿಂದ ಅವರು ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ.

ಒಬ್ಬೊಬ್ಬರಾಗಿ ಸುರಕ್ಷಿತವಾಗಿ ಮನೆ ಸೇರಿದ ದಾವಣಗೆರೆಯ 22 ಹಕ್ಕಿಪಿಕ್ಕಿ ಜನರು
ಸ್ವಗ್ರಾಮಕ್ಕೆ ವಾಪಸ್ ಆದ ಹಕ್ಕಿಪಿಕ್ಕಿಗಳು
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on:Mar 29, 2025 | 11:24 AM

ದಾವಣಗೆರೆ, ಮಾರ್ಚ್​ 29: ಮಧ್ಯ ಆಫ್ರಿಕಾದ ಗಬಾನ್ (Gabon) ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ನಗರದ ಹಕ್ಕಿಪಿಕ್ಕಿಯ (Hakkipikki) ಒಟ್ಟು 22 ಜನರು ಸುರಕ್ಷಿತವಾಗಿ ಸ್ವಗ್ರಾಮಕ್ಕೆ ವಾಪಸ್ಸ್ ಆಗಿದ್ದಾರೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಗೋಪನಾಳ್ ಗ್ರಾಮದ ಹತ್ತು ನಿವಾಸಿಗಳು ಸೇರಿ ಶಿವಮೊಗ್ಗದ 12 ಜನರು ಗಬಾನ್ ರಾಜಧಾನಿ ಲಿಬ್ರೆವಿಲ್ಲೆನಲ್ಲಿ ಗಿಡಮೂಲಿಕೆ ಔಷಧಿ ಮಾರಾಟ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದರು. ಹೊಸ ಸರ್ಕಾರ ಬಂದ ಹಿನ್ನೆಲೆ ವಲಸಿಗರನ್ನ ಹೊರಹಾಕಲು ಆದೇಶಿಸಲಾಗಿತ್ತು. ಹೀಗಾಗಿ ಹಕ್ಕಿಪಿಕ್ಕಿಗಳು‌ ಸ್ವದೇಶಕ್ಕೆ ವಾಪಸ್ಸಾಗಿದ್ದಾರೆ.

ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗೋಪನಾಳ್ ಹಾಗೂ ಅಸ್ತಾಪನಹಳ್ಳಿ ಗ್ರಾಮದ 22 ಜನರು ಇತ್ತೀಚೆಗೆ ಮಂಬೈಗೆ ಆಗಮಿಸಿದ್ದರು. ಇಂದು ತಮ್ಮ ಸ್ವಗ್ರಾಮಕ್ಕೆ ಬಂದು ತಲುಪಿದ್ದಾರೆ. ಆಫ್ರೀಕಾದ ಗಬಾನ್ ರಾಷ್ಟ್ರದ ರಾಜಧಾನಿಯಲ್ಲಿ ರಾಜಕೀಯ ಹೊಸ ನೀತಿಯಿಂದ ವಿದೇಶಿಗರನ್ನು ದೇಶ ಬಿಟ್ಟು ಹೋಗುವಂತೆ ತಾಕೀತು ಮಾಡಿತ್ತು ಹಾಗಾಗಿ ಹಕ್ಕಿಪಿಕ್ಕಿಗಳು ಸಂಕಷ್ಟಕ್ಕೆ ಸಿಲುಕಿದ್ದರು.

ಇದನ್ನೂ ಓದಿ: ಉದ್ಯೋಗ ಅರಸಿ ಮಧ್ಯ ಆಫ್ರಿಕಾಕ್ಕೆ ತೆರಳಿರುವ ಕರ್ನಾಟಕದ ನಾಟಿ ವೈದ್ಯರು ಸಂಕಷ್ಟದಲ್ಲಿ, ಬಂಧನ?

ಇದನ್ನೂ ಓದಿ
Image
ದಾವಣಗೆರೆ: ತುಂಗಭದ್ರೆಯ ಒಡಲು ಖಾಲಿ ಖಾಲಿ, ಪವಿತ್ರ ನದಿಗೆ ಕಲುಷಿತ ನೀರು
Image
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
Image
ಉದ್ಯೋಗ ಅರಸಿ ಮಧ್ಯ ಆಫ್ರಿಕಾಕ್ಕೆ ತೆರಳಿರುವ ಕನ್ನಡಿಗರು ಸಂಕಷ್ಟದಲ್ಲಿ
Image
ದಾವಣಗೆರೆ ಮಠದಲ್ಲಿದೆ ​ನಟ ಸುನಿಲ್​ ಶೆಟ್ಟಿ ಕಳುಹಿಸಿದ ರೋಬೋಟಿಕ್​ ಆನೆ

ಪಾಸ್ ಪೋರ್ಟ್ ಕಸಿದುಕೊಂಡು ಅಲ್ಲಿನ ಪೊಲೀಸರು ತೊಂದರೆ ಮಾಡಿದ್ದರು. ಬಳಿಕ ಭಾರತೀಯ ರಾಯಭಾರಿ ಕಚೇರಿಗೆ ಮಾಹಿತಿ ನೀಡಲಾಗಿತ್ತು. ಆ ಮೂಲಕ ಇದೀಗ ಹಕ್ಕಿಪಿಕ್ಕಿಗಳು ಸುರಕ್ಷಿತವಾಗಿ ತಮ್ಮ ತಮ್ಮ ಊರಿಗೆ ಮರಳಿದ್ದಾರೆ.

ಬುಡಕಟ್ಟು ಅಧಿಕಾರಿ ನವೀನ್ ಮಠದ ಹೇಳಿದ್ದಿಷ್ಟು 

ದಾವಣಗೆರೆಯ ಜಿಲ್ಲಾ ಬುಡಕಟ್ಟು ಅಧಿಕಾರಿ ನವೀನ್ ಮಠದ ಅವರ ಪ್ರಕಾರ, ಹಕ್ಕಿಪಿಕ್ಕಿ ಸಮುದಾಯವು ಗಿಡಮೂಲಿಕೆ ಔಷಧಿ ಮಾರಾಟ ಮಾಡಲು ವಿದೇಶಗಳಿಗೆ ಪ್ರಯಾಣಿಸುವುದು ಅವರ ದೀರ್ಘಕಾಲದ  ಸಂಪ್ರದಾಯವಾಗಿದೆ. ಹಾಗಾಗಿ ಅವರು ಸುಮಾರು ಎರಡ್ಮೂರು ತಿಂಗಳ ಹಿಂದೆ ಮಧ್ಯ ಆಫ್ರಿಕಾದ ದೇಶವಾದ ಗಬಾನ್​ಗೆ ಹೋಗಿದ್ದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಾವಣಗೆರೆ ಮಠದಲ್ಲಿದೆ ಬಾಲಿವುಡ್​ ನಟ ಸುನಿಲ್​ ಶೆಟ್ಟಿ ಕಳುಹಿಸಿದ ರೋಬೋಟಿಕ್​ ಆನೆ: ಹೇಗಿದೆ ನೋಡಿ

ಜೀವನೋಪಾಯಕ್ಕಾಗಿ ವಿದೇಶಗಳಿಗೆ ಪ್ರಯಾಣಿಸುವ ಬುಡಕಟ್ಟು ಸಮುದಾಯಗಳ ದುರ್ಬಲತೆಯ ಬಗ್ಗೆ ಈ  ಘಟನೆ ಕಳವಳ ಉಂಟುಮಾಡಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ  ಉತ್ತಮ ಜಾಗೃತಿ ಮತ್ತು ಸೂಕ್ತ ವ್ಯವಸ್ಥೆಗಳನ್ನು ಒದಗಿಸುವಂತೆ ಹಕ್ಕಪಿಕ್ಕಿ ಸಮುದಾಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ನಾವು ಈಗಾಗಲೇ ನಮ್ಮ ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇವೆ. ನಾವು ಅವರಿಗೆ ಹೇಗೆ ಸಹಾಯ ಮಾಡಬಹುದೆಂದು ತಿರ್ಮಾನಿಸುತ್ತೇವೆ ಎಂದು ನವೀನ್ ಮಠದ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:23 am, Sat, 29 March 25

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ