AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಡ್ಯಾಂ ನಿಂದ ತುಂಗಭದ್ರಾಗೆ ನೀರು ಬಿಟ್ಟರೆ ದಾವಣಗೆರೆ ಶಿವಮೊಗ್ಗದಲ್ಲಿ ಬಿಜೆಪಿ ಸರ್ವನಾಶ; ರೈತರ ಎಚ್ಚರಿಕೆ

ಶಿವಮೊಗ್ಗದ ಭದ್ರಾ ಡ್ಯಾಂ ನಿಂದ ಹೊಸಪೇಟೆ ತುಂಗಭದ್ರ ಡ್ಯಾಂಗೆ ಎಳು ಟಿಎಂಸಿ ನೀರು ಬಿಡುವಂತೆ ಆಗ್ರಹಿಸಿದ್ದು, ಇದಕ್ಕೆ ಭಾರತೀಯ ರೈತ ಒಕ್ಕೂಟ ಸಂಘದವರು ಭದ್ರಾ ಡ್ಯಾಂ ನಿಂದ ತುಂಗಭದ್ರ ಡ್ಯಾಂ ನೀರು ಹರಿಸಿದರೆ ದಾವಣಗೆರೆ, ಶಿವಮೊಗ್ಗದ ರೈತರು ಬೆಳೆದ ಅಡಿಕೆ, ತೆಂಗು ನಾಶವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭದ್ರಾ ಡ್ಯಾಂ ನಿಂದ ತುಂಗಭದ್ರಾಗೆ ನೀರು ಬಿಟ್ಟರೆ ದಾವಣಗೆರೆ ಶಿವಮೊಗ್ಗದಲ್ಲಿ ಬಿಜೆಪಿ ಸರ್ವನಾಶ; ರೈತರ ಎಚ್ಚರಿಕೆ
ಭದ್ರಾ ಡ್ಯಾಂ ನಿಂದ ತುಂಗಭದ್ರ ಡ್ಯಾಂಗೆ ನೀರು ಹರಿಸಿದಂತೆ ರೈತರ ಆಗ್ರಹ
TV9 Web
| Edited By: |

Updated on:Feb 25, 2023 | 3:07 PM

Share

ದಾವಣಗೆರೆ: ತುಂಗಭದ್ರ ಅಚ್ಚಕಟ್ಟು ಪ್ರದೇಶದ ಜನ ಪ್ರತಿನಿಧಿಗಳು ಶಿವಮೊಗ್ಗದ ಭದ್ರಾ ಡ್ಯಾಂ ನಿಂದ ಹೊಸಪೇಟೆ ತುಂಗಭದ್ರ ಡ್ಯಾಂಗೆ ಎಳು ಟಿಎಂಸಿ ನೀರು ಬಿಡುವಂತೆ ಆಗ್ರಹಿಸಿದ್ದಾರೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ ದಾವಣಗೆರೆ ಭಾರತೀಯ ರೈತ ಒಕ್ಕೂಟ ಸಂಘದವರು ಭದ್ರಾ ಡ್ಯಾಂ ನಿಂದ ತುಂಗಭದ್ರ ಡ್ಯಾಂ ನೀರು ಹರಿಸದಂತೆ ಆಗ್ರಹಿಸಿದ್ದು, ಭದ್ರಾ ಡ್ಯಾಂ ನಲ್ಲಿ ಈಗ 47 ಟಿಎಂಸಿ ನೀರಿದೆ. 10 ಸಿಎಂಸಿ ನೀರು ಡೆಡ್ ಸ್ಟೋರೇಜ್, ಇನ್ನು 7 ಟಿಎಂಸಿ ನೀರು ಕುಡಿಯುವ ನೀರಿಗೆ ಬೇಕು. ಇಂತಹ ಪರಿಸ್ಥಿತಿಯಲ್ಲಿ ತುಂಗಭದ್ರ ಡ್ಯಾಂ ಗೆ ಎಳು ಟಿಎಂಸಿ ನೀರು ಬಿಟ್ಟರೇ ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಯ ಅಡಿಕೆ, ತೆಂಗು ಹಾಗೂ ಭತ್ತದ ಬೆಳೆ ಸರ್ವ ನಾಶ ಆಗಲಿದೆ ಎಂದು ಭಾರತೀಯ ರೈತ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಾಮನೂರ ಲಿಂಗರಾಜ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಹಿಂದೆ ಕೂಡ ಅನೇಕ ಬಾರಿ ಕೃಷಿಗಾಗಿ ತುಂಗಭದ್ರಾ ಜಲಾಶಯಕ್ಕೆ ಆರು ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ ಭದ್ರಾ ಮೇಲ್ದಂಡೆ ಯೋಜನೆಗೆ ಭದ್ರಾ ಜಲಾಶಯದಿಂದ ನೀರು ಕೇಳಿತ್ತು, ಸರಕಾರ ಒಂದು ಹನಿ ನೀರನ್ನು ನಮ್ಮ ಡ್ಯಾಂನಿಂದ ಹರಿಸಬಾರದು ಎಂದು ಭದ್ರಾ ಜಲಾಶಯ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳಿ ಮತ್ತು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿತ್ತು. ಇದೀಗ ಮತ್ತೆ ತುಂಗಭದ್ರ ಡ್ಯಾಂಗೆ ಎಳು ಟಿಎಂಸಿ ನೀರು ಬಿಡುವಂತೆ ಆಗ್ರಹಿಸಿದ್ದಾರೆ. ಈಗ ಸಧ್ಯ 47 ಟಿಎಂಸಿ ನೀರಿದೆ. ಅದರಲ್ಲಿ 10 ಟಿಎಂಸಿ ಡೆಡ್​ ವೆಸ್ಟ್​ ವಾಸ್ತವ ಹೀಗಿರುವಾಗ ತುಂಗಭದ್ರಾ ಜಲಾಶಯಕ್ಕೆ 7 ಟಿಎಂಸಿ ನೀರು ಬಿಟ್ಟರೆ ಇಲ್ಲಿನ ರೈತರು ಬೆಳೆದ ಬೆಳೆಗಳು ನಾಶವಾಗಲಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:04 am, Thu, 9 February 23

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ