AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನಿಗಾಗಿ ಗಂಡನ ಬಿಟ್ಟು ಬಂದ ಇಬ್ಬರು ಮಕ್ಕಳ ತಾಯಿ: ಸರ್ಕಾರಿ ಕೆಲಸ ಸಿಗುತ್ತಿದ್ದಂತೆಯೇ ಉಲ್ಟಾ ಹೊಡೆದ ಪ್ರೇಮಿ!

ದಾವಣಗೆರೆ ನಗರದ ಪ್ರಸಿದ್ಧ ಪಾರ್ಕ್​ನಲ್ಲಿ ಜನ ಸಾಗರವೇ ಸೇರಿತ್ತು. ಹೆಚ್ಚಾಗಿ ಮಧ್ಯಾಹ್ನದ ವೇಳೆ ಪ್ರೇಮಿಗಳು ಮನ ಬಿಚ್ಚಿ ಮಾತನಾಡುವ ಆ ಪಾರ್ಕ್​​ನಲ್ಲಿ ಬುಧವಾರ ಹೊಡಿ ಬಡಿ ಎಂಬ ಸದ್ದು ಕೇಳಿ ಬರುತ್ತಿತ್ತು. ವ್ಯಕ್ತಿಯೊಬ್ಬ ದುಷ್ಟನಂತೆ ಮಹಿಳೆ ಮೇಲೆ ಹಲ್ಲೆ ಮಾಡುತ್ತಿದ್ದ. ಕೆಲವರು ಜಗಳ ಬಿಡಿಸಲು ಯತ್ನಿಸುತ್ತಿದ್ದರು. ಮಹಿಳೆ ನೋಡಿದರೆ, ಆತನನ್ನು ಪ್ರೀತಿಸಿ ಗಂಡನನ್ನು ಬಿಟ್ಟು ಇಬ್ಬರು ಮಕ್ಕಳೊಂದಿಗೆ ಬಂದವಳು! ಏನಿದು ಲವ್ ಕಹಾನಿ? ತಿಳಿಯಲು ಮುಂದೆ ಓದಿ.

ಪ್ರಿಯಕರನಿಗಾಗಿ ಗಂಡನ ಬಿಟ್ಟು ಬಂದ ಇಬ್ಬರು ಮಕ್ಕಳ ತಾಯಿ: ಸರ್ಕಾರಿ ಕೆಲಸ ಸಿಗುತ್ತಿದ್ದಂತೆಯೇ ಉಲ್ಟಾ ಹೊಡೆದ ಪ್ರೇಮಿ!
ನವೀನ್ ಹಾಗೂ ಮಹಿಳೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Sep 11, 2025 | 7:58 AM

Share

ದಾವಣಗೆರೆ, ಸೆಪ್ಟೆಂಬರ್ 11: ಹುಬ್ಬಳ್ಳಿ ಹುಡುಗ ನವೀನ್ ಎಂಬಾತ ಮೂರು ವರ್ಷಗಳ ಹಿಂದೆ ದಾವಣಗೆರೆಗೆ (Davanagere) ಬಂದು ಪೇಪರ್ ವ್ಯಾನ್ ಓಡಿಸುತ್ತಿದ್ದ. ಆಗ ಹರಪನಹಳ್ಳಿ ಮೂಲದ ಮಹಿಳೆಯೊಬ್ಬಳ ಪರಿಚಯವಾಗಿದೆ. ಆಕೆ ಎರಡು ಮಕ್ಕಳ ತಾಯಿ. ಆದರೂ ಅವರಿಬ್ಬರ ನಡುವೆ ಪರಿಚಯವಾಗಿ, ನಂತರ ಪ್ರೀತಿ ಮೂಡಿತು. ಇಬ್ಬರು ಮಕ್ಕಳ ತಾಯಿಯಾಗಿದ್ದರೂ ಆ ಮಹಿಳೆ ಪ್ರಿಯಕರನಿಗಾಗಿ ಪತಿಯನ್ನೇ ಬಿಟ್ಟು ಬಂದಳು. ಮಕ್ಕಳನ್ನೂ ಕರೆದುಕೊಂಡೇ ಬಂದು ಬಿಟ್ಟಿದ್ದಳು!

ಲವ್ ಕಹಾನಿಗೆ ಸಿಕ್ತು ಬಿಗ್ ಟ್ವಿಸ್ಟ್!

ಇಬ್ಬರು ಮಕ್ಕಳ ತಾಯಿ ಹಾಗೂ ಯುವಕನ ಪ್ರೇಮ ಪ್ರಕರಣಕ್ಕೆ ತಿರುವು ದೊರೆಯಲು ಅದೊಂದು ಬೆಳವಣಿಗೆ ಸಾಕಾಯಿತು. ನವೀನ್​ಗೆ ಕೆಎಸ್​ಆರ್​ಟಿಸಿಯಲ್ಲಿ ಉದ್ಯೋಗ ದೊರೆತಿದೆ. ಒಳ್ಳೆಯ ಉದ್ಯೋಗ ದೊರೆಯುತ್ತಿದ್ದಂತೆಯೇ ಆತನಿಗೆ ಮಹಿಳೆ ಬೇಡವಾಗಿದ್ದಾಳೆ. ಇದೇ ವಿಚಾರವಾಗಿ ಇಬ್ಬರ ನಡುವೆ ದಾವಣಗೆರೆ ನಗರದ ಶಾಮನೂರ ರಸ್ತೆಯ ಟ್ಯಾಂಕ್ ಪಾರ್ಕ್​​ನಲ್ಲಿ ಭಾರಿ ಜಗಳ, ಹೊಡೆದಾಟ ನಡೆದಿದೆ. ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ.

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಮಹಿಳೆ

ಹರಪನಹಳ್ಳಿ ಮೂಲದ ಮಹಿಳೆ ನವೀನ್​ನನ್ನೇ ನಂಬಿ ಬಂದಿದ್ದು, ಪತಿಯಿಂದ ವಿಚ್ಛೇದನಕ್ಕೂ ಅರ್ಜಿ ಸಲ್ಲಿಸಿದ್ದಾಳೆ. ಆದರೆ, ಈಗ ನವೀನ್ ಕೆಎಸ್​ಆರ್​ಟಿಸಿಯಲ್ಲಿ ಕೆಲಸ ಸಿಗುತ್ತಿದ್ದಂತೆಯೇ ಉಲ್ಟಾ ಹೊಡೆದಿದ್ದಾನೆ. ನನ್ನ ಚಿನ್ನಾಭರಣ ಹಾಗೂ ಹಣ ಪಡೆದು ಈಗ ವಂಚಿಸುತ್ತಿದ್ದಾನೆ ಎಂದು ಆರೋಪಿಸಿರುವ ಮಹಿಳೆ ಇದೀಗ ನ್ಯಾಯ ಬೇಕೆಂದು ದಾವಣಗೆರೆ ಬಡಾವಣೆ ಠಾಣೆ ‌ಪೊಲೀಸರ ಮೊರೆ ಹೋಗಿದ್ದಾಳೆ.

ಇದನ್ನೂ ಓದಿ: ಕರ್ನಾಟಕದ ಮಾಜಿ ಶಾಸಕರಿಗೆ ಡಿಜಿಟಲ್‌ ಅರೆಸ್ಟ್: 30 ಲಕ್ಷ ರೂ ಪಂಗನಾಮ!

ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರೇಮ ಪ್ರಕರಣ

ಕಳೆದ ಹಲವು ದಿನಗಳಿಂದ ಇಬ್ಬರ ನಡುವೆ ಜಗಳ ಆಗುತ್ತಲೇ ಇದೆ. ಆದರೆ ಬುಧವಾರ ಮಾತ್ರ ಸಾರ್ವಜನಿಕವಾಗಿಯೇ ಪಾರ್ಕ್​​ನಲ್ಲೇ ಹೊಡೆದಾಡಿಕೊಂಡ ಕಾರಣ ಪ್ರಕರಣ ಬೆಳಕಿಗೆ ಬಂದಿದೆ. ಇಬ್ಬರನ್ನೂ ಬಡಾವಣೆ ಠಾಣೆ ಪೊಲೀಸರು ಕರೆದುಕೊಂಡು ಹೋಗಿ ವಿಚಾರಣೆ ಮಾಡಿದ್ದಾರೆ. ಆತ ತನಗೆ ವಂಚನೆ ಮಾಡುತ್ತಿದ್ದಾನೆ ಎಂದು ಪೊಲೀಸರ ಬಳಿ ಮಹಿಳೆ ದೂರಿದ್ದಾಳೆ. ಆದರೆ, ಆತ ಮದ್ಯಪಾನದ ಅಮಲಿನಲ್ಲಿರುವುದರಿಂದ ಮರುದಿನ ವಿಚಾರಣೆ ಮಾಡುವುದಾಗಿ ಪೊಲೀಸರು ಹೇಳಿ ಕಳುಹಿಸಿದ್ದಾರೆ. ಮುಂದೇನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:55 am, Thu, 11 September 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್