ಕೊನೆಗೂ ಬಗೆಹರಿದ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ: ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಟಿಕೆಟ್

ದಾವಣಗೆರೆ ಬೈ-ಎಲೆಕ್ಷನ್ ಟಿಕೆಟ್ ಗೊಂದಲ ಬಗೆಹರಿದಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸುರ್ಜೇವಾಲಾ ಅವರ ಸಂಧಾನ ಯಶಸ್ವಿಯಾಗಿದ್ದು, ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಅಂತಿಮಗೊಂಡಿದೆ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರ್‌ಗೆ ಕಾಂಗ್ರೆಸ್ ಬಿ-ಫಾರಂ ನೀಡಲು ನಿರ್ಧರಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಕಣಕ್ಕಿಳಿಯಲಿದ್ದಾರೆ.

ಕೊನೆಗೂ ಬಗೆಹರಿದ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ: ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಟಿಕೆಟ್
ಸಮರ್ಥ್ ಶಾಮನೂರ್‌
Edited By:

Updated on: Mar 21, 2026 | 11:03 PM

ಬೆಂಗಳೂರು, ಮಾರ್ಚ್​ 21: ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಹೈಕಮಾಂಡ್​​ಗೆ ದೊಡ್ಡ ತಲೆನೋವಾಗಿದ್ದ ದಾವಣಗೆರೆ ದಕ್ಷಿಣ ಟಿಕೆಟ್​​ ಗೊಂದಲ ಕೊನೆಗೂ ಬಗೆಹರಿದಿದೆ. ಶಾಮನೂರ ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರ್​​​​​ಗೆ (Samarth Shamanur)​ ಕಾಂಗ್ರೆಸ್ ಹೈಕಮಾಂಡ್​​ ಟಿಕೆಟ್ ಘೋಷಣೆ ಮಾಡಿದೆ. ಆ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​ ಮತ್ತೆ ಶಾಮನೂರ ಕುಟುಂಬದ ಪಾಲಾಗಿದೆ.

ಸತತ ಆರು ಸಲ ಶಾಸಕರಾಗಿದ್ದ ಶಾಮನೂರ ಶಿವಶಂಕರಪ್ಪ ನಿಧನದಿಂದ ಕ್ಷೇತ್ರ ತೆರವಾಗಿತ್ತು. ಸಚಿವ ಜಮೀರ ಅಹ್ಮದ್ ಖಾನ್ ಸೇರಿದಂತೆ ಪ್ರಮುಖ ಅಲ್ಪ ಸಂಖ್ಯಾತರಿಗೆ ಟಿಕೆಟ್​ಗೆ ಪಟ್ಟು ಬೆನ್ನಲ್ಲೇ ಇದೀಗ ಶಾಮನೂರ ಕುಟುಂಬಕ್ಕೆ ಟಿಕೆಟ್​​ ಒಲಿದಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ಸುರ್ಜೇವಾಲ ಸೇರಿದಂತೆ ನಾಯಕರೊಂದಿಗೆ ನಡೆದ ಸುದೀರ್ಘ ಸಂಧಾನ ಯಶಸ್ವಿಯಾಗಿದೆ. ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಸಚಿವ ಜಮೀರ್ ಅಹ್ಮದ್ ಸೇರಿ ಹಲವು ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.

ಮಗನಿಗೆ ಟಿಕೆಟ್​ ಕೊಡಿಸುವಲ್ಲಿ ಯಶಸ್ವಿಯಾದ ಸಚಿವ ಮಲ್ಲಿಕಾರ್ಜುನ್

ಟಿಕೆಟ್​ ಗದ್ದಲದ ಹಿನ್ನೆಲ ಸಚಿವ ಎಸ್​ಎಸ್ ಮಲ್ಲಿಕಾರ್ಜುನ್​ ಇಂದು ದಿಢೀರ್ ಬೆಂಗಳೂರಿಗೆ ತೆರಳಿದ್ದರು. ಕೊನೆಗೂ ತಂದೆ ಶಾಮನೂರ ಶಿವಶಂಕರಪ್ಪ ರೀತಿಯಲ್ಲಿ ಪುತ್ರ ಸಮರ್ಥ್​ ಶಾಮನೂರಗೆ ಟಿಕೆಟ್ ಕೊಡಿಸುವಲ್ಲಿ ಸಚಿವ ಮಲ್ಲಿಕಾರ್ಜುನ್​ ಯಶಸ್ವಿ ಆಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ನಿಂದ ಸಮರ್ಥ್​​ ಶಾಮನೂರು ಮಲ್ಲಿಕಾರ್ಜುನ್ ಅವರಿಗೆ ಬಿ ಫಾರಂ ನೀಡಲಾಗಿದೆ. ಮಾರ್ಚ್ 23 ರಂದು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಮ್ಮ ಸಮುದಾಯಕ್ಕೆ ಟಿಕೆಟ್​​ ಕೊಡಬೇಕು ಅಂತ ಮುಸ್ಲಿಂ ಸಮುದಾಯದ ನಾಯಕರು ಆಗ್ರಹಿಸಿದ್ದರು. ಬಾಗಲಕೋಟೆಯಲ್ಲಿ ಮೇಟಿ ಕುಟುಂಬಕ್ಕೆ ಟಿಕೆಟ್ ನೀಡೋದಾದ್ರೆ, ದಾವಣಗೆರೆಯಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಬೇಕು ಅನ್ನೋದು ಶಾಮನೂರು ಕುಟುಂಬ ಮತ್ತು ಬೆಂಬಲಿಗರ ವಾದವಾಗಿತ್ತು. ಹೀಗಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​ ಕಗ್ಗಂಟಾಗಿತ್ತು.

ಇದನ್ನೂ ಓದಿ: ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಭದ್ರಕೋಟೆಯಲ್ಲೇ ಅಹಿಂದ ದಾಳ ಉರುಳಿಸಿದ ಬಿಜೆಪಿ! ಜಾತಿ ಲೆಕ್ಕಾಚಾರ ಹೇಗಿದೆ ಗೊತ್ತೇ?

ಇನ್ನು ಟಿಕೆಟ್ ಘೋಷಣೆಗೂ ಮುನ್ನವೇ ನಿನ್ನೆ ನಾಮಪತ್ರ ಸಮರ್ಥ್ ಶಾಮನೂರ್​​ ನಾಮಪತ್ರ ಸಲ್ಲಿಸಿದ್ದರು. ದಾವಣಗೆರೆಯ ನಿಟುವಳ್ಳಿ ದುರ್ಗಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಪೂಜೆ ಬಳಿಕ ಪ್ರಮುಖರನ್ನ ಭೇಟಿ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:31 pm, Sat, 21 March 26

Follow Us