AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ವ್ಯಕ್ತಿಯನ್ನು ಕೊಂದ ಮಂಗ ಕೊನೆಗೂ ಸೆರೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಮಂಗಗಳ ದಾಳಿಗೆ ಪಿಎಲ್​ಡಿ ಬ್ಯಾಂಕ್ ಉಪಾಧ್ಯಕ್ಷ ಸಾವನ್ನಪ್ಪಿದ್ದರು. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಮಂಗನ ಸೆರೆಗೆ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ದಾವಣಗೆರೆ: ವ್ಯಕ್ತಿಯನ್ನು ಕೊಂದ ಮಂಗ ಕೊನೆಗೂ ಸೆರೆ
ವ್ಯಕ್ತಿಯನ್ನು ಕೊಂದ ಕೋತಿಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ
TV9 Web
| Edited By: Rakesh Nayak Manchi|

Updated on: Nov 14, 2023 | 2:48 PM

Share

ದಾವಣಗೆರೆ, ನ.14: ಜಿಲ್ಲೆಯ (Davanagere) ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಪಿಎಲ್​ಡಿ ಬ್ಯಾಂಕ್ ಉಪಾಧ್ಯಕ್ಷನ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದ ಮಂಗನನ್ನು (Monkey Caught) ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಅರಕೆರೆ ಗ್ರಾಮ ನಿವಾಸಿ ಗುತ್ಯಪ್ಪ (60) ಅವರು ಕೋತಿ ದಾಳಿಗೆ ನಿನ್ನೆ ಬಲಿಯಾಗಿದ್ದರು. ಮುಂಜಾನೆ ವೇಳೆ ಮನೆಯಿಂದ ಹೊರಗೆ ಬಂದಾಗ ಮಂಗ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಗುತ್ಯಪ್ಪ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದರು.

ಇದನ್ನೂ ಓದಿ: Viral Video: ಹಗ್ಗ ಬಿಚ್ಚಿ ಕೋತಿಯನ್ನು ರಕ್ಷಿಸಿದವನನ್ನೇ ಅನುಮಾನಿಸಿದ ನೆಟ್ಟಿಗರು; ನೀವೇನಂತೀರಿ?

ಸ್ಥಳಕ್ಕೆ ಆಗಮಿಸಿದ್ದ ಹೊನ್ನಾಳಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ, ಮೃತನ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದರು. ಇದೇ ವೇಳೆ ಗ್ರಾಮಸ್ಥರೊಂದಿಗೆ ಮಾತನಾಡಿದ ರೇಣುಕಾಚಾರ್ಯ ಅವರಿಗೆ ಮಂಗನ ಹಾವಳಿಯ ಬಗ್ಗೆ ಮಾಹಿತಿ ನೀಡಿದ್ದರು.

ಮಂಗನ ದಾಳಿ ಬಗ್ಗೆ ಮಾಹಿತಿ ತಿಳಿದು ಗ್ರಾಮಕ್ಕೆ ಆಗಮಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೂಡಲೇ ಕೋತಿಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು. ಅದರಂತೆ, ಕಳೆದ ಎರಡುಗಳ ದಿನಗಳಿಂದ ಕಾರ್ಯಾಚರಣೆ ಆರಂಭಿಸಿದ್ದ ಅಧಿಕಾರಿಗಳು, ಸಿಬ್ಬಂದಿ ಗ್ರಾಮಸ್ಥರ ಸಹಾಯದೊಂದಿಗೆ ಇಂದು ಕೋತಿಯನ್ನು ಸೆರೆ ಹಿಡಿದಿದ್ದಾರೆ.

ಸದ್ಯ, ಕೋತಿಯನ್ನು ಹಿಡಿದು ಬೋನ್​ನಲ್ಲಿ ಇಡಲಾಗಿದೆ. ಇತ್ತ, ಕಾಡಿನ ಪಕ್ಕ ಗ್ರಾಮ ಇರುವುದರಿಂದ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿದ್ದು, ಗ್ರಾಮಕ್ಕೆ ರಕ್ಷಣೆ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಇದೇ ವೇಳೆ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ